ರಾಜ್ಯ

ರಾಜಧಾನಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ

Srinivasamurthy VN

ಬೆಂಗಳೂರು: ರಾಜ್ಯದ ರಾಜಧಾನಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಮಚ್ಚು ಲಾಂಗು ಆರ್ಭಟಿಸಿದ್ದು, ಕಾಂಗ್ರೆಸ್ ಕಾರ್ಯಕರ್ತನನ್ನು ಬರ್ಬರವಾಗಿ ಕೊಚ್ಚಿ ಕೊಲೆಗೈಯ್ಯಲಾಗಿದೆ.

ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಯಲಹಂಕ ಬಳಿಯ ಪಾಲನಹಳ್ಳಿಯಲ್ಲಿ ಗುರುವಾರ ತಡರಾತ್ರಿ ನಡೆದಿದೆ. 35 ವರ್ಷದ ಚನ್ನಕೇಶವ ಅಲಿಯಾಸ್ ಕೇಶವ ಕೊಲೆಯಾದವರು.

ಗುರುವಾರ ತಡ ರಾತ್ರಿ 10:30ರ ಸುಮಾರಿಗೆ ದುಷ್ಕರ್ಮಿಗಳ ತಂಡವೊಂದು ಸ್ವಿಫ್ಟ್ ಕಾರಿನಲ್ಲಿ ತೆರಳುತ್ತಿದ್ದ ಚನ್ನಕೇಶವ ಅವರನ್ನು ತಡೆದು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಕೊಲೆಯಾದ ಕೇಶವ್ ಅವರು ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿದ್ದು, ಮುಂಬರುವ ಕಾರ್ಪೊರೇಟರ್ ಚುನಾವಣೆ​ಗೆ ಸ್ಪರ್ಧಿಸಲು ಸಜ್ಜಾಗಿದ್ದರು ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

SCROLL FOR NEXT