ಹೆಚ್.ಕೆ.ಪಾಟೀಲ್ 
ರಾಜ್ಯ

ಸೋಂಕಿನಿಂದ ಮೃತಪಟ್ಟವರ ಅಮಾನವೀಯ ಶವಸಂಸ್ಕಾರ: ಕೆಎಸ್‌ಎಚ್‌ಆರ್‌ಸಿ ಈಗಲಾದರೂ ಎಚ್ಚೆತ್ತುಕೊಳ್ಳಲಿ- ಹೆಚ್.ಕೆ. ಪಾಟೀಲ್

ಕೊರೋನಾ ಸೋಂಕಿನಿಂದ ಮೃತಪಟ್ಟವರನ್ನು ಅಮಾನವೀಯವಾಗಿ ಶವಸಂಸ್ಕಾರ ಮಾಡಲಾಗುತ್ತಿದ್ದು, ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ ಈಗಾಲಾದರೂ ಮೂಕಪ್ರೇಕ್ಷಕನಂತೆ ಕೂರದೇ ಕೂಡಲೇ ಜಾಗೃತವಾಗಬೇಕಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಹೆಚ್.ಕೆ.ಪಾಟೀಲ್ ಅವರು ಹೇಳಿದ್ದಾರೆ. 

ಬೆಂಗಳೂರು: ಕೊರೋನಾ ಸೋಂಕಿನಿಂದ ಮೃತಪಟ್ಟವರನ್ನು ಅಮಾನವೀಯವಾಗಿ ಶವಸಂಸ್ಕಾರ ಮಾಡಲಾಗುತ್ತಿದ್ದು, ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ ಈಗಾಲಾದರೂ ಮೂಕಪ್ರೇಕ್ಷಕನಂತೆ ಕೂರದೇ ಕೂಡಲೇ ಜಾಗೃತವಾಗಬೇಕಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಹೆಚ್.ಕೆ.ಪಾಟೀಲ್ ಅವರು ಹೇಳಿದ್ದಾರೆ. 

ಈ ಕುರಿತು ಮಾನವ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದಿರುವ ಅವರು, ಕೊರೋನಾದಿಂದ ಜನ ತತ್ತರಿಸಿ ಹೋಗುತ್ತಿದ್ದರೂ, ಸೂಕ್ತ ಚಿಕಿತ್ಸೆಯಾಗಲೀ, ಔಷಧಿಯಾಗಲೀ, ಆಸ್ಪತ್ರೆಗಳ ಸೌಲಭ್ಯಗಳಾಗಲೀ ದೊರೆಯುತ್ತಿಲ್ಲ. ಸೋಂಕಿನಿಂದ ಮೃತಪಟ್ಟವನ್ನು ಅಮಾನವೀಯವಾಗಿ ಅಂತಿಮ ಸಂಸ್ಕಾರ ಮಾಡಲಾಗುತ್ತಿದೆ. ಇದೆಲ್ಲಾ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಹೇಳಿದ್ದಾರೆ. 

ಮಾನವ ಹಕ್ಕುಗಳ ರಕ್ಷಣೆಗಾಗಿ ಮಾನವ ಹಕ್ಕುಗಳ ಆಯೋಗ ಮುಂದಾಗಬೇಕು. ಹಕ್ಕುಗಳ ಉಲ್ಲಂಘಿಸಿದವರ ವಿರುದ್ಧ ಶಿಕ್ಷೆ ವಿಧಿಸಬೇಕು. ಹಾನಿಗೊಳಗಾದವರಿಗೆ ಪರಿಹಾರ ಒದಗಿಸಿ ರಕ್ಷಣೆ ನೀಡಬೇಕಾದುದು ಮಾನವ ಹಕ್ಕುಗಳ ಆಯೋಗದ ಮುಖ್ಯ ಉದ್ದೇಶವಾಗಿದೆ. ಕೊರೋನಾ ಸೋಂಕಿತರ ಹಕ್ಕುಗಳ ಉಲ್ಲಂಘನೆಯಾಗಿದ್ದು, ಈಗಲಾದರೂ ಆಯೋಗ ಮೂಕಪ್ರೇಕ್ಷಕನಂತೆ ಕೂರದೆ ಕೂಡಲೇ ಜಾಗೃತವಾಗಬೇಕಿದೆ. ಪಾದರಸದಂತೆ ಚುರುಕಾಗಬೇಕು. ಈ ಕುರಿತು ಆಯೋಗ ಚರ್ಚೆ ಅಥವಾ ಮಾಹಿತಿಗಾಗಿ ಕರೆದರೆ ಬರಲು ನಾನು ಸಿದ್ಧನಿದ್ದೇನೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT