ಡಾ.ಅಶ್ವತ್ ನಾರಾಯಣ, ಮುಖ್ಯಮಂತ್ರಿ 
ರಾಜ್ಯ

ಖಾಸಗಿ ಆಸ್ಪತ್ರೆಗಳ ಲೈಸೆನ್ಸ್ ರದ್ದುಪಡಿಸುವಂತೆ ಮುಖ್ಯಮಂತ್ರಿಗೆ ಡಾ.ಅಶ್ವತ್ ನಾರಾಯಣ ಒತ್ತಾಯ

ಶೇ. 50 ರಷ್ಟು ಹಾಸಿಗೆಗಳನ್ನು ಮೀಸಲು ಇಡದ ಖಾಸಗಿ ಆಸ್ಪತ್ರೆಗಳು ಮತ್ತು ಖಾಸಗಿ ವೈದ್ಯಕೀಯ ಕಾಲೇಜುಗಳ ಲೈಸೆನ್ಸ್ ರದ್ದುಪಡಿಸುವಂತೆ  ಉಪ ಮುಖ್ಯಮಂತ್ರಿ ಡಾ. ಅಶ್ವತ್ ನಾರಾಯಣ್ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ.

ಬೆಂಗಳೂರು: ಕೋವಿಡ್ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳಲ್ಲಿ  ಹೆಚ್ಚುವರಿ ಹಾಸಿಗೆಗಳ ಮೀಸಲು ವಿಚಾರದಲ್ಲಿ ಸರ್ಕಾರ ಹಾಗೂ ಖಾಸಗಿ ಆಡಳಿತ ಮಂಡಳಿಗಳ ನಡುವಣ ಇನ್ನೂ ಒಮ್ಮತ ಮೂಡಿದಂತೆ ಕಾಣುತ್ತಿಲ್ಲ.  

ಶೇ. 50 ರಷ್ಟು ಹಾಸಿಗೆಗಳನ್ನು ಮೀಸಲು ಇಡದ ಖಾಸಗಿ ಆಸ್ಪತ್ರೆಗಳು ಮತ್ತು ಖಾಸಗಿ ವೈದ್ಯಕೀಯ ಕಾಲೇಜುಗಳ ಲೈಸೆನ್ಸ್ ರದ್ದುಪಡಿಸುವಂತೆ ಉಪ ಮುಖ್ಯಮಂತ್ರಿ ಡಾ.ಅಶ್ವತ್ ನಾರಾಯಣ್ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು  ಒತ್ತಾಯಿಸಿದ್ದಾರೆ.

ಕೋವಿಡ್‌ 19 ಚಿಕಿತ್ಸೆ ಸಾಮರ್ಥ್ಯ ಹಾಗೂ ಸೌಲಭ್ಯ ಹೊಂದಿರುವ ಎಲ್ಲ ಖಾಸಗಿ ಆಸ್ಪತ್ರೆಗಳು ಶೇ. 50 ಹಾಸಿಗೆಗಳನ್ನು ಸಾರ್ವಜನಿಕ ಆರೋಗ್ಯ ಸಂಸ್ಥೆಗಳಿಂದ ರೆಫರ್‌ ಆಗಿ ಬರುವ ಸೋಂಕಿತರಿಗೆ ಮೀಸಲಿಡಬೇಕೆಂದು ಸರ್ಕಾರ ಅದೇಶ ಹೊರಡಿಸಿದೆ. ಕೆಪಿಎಂಇ ಕಾಯ್ದೆಯಡಿ ನೋಂದಣಿಯಾದ ಆಸ್ಪತ್ರೆಗಳು, ಕೋವಿಡ್‌ 19 ವಾರ್ಡ್‌ ಆರಂಭಿಸುವುದು ಕಡ್ಡಾಯವಾಗಿದೆ. ಆದರೆ,ಈ ಆದೇಶಕ್ಕೆ  ಖಾಸಗಿ ಆಸ್ಪತ್ರೆಗಳು  ಕವಡೆ ಕಾಸಿನ ಕಿಮ್ಮತ್ತು ನೀಡುತ್ತಿಲ್ಲ.

ಇದರಿಂದ ಖಾಸಗಿ ಆಸ್ಪತ್ರೆಗಳು ಹಾಗೂ ವೈದ್ಯಕೀಯ ಕಾಲೇಜುಗಳ ವಿರುದ್ಧ ಅಸಮಾಧಾನಗೊಂಡಿರುವ ಡಾ. ಅಶ್ವತ್ ನಾರಾಯಣ್, ಕೋವಿಡ್-19 ಸೋಂಕಿತರ ಚಿಕಿತ್ಸೆಗೆ ಶೇ.50 ರಷ್ಟು ಹಾಸಿಗೆ ಮೀಸಲು ಇಡದ ಇಂತಹ ಆಸ್ಪತ್ರೆಗಳ ಲೈಸೆನ್ಸ್ ವಜಾಗೊಳಿಸುವಂತೆ ಮುಖ್ಯಮಂತ್ರಿಯನ್ನು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT