ಸಾಂದರ್ಭಿಕ ಚಿತ್ರ 
ರಾಜ್ಯ

ಭೂಸುಧಾರಣೆ ಕಾಯ್ದೆಗೆ ತಿದ್ದುಪಡಿ: ಸರ್ಕಾರದ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

ಕರ್ನಾಟಕ ಭೂಸುಧಾರಣೆ ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯ ಸರ್ಕಾರ ಹೊರಡಿಸಿದ್ದ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.

ಬೆಂಗಳೂರು: ಕರ್ನಾಟಕ ಭೂಸುಧಾರಣೆ ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯ ಸರ್ಕಾರ ಹೊರಡಿಸಿದ್ದ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.

5 ಸದಸ್ಯರಿಗಿಂತ ಹೆಚ್ಚಿರುವ ಕುಟುಂಬ ಗರಿಷ್ಠ 432 ಎಕರೆಯವರೆಗೆ ಭೂಮಿ ಹೊಂದಲು ಅವಕಾಶ ಕಲ್ಪಿಸಿರುವ ತಿದ್ದುಪಡಿ, 79ಎ, 79 ಬಿ ಹಾಗೂ ಸಿ ಅಡಿ ಇತ್ಯರ್ಥಕ್ಕೆ ಬಾಕಿ ಇರುವ ಪ್ರಕರಣಗಳನ್ನು ಮುಕ್ತಾಯಗೊಳಿಸಲು ದಾರಿ ಮಾಡಿಕೊಟ್ಟಿದೆ.

ಉಳುವವನಿಗೆ ಭೂಮಿ ಆಶಯದಡಿ 1974ರಲ್ಲಿ ತಂದಿದ್ದ ಭೂಸುಧಾರಣೆ ಕಾಯ್ದೆಗೆ ರಾಜ್ಯ ಸರ್ಕಾರ ತಿದ್ದುಪಡಿ ತರಲು ಮುಂದಾದಾಗ ಪರ–ವಿರೋಧದ ವಾದಗಳು ಎದ್ದಿದ್ದವು. ಭೂಮಿ ಮಾರಲು ಹಾಗೂ ಖರೀದಿಸಲು ಇದ್ದ ದೊಡ್ಡ ಬೇಲಿಯೊಂದನ್ನು ಕಿತ್ತುಹಾಕಿದಂತಾಗಿ, ರೈತರು ಸ್ವತಂತ್ರರಾಗಲಿದ್ದಾರೆ  ಎಂಬ ಅಭಿಪ್ರಾಯವೂ ವ್ಯಕ್ತವಾಗಿತ್ತು. ಸಚಿವ ಸಂಪುಟ ಒಪ್ಪಿಗೆ ಸೂಚಿಸಿದ್ದ ತಿದ್ದುಪಡಿಗಳಿಗೆ ಮತ್ತೊಂದಿಷ್ಟು ಬದಲಾವಣೆ ಮಾಡಿ ಸುಗ್ರೀವಾಜ್ಞೆ ಹೊರಡಿಸಲಾಗಿದೆ.

ನೀರಾವರಿಯೇತರ ಜಮೀನಾಗಿದ್ದು, ಒಂದು ಕುಟುಂಬದಲ್ಲಿ ಐದು ಸದಸ್ಯಗಿಂತ ಜಾಸ್ತಿ ಇದ್ದರೆ ಹಿಂದೆ 20 ಯೂನಿಟ್‌ (108 ಎಕರೆ) ಭೂಮಿ ಹೊಂದಬಹುದಿತ್ತು. ಈಗ ಅದನ್ನು 216 ಎಕರೆಗೆ ಹೆಚ್ಚಿಸಲಾಗಿದೆ. ಐದಕ್ಕಿಂತ ಹೆಚ್ಚಿನ ಸದಸ್ಯರಿರುವ ಕುಟುಂಬದವರಾಗಿದ್ದರೆ 432 ಎಕರೆ ಭೂಮಿಯನ್ನು ಹೊಂದಲು (ಸೆಕ್ಷನ್ 63 ಸಬ್‌ಸೆಕ್ಷನ್‌ 2ಎ) ಅವಕಾಶ ಕಲ್ಪಿಸಲಾಗಿದೆ. ಇಂತಹ ಕುಟುಂಬಗಳ ಸಂಖ್ಯೆ 8 ಲಕ್ಷದಷ್ಟಿದೆ ಎಂದು ಅಂದಾಜಿಸಲಾಗಿದೆ. ಸೆಕ್ಷನ್ 80ರ ಅಡಿ ರೈತರಲ್ಲದವರಿಗೆ ಭೂಮಿಯನ್ನು ವರ್ಗಾವಣೆ ಮಾಡುವಂತಿರಲಿಲ್ಲ. ಆದರೆ, ಆ ನಿರ್ಬಂಧ ತೆಗೆದುಹಾಕಲಾಗಿದೆ. 

ಕೃಷಿ ಕುಟುಂಬಕ್ಕೆ ಸೇರಿದವರು, ಹೆಚ್ಚಿನ ಆದಾಯ ಇರುವವರು ಖರೀದಿಸಿದ ಪ್ರಸಂಗದಲ್ಲಿ ಅದನ್ನು ಸರ್ಕಾರದ ಸುಪರ್ದಿಗೆ ಪಡೆಯಲು 79 ಎ, 79 ಬಿ ಅಡಿ ಪ್ರಕರಣ ದಾಖಲಿಸಲು, ಕಾಯ್ದೆ ಉಲ್ಲಂಘಿಸಿದ್ದು ದೃಢಪಟ್ಟರೆ ಮುಟ್ಟುಗೋಲು ಹಾಕಿಕೊಳ್ಳಲು ಅವಕಾಶ ಇತ್ತು. ಇಂತಹ ಸೆಕ್ಷನ್ ಅಡಿರಾಜ್ಯದಲ್ಲಿ ಇತ್ಯರ್ಥವಾಗದೇ ಬಾಕಿ ಇರುವ ಪ್ರಕರಣಗಳನ್ನು ಸುಗ್ರೀವಾಜ್ಞೆ ಮುಕ್ತಾಯಗೊಳಿಸಲಿದೆ. ಒಂದು ವೇಳೆ ಜಿಲ್ಲಾಧಿಕಾರಿ ಆದೇಶದ ವಿರುದ್ಧ ಹೈಕೋರ್ಟ್‌ನಲ್ಲಿ ಮೇಲ್ಮನವಿ ಹೋಗಿ, ಪ್ರಕರಣ ವಿಚಾರಣೆ ಹಂತದಲ್ಲಿದ್ದರೆ ಅದನ್ನು ಸುಗ್ರೀವಾಜ್ಞೆ ಆಧರಿಸಿ ವಜಾಗೊಳಿಸುವಂತೆ ಮೇಲ್ಮನವಿದಾರ ಕೋರಬಹುದು.

ಕಳೆದ 45 ವರ್ಷಗಳಿಂದ  ಸುಮಾರು 83,171 ಪ್ರಕರಣಗಳು ಸೆಕ್ಷನ್ 79ಎ ಮತ್ತು 80 ಅಡಿಯಲ್ಲಿ ದಾಖಲಾಗಿದ್ದು, ಅವುಗಳಲ್ಲಿ ಶೇ.1 ರಷ್ಟು ಭೂಮಿಯನ್ನು ಸರ್ಕಾರ ವಾಪಸ್ ಪಡೆಯಲು ಸಾಧ್ಯವಾಗಿಲ್ಲ ಎಂದು ಕಂದಾಯ ಸಚಿವ ಆರ್ .ಅಶೋಕ್ ಹೇಳಿದ್ದರು. ಈ ನಿಯಮದಿಂದಾಗಿ ಅಧಿಕಾರಿಗಳು ರೈತರಿಗೆ ಕಿರುಕುಳ ನೀಡುತ್ತಿದ್ದರು,  ಇನ್ನು ಮಂದೆ ಇಂತಹ ಕಿರುಕುಳ ತಪ್ಪುತ್ತವೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್!

ನಿನ್ನ ತಲೆ ಕಡಿತೀವಿ: ಈದ್ ಮೆರವಣಿಗೆ ವೇಳೆ ಪುನೀತ್ ಕೆರೆಹಳ್ಳಿ ವಿರುದ್ಧ ಘೋಷಣೆ, ಹಿಂದೂ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ!

Chandra Grahan 2026: ವರ್ಷದ ಕೊನೆಯ ಸುದೀರ್ಘ ಚಂದ್ರಗ್ರಹಣ; ಭಾರತದಲ್ಲಿ ಸೂತಕ ಕಾಲ ಇಲ್ಲ, ಯಾಕೆ ಗೊತ್ತ?

2ನೇ ಟೆಸ್ಟ್ ಗೆಲುವಿನ ಹಾದಿಯಲ್ಲಿ ಟೀಂ ಇಂಡಿಯಾ; ಶ್ರೀಲಂಕಾ ವಿರುದ್ಧ ಭಾರತ ಗೆದ್ದರೆ WTC ಅಂಕಪಟ್ಟಿಯಲ್ಲಿ ಮಹತ್ತರ ಬದಲಾವಣೆ!

ಲಾಲ್ ಬಾಗ್-ಕಬ್ಬನ್ ಪಾರ್ಕ್ ನ 22 ಎಕರೆ ಜಾಗ ಪರಭಾರೆ?, ಬೆಂಗಳೂರಿನ ಪಾರ್ಕ್‌ಗಳಿಗೆ ಹೊಸ ಕಾಯ್ದೆ ಕಂಟಕ?; ರಾಜ್ಯಪಾಲರಿಗೆ ಸಂಸದ Tejasvi Surya ಪತ್ರ