ಸಂಗ್ರಹ ಚಿತ್ರ 
ರಾಜ್ಯ

ಕೊರೋನಾ ಗೆದ್ದ 93 ವರ್ಷದ ವೃದ್ಧ: ಸೋಂಕಿನಿಂದ ಚೇತರಿಸಿಕೊಂಡ ರಾಜ್ಯದ 3ನೇ ಹಿರಿಯ ವ್ಯಕ್ತಿ

ಕೊರೋನಾದಿಂದ ವೃದ್ಧರಿಗೆ ಅಪಾಯ ಹೆಚ್ಚು ಎಂಬ ಸುದ್ದಿಗಳ ನಡುವೆಯೂ ಬೆಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ 93 ವರ್ಷದ ವೃದ್ಧರೊಬ್ಬರು ಸೋಂಕಿನಿಂದ ಚೇತರಿಸಿಕೊಂಡಿದ್ದು, ಈ ಬೆಳವಣಿಗೆ ಇತರೆ ಸೋಂಕಿತರಲ್ಲಿ ಭರವಸೆ ಮೂಡುವಂತೆ ಮಾಡಿದೆ. 

ಬೆಂಗಳೂರು: ಕೊರೋನಾದಿಂದ ವೃದ್ಧರಿಗೆ ಅಪಾಯ ಹೆಚ್ಚು ಎಂಬ ಸುದ್ದಿಗಳ ನಡುವೆಯೂ ಬೆಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ 93 ವರ್ಷದ ವೃದ್ಧರೊಬ್ಬರು ಸೋಂಕಿನಿಂದ ಚೇತರಿಸಿಕೊಂಡಿದ್ದು, ಈ ಬೆಳವಣಿಗೆ ಇತರೆ ಸೋಂಕಿತರಲ್ಲಿ ಭರವಸೆ ಮೂಡುವಂತೆ ಮಾಡಿದೆ. 

ಈ ಮೂಲಕ ಕೊರೋನಾ ಜಯಿಸಿದ ರಾಜ್ಯದ 3ನೇ ಅತೀ ಹಿರಿಯ ವ್ಯಕ್ತಿ ಎನಿಸಿದ್ದಾರೆ. ವೃದ್ಧ ವ್ಯಕ್ತಿಯಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಿದ್ದರೂ ಸಕಾಲದಲ್ಲಿ ದೊರಕಿದ ಚಿಕಿತ್ಸೆಯಿಂದಾಗಿ ಕೊರೋನಾ ಮಣಿಸಿದ್ದಾರೆ. 

ಇತ್ತೀಚೆಗಷ್ಟೇ ಚಿತ್ರದುರ್ಗ ಜಿಲ್ಲೆ ಹಿರಿಯೂರಿನ 96 ವರ್ಷದ ಅಜ್ಜಿ ಗುಣಮುಖರಾಗಿ, ಕೊರೋನಾ ಗೆದ್ದ 2ನೇ ಹಿರಿಯ ವ್ಯಕ್ತಿ ಎನಿಸಿಕೊಂಡಿದ್ದರು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ 99 ವರ್ಷದ ವೃದ್ಧ ಮಹಿಳೆ ಚೇತರಿಸಿಕೊಂಡು ಕೊರೋನಾ ಗೆದ್ದ ಮೊದಲ ಹಿರಿಯ ಮಹಿಳೆ ಎನಿಸಿಕೊಂಡಿದ್ದರು. 

ಕೆಲ ದಿನಗಳ ಹಿಂದಷ್ಟೇ ವೃದ್ಧ ವ್ಯಕ್ತಿಯಲ್ಲಿ ಜ್ವರ ಹಾಗೂ ಉಸಿರಾಟ ಸಮಸ್ಯೆ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಈ ವೇಳೆ ಅವರಲ್ಲಿ ಕೊರೋನಾ ಪಾಸಿಟಿವ್ ಬಂದಿತ್ತು. ನಂತರ ಯಶವಂತಪುರದ ಸ್ಪರ್ಶ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಡಾ.ಉಲ್ಲಾಸ್ ಗೋಪಾಲ್ ಕೃಷ್ಣ ಹಾಗೂ ಅವರ ತಂಡ ಸತತ 19 ದಿನಗಳ ಕಾಲ ಚಿಕಿತ್ಸೆ ನೀಡಿತ್ತು, ವಾರಗಳ ಕಾಲ ಆಕ್ಸಿಜನ್ ನೀಡಿತ್ತು. ಇದರಿಂದಾಗಿ ಇದೀಗ ವೃದ್ಧ ವ್ಯಕ್ತಿ ಕೊರೋನಾ ಮಣಿಸಿ, ಗುಣಮುಖರಾಗಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT