ತಿರುಮಲ (ಸಂಗ್ರಹ ಚಿತ್ರ) 
ರಾಜ್ಯ

ತಿರುಮಲದಲ್ಲಿ 200 ಕೋಟಿ ರೂ. ವೆಚ್ಚದಲ್ಲಿ ಅತಿಥಿಗೃಹ ನಿರ್ಮಾಣ

ಕರ್ನಾಟಕ ಸರ್ಕಾರ ತಿರುಮಲದಲ್ಲಿ 200 ಕೋಟಿ ರೂ. ವೆಚ್ಚದಲ್ಲಿ ಅತಿಥಿಗೃಹ ನಿರ್ಮಾಣ ಮಾಡಲು ಮುಂದಾಗಿದೆ.

ಬೆಂಗಳೂರು: ಕರ್ನಾಟಕ ಸರ್ಕಾರ ತಿರುಮಲದಲ್ಲಿ 200 ಕೋಟಿ ರೂ. ವೆಚ್ಚದಲ್ಲಿ ಅತಿಥಿಗೃಹ ನಿರ್ಮಾಣ ಮಾಡಲು ಮುಂದಾಗಿದೆ.

ಹೌದು.. ಕಳೆದ ಸಚಿವ ಸಂಪುಟದಲ್ಲಿ ಕೈಗೊಂಡ ತೀರ್ಮಾನದಂತೆ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳುವ ರಾಜ್ಯದ ಭಕ್ತರಿಗೆ ಅನುಕೂಲ ಕಲ್ಪಿಸಲು ರಾಜ್ಯ ಸರ್ಕಾರ 200 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಅತಿಥಿಗೃಹ ನಿರ್ಮಿಸಲು ಮುಂದಾಗಿದೆ.

ನಾಲ್ಕು ಅಂತಸ್ತಿನ‌ ಕಟ್ಟಡದಲ್ಲಿ ಸುಮಾರು 305 ಕೊಠಡಿಗಳನ್ನು ಒಂದು ಸಾವಿರ ಭಕ್ತರಿಗೆ ತಂಗಲು ಅನುಕೂಲವಾಗುವಂತೆ ನಿರ್ಮಿಸಲು ನಿರ್ಧರಿಸಲಾಗಿದೆ ಎಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಕರ್ನಾಟಕದ ಛತ್ರಕ್ಕೆ ಸೇರಿರುವ 7.5 ಎಕರೆ ಪ್ರದೇಶದಲ್ಲಿ ಸಮಗ್ರ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ನಿರ್ಧರಿಸಲಾಗಿದ್ದು, ನಾಲ್ಕು ಅಂತಸ್ತಿನ ವಸತಿ ಗೃಹದಲ್ಲಿ 140 ಯಾತ್ರಾರ್ಥಿಗಳ ವಾಸ್ತವ್ಯಕ್ಕಾಗಿ 12 ಡಾರ್ಮೆಂಟ್ರಿಗಳು, 610 ಯಾತ್ರಾರ್ಥಿಗಳ ವಾಸ್ತವ್ಯಕ್ಕೆ 305 ಕೊಠಡಿಗಳು, ಗಣ್ಯರಿಗೆ 24 ಸೂಟ್ ಕೊಠಡಿಗಳು, 4 ಡಬ್ಬಲ್ ಸೂಟ್ ಕೊಠಡಿಗಳು, ಒಂದು ಕಲ್ಯಾಣ ಮಂಟಪ, ಕಾರು, ಬಸ್ಸುಗಳ ಪಾರ್ಕಿಂಗ್ ಗೆ ಹೆಚ್ಚುವರಿ ವ್ಯವಸ್ಥೆ, ಕಲ್ಯಾಣಿ ಪುನರುಜ್ಜೀವನ, ರಸ್ತೆ ಅಭಿವೃದ್ಧಿ, ಉದ್ಯಾನವನ ಹಾಗೂ ಇತರೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT