ರಾಜ್ಯ

ಚಿಕ್ಕಮಗಳೂರು: ಹಾಡಹಗಲೇ ದರೋಡೆಗೆ ಯತ್ನಿಸಿ ಫೈರಿಂಗ್

ಕಾಫಿನಾಡಲ್ಲಿ ಹಾಡಹಗಲೇ ಆಭರಣ ಮಳಿಗೆಗೆ ದುಷ್ಕರ್ಮಿಗಳ ತಂಡವೊಂದು ನುಗ್ಗಿ ದರೋಡೆಗೆ ಯತ್ನಿಸಿ, ಫೈರಿಂಗ್ ಮಾಡಿರುವ ಘಟನೆ ನಗರದ ಎಂ.ಜಿ.ರಸ್ತೆಯ ಕೇಸರಿ ಜ್ಯೂವೆಲರ್ಸ್ ನಲ್ಲಿ ವರದಿಯಾಗಿದೆ.

ಚಿಕ್ಕಮಗಳೂರು: ಕಾಫಿನಾಡಲ್ಲಿ ಹಾಡಹಗಲೇ ಆಭರಣ ಮಳಿಗೆಗೆ ದುಷ್ಕರ್ಮಿಗಳ ತಂಡವೊಂದು ನುಗ್ಗಿ ದರೋಡೆಗೆ ಯತ್ನಿಸಿ, ಫೈರಿಂಗ್ ಮಾಡಿರುವ ಘಟನೆ ನಗರದ ಎಂ.ಜಿ.ರಸ್ತೆಯ ಕೇಸರಿ ಜ್ಯೂವೆಲರ್ಸ್ ನಲ್ಲಿ ವರದಿಯಾಗಿದೆ.

ಶನಿವಾರ ಬೆಳ್ಳಿಗೆ 11.25ರ ಸುಮಾರಿಗೆ ಮೂವರು ದುಷ್ಕರ್ಮಿಗಳು ಅಂಗಡಿಗೆ ದರೋಡೆಗೆ ಯತ್ನಿಸಿ, ಮೂರು ಗುಂಡು ಹಾರಿಸಿ ಬೈಕ್ ನಲ್ಲಿ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ, ಅಂಗಡಿ ಮಾಲೀಕ ಜಯಪ್ರಕಾಶ್ ಅವರಿಗೆ ಗಾಜು ತಗುಲಿ ಗಾಯವಾಗಿದೆ.
ಘಟನೆಗೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ.ಹಾಕೆ ಪ್ರತಿಕ್ರಿಯಿಸಿ, ಮೂವರು ದುಷ್ಕರ್ಮಿಗಳು ಪಲ್ಸರ್ ಬೈಕಿನಲ್ಲಿ ಬಂದು ದರೋಡೆಗೆ ಯತ್ನಿಸಿ, ಮೂರು ಗುಂಡು ಹಾರಿಸಿ ಪರಾರಿಯಾಗಿದ್ದಾರೆ.

ಘಟನೆಯಲ್ಲಿ ಅಂಗಡಿ ಮಾಲೀಕ ಜಯಪ್ರಕಾಶ್ ಅವರಿಗೆ ಗಾಜು ತಗುಲಿ ಗಾಯವಾಗಿದೆ ಎಂದರು.

ಮೂವರಲ್ಲಿ ಓರ್ವ ಹೆಲ್ಮೆಟ್ ಹಾಕಿಕೊಂಡಿದ್ದು, ಇಬ್ಬರೂ ಮಾಸ್ಕ್ ಧರಿಸಿದ್ದರು ಎಂದು ಅಂಗಡಿಯವರು ಮಾಹಿತಿ ನೀಡಿದ್ದಾರೆ. ಸದ್ಯ ಮಳಿಗೆಯಲ್ಲಿನ ಸಿ.ಸಿ ಟಿವಿ ದೃಶ್ಯವಳಿಗಳನ್ನು ಪಡೆದುಕೊಳ್ಳಲಾಗಿದ್ದು, ಪರಿಶೀಲನೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಸದ್ಯ ವಿಶೇಷ ತಂಡ ರಚಿಸಿ ದರೋಡೆಕೋರರ ಪತ್ತೆಗಾಗಿ ಬಲೆ ಬೀಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗಲ್ಫ್‌ನಲ್ಲಿ ಸಿಲುಕಿರುವ ಭಾರತೀಯರಿಗೆ ಪ್ರಧಾನಿ ಮೋದಿ ಸಹಾಯದ ಭರವಸೆ; ಕೊಚ್ಚಿಯಲ್ಲಿ 'ವಿಕ್ಷಿತ್ ಕೇರಳಂ'ಗೆ ಚಾಲನೆ

'ರಕ್ಷಿತ್ ಶೆಟ್ಟಿ - ರಶ್ಮಿಕಾ ನಿಶ್ಚಿತಾರ್ಥ ಮುರಿದುಬೀಳಲು ಇದೇ ಕಾರಣ': ತಾಯಿ ಸುಮನ್ ಮಂದಣ್ಣರದ್ದು ಎನ್ನಲಾದ ಆಡಿಯೋ ವೈರಲ್!

IPL 2026: ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ಉದ್ಘಾಟನಾ ಪಂದ್ಯ: ಮಾರ್ಚ್ 28 ರಂದು RCB vs SRH

ಹಾರ್ಮುಜ್ ಜಲಸಂಧಿ ಬಳಿ ದಾಳಿ: ಭಾರತ ಕಡೆಗೆ ಹೊರಟ್ಟಿದ್ದ ಥಾಯ್ ಕಾರ್ಗೋ ಹಡಗಿನಲ್ಲಿ ಬೆಂಕಿ, ಕಪ್ಪು ಹೊಗೆ! ಹೊಣೆ ಹೊತ್ತ ಇರಾನ್

ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್‌ ದಾಳಿ; ಭಾರತೀಯ ಸೇರಿ ನಾಲ್ವರಿಗೆ ಗಾಯ

SCROLL FOR NEXT