ರಾಜ್ಯ

ಚಿಕ್ಕಮಗಳೂರು: ಹಾಡಹಗಲೇ ದರೋಡೆಗೆ ಯತ್ನಿಸಿ ಫೈರಿಂಗ್

ಕಾಫಿನಾಡಲ್ಲಿ ಹಾಡಹಗಲೇ ಆಭರಣ ಮಳಿಗೆಗೆ ದುಷ್ಕರ್ಮಿಗಳ ತಂಡವೊಂದು ನುಗ್ಗಿ ದರೋಡೆಗೆ ಯತ್ನಿಸಿ, ಫೈರಿಂಗ್ ಮಾಡಿರುವ ಘಟನೆ ನಗರದ ಎಂ.ಜಿ.ರಸ್ತೆಯ ಕೇಸರಿ ಜ್ಯೂವೆಲರ್ಸ್ ನಲ್ಲಿ ವರದಿಯಾಗಿದೆ.

ಚಿಕ್ಕಮಗಳೂರು: ಕಾಫಿನಾಡಲ್ಲಿ ಹಾಡಹಗಲೇ ಆಭರಣ ಮಳಿಗೆಗೆ ದುಷ್ಕರ್ಮಿಗಳ ತಂಡವೊಂದು ನುಗ್ಗಿ ದರೋಡೆಗೆ ಯತ್ನಿಸಿ, ಫೈರಿಂಗ್ ಮಾಡಿರುವ ಘಟನೆ ನಗರದ ಎಂ.ಜಿ.ರಸ್ತೆಯ ಕೇಸರಿ ಜ್ಯೂವೆಲರ್ಸ್ ನಲ್ಲಿ ವರದಿಯಾಗಿದೆ.

ಶನಿವಾರ ಬೆಳ್ಳಿಗೆ 11.25ರ ಸುಮಾರಿಗೆ ಮೂವರು ದುಷ್ಕರ್ಮಿಗಳು ಅಂಗಡಿಗೆ ದರೋಡೆಗೆ ಯತ್ನಿಸಿ, ಮೂರು ಗುಂಡು ಹಾರಿಸಿ ಬೈಕ್ ನಲ್ಲಿ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ, ಅಂಗಡಿ ಮಾಲೀಕ ಜಯಪ್ರಕಾಶ್ ಅವರಿಗೆ ಗಾಜು ತಗುಲಿ ಗಾಯವಾಗಿದೆ.
ಘಟನೆಗೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ.ಹಾಕೆ ಪ್ರತಿಕ್ರಿಯಿಸಿ, ಮೂವರು ದುಷ್ಕರ್ಮಿಗಳು ಪಲ್ಸರ್ ಬೈಕಿನಲ್ಲಿ ಬಂದು ದರೋಡೆಗೆ ಯತ್ನಿಸಿ, ಮೂರು ಗುಂಡು ಹಾರಿಸಿ ಪರಾರಿಯಾಗಿದ್ದಾರೆ.

ಘಟನೆಯಲ್ಲಿ ಅಂಗಡಿ ಮಾಲೀಕ ಜಯಪ್ರಕಾಶ್ ಅವರಿಗೆ ಗಾಜು ತಗುಲಿ ಗಾಯವಾಗಿದೆ ಎಂದರು.

ಮೂವರಲ್ಲಿ ಓರ್ವ ಹೆಲ್ಮೆಟ್ ಹಾಕಿಕೊಂಡಿದ್ದು, ಇಬ್ಬರೂ ಮಾಸ್ಕ್ ಧರಿಸಿದ್ದರು ಎಂದು ಅಂಗಡಿಯವರು ಮಾಹಿತಿ ನೀಡಿದ್ದಾರೆ. ಸದ್ಯ ಮಳಿಗೆಯಲ್ಲಿನ ಸಿ.ಸಿ ಟಿವಿ ದೃಶ್ಯವಳಿಗಳನ್ನು ಪಡೆದುಕೊಳ್ಳಲಾಗಿದ್ದು, ಪರಿಶೀಲನೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಸದ್ಯ ವಿಶೇಷ ತಂಡ ರಚಿಸಿ ದರೋಡೆಕೋರರ ಪತ್ತೆಗಾಗಿ ಬಲೆ ಬೀಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT