ಬಿಎಂಟಿಸಿ 
ರಾಜ್ಯ

ಲಾಕ್ ಡೌನ್ ಹಿನ್ನೆಲೆ: ತುರ್ತು ಸೇವೆಗಷ್ಟೇ ಬಿಎಂಟಿಸಿ ಸೌಲಭ್ಯ

ಮಹಾಮಾರಿ ಕೋವಿಡ್-19 ಗೆ ನಗರದ ಮತ್ತೋರ್ವ ಕೊರೋನಾ ವಾರಿಯರ್ ಪಿಎಸ್ ಐ ಬಲಿಯಾಗಿದ್ದಾರೆ. 

ಬೆಂಗಳೂರು: ಮಹಾಮಾರಿ ಕೋವಿಡ್-19 ಗೆ ನಗರದ ಮತ್ತೋರ್ವ ಕೊರೋನಾ ವಾರಿಯರ್ ಪಿಎಸ್ ಐ ಬಲಿಯಾಗಿದ್ದಾರೆ. 

ಈ ಮೂಲಕ ನಗರದಲ್ಲಿ ಕೊರೋನಾದಿಂದ ಮೃತಪಟ್ಟ ಪೊಲೀಸರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ.

 ನಗರದ ಕಂಟ್ರೋಲ್ ರೂಮ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ 59 ವರ್ಷದ ಪಿಎಸ್ಐ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. 

ಚಿಕಿತ್ಸೆಗೆಂದು ಅತ್ತಿಬೆಲೆಯ ಸಾಯಿ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಚಿಕಿತ್ಸೆ ಫಲಿಸದೆ ಮಂಗಳವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

ಸದ್ಯ ನಗರದಲ್ಲಿ ಒಟ್ಟು 578 ಪೊಲೀಸರಿಗೆ ಸೋಂಕು ತಗಲಿದ್ದು, 732 ಪೊಲೀಸ್ ಸಿಬ್ಬಂದಿ ಕ್ವಾರಂಟೈನ್ ನಲ್ಲಿದ್ದಾರೆ.

ವಯಸ್ಸಾದವರಿಗೆ ಕೊರೊನಾ ಬಹುಬೇಗನೆ ಬಾಧಿಸುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಐವತ್ತು ವರ್ಷ ಮೇಲ್ಪಟ್ಟ ಪೊಲೀಸರಿಗೆ ಮನೆಯಿಂದ ಕರ್ತವ್ಯ ನಿರ್ವಹಿಸಲು ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ ಮೃತ ಪಿಎಸ್ಐ ಅವರು ಕಳೆದ ಹಲವು ದಿನಗಳಿಂದ ಮನೆಯಲ್ಲಿದ್ದರು ಎನ್ನಲಾಗಿದೆ.

ದಿನಗಳು ಉರುಳಿದಂತೆ ಪೊಲೀಸರಿಗೆ ಸೋಂಕು ಹೆಚ್ಚಾಗುತ್ತಿದ್ದು, ಮರಣ ಹೊಂದುತ್ತಿರುವ ಪೊಲೀಸರ ಸಂಖ್ಯೆಯೂ ಏರಿಕೆಯಾಗುತ್ತಿದೆ. ಇದು ಇಲಾಖೆಯಲ್ಲಿ ಮತ್ತಷ್ಟು ಆತಂಕ ಸೃಷ್ಟಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

SCROLL FOR NEXT