ಸಿಎಂ ಬಿ ಎಸ್ ಯಡಿಯೂರಪ್ಪ 
ರಾಜ್ಯ

ಸ್ವ ನಿರ್ಬಂಧನದಲ್ಲಿರುವ ಸಿಎಂ ಯಡಿಯೂರಪ್ಪ: ಮನೆಯಲ್ಲಿ ಕುಳಿತು ಏನು ಮಾಡುತ್ತಿದ್ದಾರೆ?

ತಮ್ಮ ಗೃಹ ಕಚೇರಿ ಕೃಷ್ಣಾದ ಸಿಬ್ಬಂದಿಗಳಿಗೆ ಕೊರೋನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಸ್ವ ನಿರ್ಬಂಧದಲ್ಲಿರುವ ಸಿಎಂ ಬಿ ಎಸ್ ಯಡಿಯೂರಪ್ಪ ತಮ್ಮ ದಿನನಿತ್ಯದ ರಾಜಕೀಯ ಚಟುವಟಿಕೆಗಳು, ಕೆಲಸ ಕಾರ್ಯಗಳಿಂದ ಬಿಡುವು ಸಿಕ್ಕ ವೇಳೆ ಮನೆಯಲ್ಲಿ ಪುಸ್ತಕ ಓದುವುದರಲ್ಲಿ ಮಗ್ನರಾಗುತ್ತಾರೆ.

ಬೆಂಗಳೂರು:ತಮ್ಮ ಗೃಹ ಕಚೇರಿ ಕೃಷ್ಣಾದ ಸಿಬ್ಬಂದಿಗಳಿಗೆ ಕೊರೋನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಸ್ವ ನಿರ್ಬಂಧದಲ್ಲಿರುವ ಸಿಎಂ ಬಿ ಎಸ್ ಯಡಿಯೂರಪ್ಪ ತಮ್ಮ ದಿನನಿತ್ಯದ ರಾಜಕೀಯ ಚಟುವಟಿಕೆಗಳು, ಕೆಲಸ ಕಾರ್ಯಗಳಿಂದ ಬಿಡುವು ಸಿಕ್ಕ ವೇಳೆ ಮನೆಯಲ್ಲಿ ಪುಸ್ತಕ ಓದುವುದರಲ್ಲಿ ಮಗ್ನರಾಗುತ್ತಾರೆ.

ನನ್ನ ವಿರಾಮದ ಸಮಯದಲ್ಲಿ ಪುಸ್ತಕ ಓದುವುದು ನನಗೆ ಖುಷಿಯ ಹವ್ಯಾಸ. ನಮ್ಮ ಸುತ್ತಮುತ್ತ ನಡೆಯುವ ಹಲವು ವಿಷಯಗಳ ಕುರಿತು ತಿಳಿದುಕೊಳ್ಳಲು ಸಾಕಷ್ಟು ಇರುತ್ತದೆ. ಜ್ಞಾನ ಪಡೆಯುವ ಪ್ರಕ್ರಿಯೆಗೆ ಕೊನೆಯಿಲ್ಲ. ಭಾನುವಾರದ ಲಾಕ್ ಡೌನ್  ದಿನ ಮತ್ತು ಸ್ವ ನಿರ್ಬಂಧನದಲ್ಲಿರುವಾಗ ನನಗೆ ಸಿಗುವ ವಿರಾಮದ ಸಮಯವನ್ನು ಖಾಂಡೇಕರ್ ಅವರ ಯಯಾತಿ ಕೃತಿಯನ್ನು ಓದುತ್ತಿದ್ದೇನೆ ಎಂದು ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಮಹಾಭಾರತದಲ್ಲಿ ಬರುವ ಪಾತ್ರ ಯಯಾತಿಯ ಅನುವಾದಿತ ಕೃತಿಯನ್ನು ಸಿಎಂ ಯಡಿಯೂರಪ್ಪ ಓದುತ್ತಿದ್ದಾರೆ. ಇದನ್ನು ಮೂಲದಲ್ಲಿ ಮರಾಠಿ ಭಾಷೆಯಲ್ಲಿ ವಿ ಎಸ್ ಖಾಂಡೇಕರ್ ಬರೆದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT