ರವಿ ಪೂಜಾರಿ 
ರಾಜ್ಯ

ರವಿ ಪೂಜಾರಿ ವಿರುದ್ಧ ನ್ಯಾಯಾಲಯಕ್ಕೆ 4ನೇ ಚಾರ್ಜ್ ಶೀಟ್ ಸಲ್ಲಿಸಿದ ಸಿಸಿಬಿ

ಭೂಗತ ಪಾತಕಿ ‌ರವಿ ಪೂಜಾರಿ ವಿರುದ್ಧ ಸಿಸಿಬಿ ಪೊಲೀಸರು ಶುಕ್ರವಾರ ನ್ಯಾಯಾಲಯಕ್ಕೆ ಮತ್ತೊಂದು‌ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

ಬೆಂಗಳೂರು: ಭೂಗತ ಪಾತಕಿ ‌ರವಿ ಪೂಜಾರಿ ವಿರುದ್ಧ ಸಿಸಿಬಿ ಪೊಲೀಸರು ಶುಕ್ರವಾರ ನ್ಯಾಯಾಲಯಕ್ಕೆ ಮತ್ತೊಂದು‌ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

2009ರಲ್ಲಿ ರವಿ ಪೂಜಾರಿ ಇಂದಿರಾನಗರದ ಬಳಿಯ ಖಾಸಗಿ ಚಾನಲ್ ಮಾಲೀಕ ಜಮಾಲ್ ಎಂಬುವವರಿಗೆ ಬೆದರಿಕೆ ಕರೆ ಮಾಡಿ‌ ಹಣಕ್ಕೆ ಬೇಡಿಕೆ ಇಟ್ಟಿದ್ದ. ಆದರೆ, ಇದ್ಯಾವುದಕ್ಕೂ ಹೆದರದ ಮಾಲೀಕ ಹಣ ನೀಡಲು ನಿರಾಕರಿಸಿದ್ದರು. ಇದರಿಂದ ಆಕ್ರೋಶಗೊಂಡ ರವಿ ‌ಪೂಜಾರಿ, ತನ್ನ ಸಹಚರರನ್ನು ಕಳುಹಿಸಿ ಹಲ್ಲೆ ನಡೆಸಿದ್ದನು.
ಘಟನೆಗೆ ಸಂಬಂಧಿಸಿದಂತೆ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 

ನಂತರ ಪ್ರಕರಣದ ಹೆಚ್ಚಿನ ತನಿಖೆಗಾಗಿ ಸಿಸಿಬಿಗೆ ವರ್ಗಾವಣೆ ಮಾಡಲಾಗಿತ್ತು. ಪೊಲೀಸರು ರವಿ ಪೂಜಾರಿಯನ್ನು ವಿಚಾರಣೆಗೆ ಒಳಪಡಿಸಿದಾಗ ಖಾಸಗಿ ಚಾನಲ್ ಮಾಲೀಕನ ಮೇಲೆ ನಡೆದ ಹಲ್ಲೆ ಹಾಗೂ ಬೆದರಿಕೆ ವಿಚಾರ ಕುರಿತು ರವಿ ಪೂಜಾರಿ ಬಾಯ್ಬಿಟ್ಟಿದ್ದನು. ಹೀಗಾಗಿ ಈ ಬಗ್ಗೆ ಸಿಸಿಬಿ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದು, ಇದುವರೆಗೆ ನಾಲ್ಕು ಪ್ರಕರಣಗಳಲ್ಲಿ ಪೂಜಾರಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದೆ.

ಸದ್ಯ ರವಿ ಪೂಜಾರಿ ಪೊಲೀಸ್ ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಕೊರೋನಾ ಸೋಂಕು ನಿಯಂತ್ರಣಕ್ಕೆ ಬಂದ ನಂತರ ಸಿಸಿಬಿ ಪೊಲೀಸರು ಪೂಜಾರಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT