ಬಯೋಕಾನ್ ಸಂಸ್ಥೆ ಅಭಿವೃದ್ಧಿಪಡಿಸಿರುವ ಇಂಜೆಕ್ಷನ್ 
ರಾಜ್ಯ

ತೀವ್ರ, ಮಧ್ಯಮ ಭಾದಿತ ಕೋವಿಡ್-19 ರೋಗಿಗಳಿಗೆ 'ಬಯೋಕಾನ್' ಔಷಧ ಬಳಸಲು ಡಿಸಿಜಿಐ ಅನುಮೋದನೆ

ತೀವ್ರ, ಮಧ್ಯಮ ಭಾದಿತ ಕೋವಿಡ್-19 ರೋಗಿಗಳಿಗೆ ಬಯೋಕಾನ್ ಲಿಮಿಟೆಡ್ ಅಭಿವೃದ್ಧಿಪಡಿಸಿರುವ ಇಟೊಲಿಜುಮಾಬ್ (ಅಲ್ಜುಮಾಬ್) ಇಂಜೆಕ್ಷನ್ ಬಳಸಲು ಭಾರತೀಯ ಔಷಧ ಮಹಾ ನಿಯಂತ್ರಕರು-ಡಿಸಿಜಿಐ ಅನುಮೋದನೆ ನೀಡಿದೆ.

ಬೆಂಗಳೂರು: ತೀವ್ರ, ಮಧ್ಯಮ ಭಾದಿತ ಕೋವಿಡ್-19 ರೋಗಿಗಳಿಗೆ ಬಯೋಕಾನ್ ಲಿಮಿಟೆಡ್ ಅಭಿವೃದ್ಧಿಪಡಿಸಿರುವ ಇಟೊಲಿಜುಮಾಬ್ (ಅಲ್ಜುಮಾಬ್) ಇಂಜೆಕ್ಷನ್ ಬಳಸಲು ಭಾರತೀಯ ಔಷಧ ಮಹಾ ನಿಯಂತ್ರಕರು-ಡಿಸಿಜಿಐ ಅನುಮೋದನೆ ನೀಡಿದೆ.

ಕೋವಿಡ್-19 ಕಾರಣ ತೀವ್ರ ಉಸಿರಾಟದಂತಹ ಸಮಸ್ಯೆಯಿಂದ ಬಳಲುತ್ತಿರುವವವರ ಮೇಲೆ ಈ ಔಷಧವನ್ನು ಬಳಸಬಹುದಾಗಿದೆ. 
ಇಟೊಲಿಜುಮಾಬ್ ಕೋವಿಡ್- 19 ಕಾರಣ ಸಾಧಾರಣ ರೀತಿಯ ತೊಂದರೆ ಎದುರಿಸುತ್ತಿರುವ ರೋಗಿಗಳಿಗೆ ಚಿಕಿತ್ಸೆ ನೀಡಲು ವಿಶ್ವದಲ್ಲಿ  ಅನುಮೋದನೆ ಪಡೆದ ಮೊದಲ ನೋವಲ್ ಬಯೋಲಾಜಿಕ್ ಥೆರಫಿಯಾಗಿದೆ. 

ಮುಂಬೈ ಮತ್ತು ನವದೆಹಲಿಯಲ್ಲಿನ ಹಲವು ಆಸ್ಪತ್ರೆಗಳಲ್ಲಿ ಕ್ಲಿನಿಕಲ್ ಪ್ರಯೋಗದಲ್ಲಿ ಯಶಸ್ವಿಯಾದ ಫಲಿತಾಂಶ ದೊರೆತ ನಂತರ ಇಟೊಲಿಜುಮಾಬ್ ಔಷಧಿಯನ್ನು ಬಳಸಲು ಡಿಸಿಜಿಐ ಅನುಮೋದನೆ ನೀಡಿದೆ.  ಕೋವಿಡ್-19 ಕಾರಣ ತೀವ್ರ ರೀತಿಯ ತೊಂದರೆ ತಡೆಯುವಲ್ಲಿ ಈ ಔಷಧಿಯ ಸುರಕ್ಷತೆ ಮತ್ತು ದಕ್ಷತೆ ಬಗ್ಗೆ  ಗಮನ ಕೇಂದ್ರಿಕರಿಸಲಾಗಿದೆ. 

ಸಾವಿನ ಪ್ರಮಾಣ ಕಡಿಮೆ ಮಾಡುವಲ್ಲಿ ಮತ್ತು ದಕ್ಷತೆಯಲ್ಲಿ  ಯಶಸ್ವಿಯಾಗಿರುವುದಾಗಿ ಬಯೋಕಾನ್ ಸಂಸ್ಥೆ ತಿಳಿಸಿದೆ. ಬೆಂಗಳೂರಿನ
ಬಯೋಕಾನ್ ಪಾರ್ಕ್ ನಲ್ಲಿ ಬಯೋಕಾನ್ ಸಂಸ್ಥೆಯಲ್ಲಿ ಇಟೊಲಿಜುಮಾಬ್ ಔಷಧ ತಯಾರಾಗುತ್ತಿದೆ. ಆದರೆ, ಈ ಔಷಧಿಯ ಬೆಲೆಯನ್ನು ಇನ್ನೂ ನಿರ್ಧರಿಸಿಲ್ಲ.

ಪ್ರಸ್ತುತ ಸಂದರ್ಭದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗದಿಂದ ಮುಕ್ತರಾಗಲು ದೇಶ, ವಿದೇಶದ ಸಂಶೋಧಕರು ಪ್ರಯತ್ನ ನಡೆಸುತ್ತಿದ್ದಾರೆ. ಇಟೊಲಿಜುಮಾಬ್ ಔಷಧ ಪ್ರಯೋಗಿಸಿದ ಎಲ್ಲ  ರೋಗಿಗಳು ಚೇತರಿಕೆಯಾಗಿದ್ದು, ಸಕಾರಾತ್ಮಕ ಪ್ರತಿಕ್ರಿಯೆ ಕಂಡುಬಂದಿದೆ. ಕೋವಿಡ್-19 ನಿಂದ ತುರ್ತು ಹಾಗೂ ಸಾಧಾರಣ ಭಾದಿತ ರೋಗಿಗಳಿಗೆ ಈ ಔಷಧ ನೀಡಲು ಡಿಸಿಜಿಐ ಅನುಮೋದನೆ ನೀಡಿದೆ ಎಂದು ಬಯೋಕಾನ್ ಕಾರ್ಯನಿರ್ವಾಹಕ ಮುಖ್ಯಸ್ಥೆ ಕಿರಣ್ ಮಂಜೂದಾರ್ ಷಾ ತಿಳಿಸಿದ್ದಾರೆ.

ಆಸ್ಪತ್ರೆಯಲ್ಲಿನ ಹಲವು ರೋಗಿಗಳ ಮೇಲೆ ಔಷಧ ಪ್ರಯೋಗಿಸಲಾಗಿದ್ದು, ಮಹತ್ವದ ಸುಧಾರಣೆಯಾಗಿರುವುದಾಗಿ ಮುಂಬೈಯ ಬಿವೈಎಲ್ ನಾಯರ್ ಆಸ್ಪತ್ರೆಯ ಡೀನ್ ಡಾ. ಮೋಹನ್ ಜೋಷಿ ತಿಳಿಸಿದ್ದಾರೆ. ರಾಷ್ಟ್ರ ರಾಜಧಾನಿ ನವದೆಹಲಿಯ ಲೋಕ ನಾಯಕ ಆಸ್ಪತ್ರೆಯಲ್ಲಿ 8 ರೋಗಿಗಳಿಗೆ ಇಟೊಲಿಜುಮಾಬ್ ಔಷಧ ನೀಡಲಾಗಿದ್ದು, ಅವರೆಲ್ಲರೂ ಗುಣಮುಖರಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT