ಟಬು ರಾವ್ 
ರಾಜ್ಯ

ನಮ್ಮ ಸ್ಥಿತಿಯೇ ಹೀಗಾದರೇ, ಸಾಮಾನ್ಯ ಜನರ ಪಾಡೇನು: ಬಿಬಿಎಂಪಿ ವಿರುದ್ಧ ಗುಂಡೂರಾವ್ ಪತ್ನಿ ಆಕ್ರೋಶ

ಕಾಂಗ್ರೆಸ್ ಶಾಸಕ ದಿನೇಶ್​ ಗುಂಡೂರಾವ್​ ಅವರ ಹೆಂಡತಿ ತಬು ಗುಂಡೂರಾವ್ ಬೆಂಗಳೂರಿನಲ್ಲಿ​​ ಕೊರೋನಾ ನಿಯಂತ್ರಣದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ತಮ್ಮ ಫೇಸ್​ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಟಬು, ಬಿಬಿಎಂಪಿಯ ನಿರ್ಲಕ್ಷ್ಯ, ಬೇಜವಾಬ್ದಾರಿತನ ಪ್ರದರ್ಶನದ ಬಗ್ಗೆ ಕಿಡಿಕಾರಿದ್ದಾರೆ. 

ಬೆಂಗಳೂರು: ಕಾಂಗ್ರೆಸ್ ಶಾಸಕ ದಿನೇಶ್​ ಗುಂಡೂರಾವ್​ ಅವರ ಹೆಂಡತಿ ತಬು ಗುಂಡೂರಾವ್ ಬೆಂಗಳೂರಿನಲ್ಲಿ​​ ಕೊರೋನಾ ನಿಯಂತ್ರಣದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ತಮ್ಮ ಫೇಸ್​ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಟಬು, ಬಿಬಿಎಂಪಿಯ ನಿರ್ಲಕ್ಷ್ಯ, ಬೇಜವಾಬ್ದಾರಿತನ ಪ್ರದರ್ಶನದ ಬಗ್ಗೆ ಕಿಡಿಕಾರಿದ್ದಾರೆ. 

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತಿದಿನ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ.  ಕೊರೋನಾ ನಿಯಂತ್ರಣಕ್ಕಾಗಿ ಬಿಬಿಎಂಪಿ ಸಂಪೂರ್ಣ ಅಗತ್ಯ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಟಬು ಗುಂಡೂರಾವ್ ಗಂಭೀರ ಆರೋಪ ಮಾಡಿದ್ದಾರೆ.

ಕೊರೋನಾದಿಂದ ಉಂಟಾದ ತೊಂದರೆ ಬಗ್ಗೆ ನಮಗೆ ಸ್ವತಃ ಅನುಭವವಾಗಿದೆ. ನಮ್ಮ ಸಿಬ್ಬಂದಿಯೊಬ್ಬರಿಗೆ ಕೊರೋನಾ ಸೋಂಕು ದೃಢವಾಗಿತ್ತು. ಆದರೆ ಈ ವೇಳೆ ಬಿಬಿಎಂಪಿ ಸರಿಯಾಗಿ ಸ್ಪಂದಿಸಿಲ್ಲ, ಜೊತೆಗೆ ಬಿಬಿಎಂಪಿಯಿಂದ ಯಾವುದೇ ಕರೆ ಕೂಡ ಬಂದಿಲ್ಲ. ಬಳಿಕ ನಾವೇ ಸಿಬ್ಬಂದಿಯನ್ನು ಆಸ್ಪತ್ರೆಗೆ ಸೇರಿಸಿದ್ದೆವು. ಇಲ್ಲಿಯವರೆಗೆ ಬಿಬಿಎಂಪಿ ಸೋಂಕಿತರ ಮನೆಗಳಿಗೆ ಭೇಟಿ ನೀಡಿಲ್ಲ ಎಂದು ಟಬು ಗುಂಡೂರಾವ್ ಬಿಬಿಎಂಪಿ ಕಾರ್ಯವೈಖರಿಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಮುಂದುವರೆ ಅವರು, ಸೋಂಕಿತರ ಕುಟುಂಬ ಸದಸ್ಯರನ್ನು ಮತ್ತು ನಿಕಟ ಸಂಪರ್ಕಿತರನ್ನು ಬಿಬಿಎಂಪಿ ಸಿಬ್ಬಂದಿ ಕ್ವಾರಂಟೈನ್ ಕೂಡ ಮಾಡಿರಲಿಲ್ಲ. ಕೊನೆಗೆ ನಾವೇ ಯಾರೂ ಸಹ ನಮ್ಮನ್ನು ಭೇಟಿ ಮಾಡದಂತೆ ಫೇಸ್​ಬುಕ್ ಮುಖಾಂತರ ಮನವಿ ಮಾಡಿಕೊಂಡೆವು ಎಂದು ತಮಗಾದ ಅನುಭವವನ್ನು ಟಬು ಹೇಳಿಕೊಂಡಿದ್ದಾರೆ.

ಗುಂಡೂರಾವ್ ಅವರು ಮಾಜಿ ಸಚಿವ ಹಾಗೂ ಹಾಲಿ ಶಾಸಕರಾಗಿದ್ದಾರೆ, ನಮಗೆ ಇಂತಹ ಪರಿಸ್ಥಿತಿ ಆದರೆ ಸಾಮಾನ್ಯ ಜನರ ಪಾಡೇನು ಎಂದು ಟಬು ರಾವ್ ಆತಂಕ ವ್ಯಕ್ತ ಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT