ಅಪೊಲೋ ಆಸ್ಪತ್ರೆ 
ರಾಜ್ಯ

ವಿಕ್ರಂ ಹಾಗೂ ಜಯನಗರದ ಅಪೊಲೋ ಆಸ್ಪತ್ರೆಗಳ ಓಪಿಡಿ ಬಂದ್ ಮಾಡಲು ಬೆಂಗಳೂರು ಡಿಸಿ ಆದೇಶ

ಕೋವಿಡ್ ಸೋಂಕಿತರಿಗೆ ಸರ್ಕಾರ ನಿಗದಿ ಮಾಡಿದ ಶೇ 50 ರಷ್ಟು ಬೆಡ್ ನೀಡಲು ನಿರಾಕರಿಸಿದ ಹಿನ್ನಲೆಯಲ್ಲಿ ಪ್ರತಿಷ್ಟಿತ ಎರಡು ಆಸ್ಪತ್ರೆಗಳ ಹೊರ ರೋಗಿಗಳ ಚಿಕಿತ್ಸೆಯನ್ನು ಸ್ಥಗಿತ ಗೊಳಿಸುವಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಬೆಂಗಳೂರು: ಕೋವಿಡ್ ಸೋಂಕಿತರಿಗೆ ಸರ್ಕಾರ ನಿಗದಿ ಮಾಡಿದ ಶೇ 50 ರಷ್ಟು ಬೆಡ್ ನೀಡಲು ನಿರಾಕರಿಸಿದ ಹಿನ್ನಲೆಯಲ್ಲಿ ಪ್ರತಿಷ್ಟಿತ ಎರಡು ಆಸ್ಪತ್ರೆಗಳ ಹೊರ ರೋಗಿಗಳ ಚಿಕಿತ್ಸೆಯನ್ನು ಸ್ಥಗಿತ ಗೊಳಿಸುವಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ವಸಂತ ನಗರದಲ್ಲಿರುವ ಪ್ರತಿಷ್ಟಿತ ವಿಕ್ರಂ ಆಸ್ಪತ್ರೆ ಹಾಗೂ ಜಯನಗರದಲ್ಲಿರುವ ಅಪೊಲೋ ಸ್ಪೆಷಾಲಿಟಿ ಆಸ್ಪತ್ರೆಗಳಿಗೆ ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಅಧಿಕೃತ ಜ್ಞಾಪನಾಪತ್ರವನ್ನು ರವಾನಿಸಿದ್ದಾರೆ. 

ಸರ್ಕಾರ ಮತ್ತು ಖಾಸಗಿ ಆಸ್ಪತ್ರೆಗಳ ನಡುವೆ ಆದ ಮಾತುಕತೆ ಪ್ರಕಾರ ಸರ್ಕಾರಕ್ಕೆ ಶೇ 50ರಷ್ಟು ಬೆಡ್ ನೀಡಲು ಕಳೆದ ವಾರವಷ್ಟೇ ಖಾಸಗಿ ಆಸ್ಪತ್ರೆಗಳು ಒಪ್ಪಿಗೆ ನೀಡಿದ್ದವು.ಆದರೆ ಇದುವರೆಗೂ ತಮ್ಮಲ್ಲಿರುವ ಬೆಡ್ ಗಳ ಮಾಹಿತಿ, ಕೋವಿಡ್ ಸೋಂಕಿತರನ್ನು ದಾಖಲಿಸಿಕೊಂಡಿರುವ ವಿಷಯ,ಇಂತಿಷ್ಟು ಬೆಡ್ ಗಳನ್ನು ನೀಡುವ ಬಗ್ಗೆ ಮಾಹಿ ತಿ ನೀಡದ ಹಿನ್ನಲೆಯಲ್ಲಿ ನಿನ್ನೆ ಜಿಲ್ಲಾಧಿಕಾರಿಗಳು ಈ ಎರಡು ಖಾಸಗಿ ಆಸ್ಪತ್ರೆಗಳಿಗೆ ನೋಟೀಸ್ ನೀಡಿದ್ದರು.

24 ಗಂಟೆಗಳ ಒಳಗಾಗಿ ಜಿಲ್ಲಾಡಳಿತಕ್ಕೆ ಸ್ಪಷ್ಟ ಕಾರಣ ಕೇಳಿ ನೋಟೀಸ್ ನೀಡಿತ್ತು.ಆದರೆ ನೋಟೀಸಿಗೆ ಉತ್ತರಿಸದಿರುವ ಹಿನ್ನಲೆಯಲ್ಲಿ ತಡರಾತ್ರಿ ಬಿಬಿಎಂಪಿ ಅಧಿಕಾರಿಗಳು ಎರಡೂ ಆಸ್ಪತ್ರೆಗಳಿಗೆ ಬೇಟಿ ನೀಡಿ ಆಡಳಿತ ಮಂಡ ಳಿ ಜೊತೆ ಮಾತುಕತೆ ನಡೆಸಿ ತಕ್ಷಣ ಬೆಡ್ ಗಳನ್ನು ನೀಡುವಂತೆ ಸೂಚಿಸಿದ್ದರು.

ಇಷ್ಟಾದರೂ ಎಚ್ಚೆತ್ತುಕೊಳ್ಳದ ಖಾಸಗಿ ಆಸ್ಪತ್ರೆಗಳ ವಿರುದ್ಧ ಹೊರ ರೋಗಿಗಳ ಚಿಕಿತ್ಸೆ ಬಂದ್ ಮಾಡುವಂತೆ ಸೂಚಿಸಿದ್ದಾರೆ.ಇದನ್ನೂ ಉಲ್ಲಂಘಿಸಿದರೆ ಆಸ್ಪತ್ರೆಯನ್ನು ವಿಪತ್ತು ನಿರ್ವಹಣಾ ಕಾಯಿದೆಯಡಿ ಪ್ರಕರಣ ದಾಖಲಿಸಿ ಕೆಪಿಎಂಇ ಕಾಯ್ದೆ ಅಡಿಯಲ್ಲಿ ಪರವಾನಗಿ ರದ್ದುಪಡಿಸುವ ಎಚ್ಚರಿಕೆ ರವಾನಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

SCROLL FOR NEXT