ಯಡಿಯೂರಪ್ಪ 
ರಾಜ್ಯ

ಲಾಕ್‌ಡೌನ್ ನಿಯಮ ಪಾಲಿಸಿ: ಸಿಎಂ ಯಡಿಯೂರಪ್ಪ, ಡಿಸಿಎಂ ಮತ್ತು ಸಚಿವರ ಮನವಿ

ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳು ನಿನ್ನೆ ರಾತ್ರಿ 8 ಗಂಟೆಯಿಂದ ಮುಂದಿನ ಬುಧವಾರ ಬೆಳಗ್ಗೆ 5 ಗಂಟೆವರೆಗೆ ಸಂಪೂರ್ಣ ಲಾಕ್ ಡೌನ್ ಆಗಿರಲಿದೆ. ಅಗತ್ಯಸೇವೆಗಳು ಲಭ್ಯವಿರಲಿದ್ದು ನಾಗರಿಕರು ಆತಂಕಕ್ಕೆ ಒಳಗಾಗದೆ ನಿಯಮಗಳನ್ನು ಪಾಲಿಸಬೇಕು, ಮುನ್ನೆಚ್ಚರಿಕೆ ವಹಿಸಬೇಕು.

ಬೆಂಗಳೂರು: ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳು ನಿನ್ನೆ ರಾತ್ರಿ 8 ಗಂಟೆಯಿಂದ ಮುಂದಿನ ಬುಧವಾರ ಬೆಳಗ್ಗೆ 5 ಗಂಟೆವರೆಗೆ ಸಂಪೂರ್ಣ ಲಾಕ್ ಡೌನ್ ಆಗಿರಲಿದೆ. ಅಗತ್ಯಸೇವೆಗಳು ಲಭ್ಯವಿರಲಿದ್ದು ನಾಗರಿಕರು ಆತಂಕಕ್ಕೆ ಒಳಗಾಗದೆ ನಿಯಮಗಳನ್ನು ಪಾಲಿಸಬೇಕು, ಮುನ್ನೆಚ್ಚರಿಕೆ ವಹಿಸಬೇಕು, ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ಈ
ಮೂಲಕ ಮನವಿ ಮಾಡುತ್ತಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ವೈದ್ಯಕೀಯ ಶಿಕ್ಷ ಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ ನನ್ನ ಆತ್ಮೀಯ ನಾಗರಿಕ ಬಂಧುಗಳೇ, ನಿಮ್ಮ ಹಾಗೂ ನಿಮ್ಮ ಕುಟುಂಬದ ಸುರಕ್ಷತೆಗಾಗಿ ಲಾಕ್‌ಡೌನ್ ನಿಯಮ ಪಾಲಿಸಿ, ಮನೆಯಲ್ಲೇ ಇರಿ, ಸುರಕ್ಷಿತವಾಗಿರಿ, ಕೊರೊನಾ ವಿರುದ್ಧ ನಾವೆಲ್ಲರೂ ಒಂದಾಗಿ ಹೋರಾಡೋಣ, ಸಾಂಕ್ರಾಮಿಕ ಹರಡುವುದನ್ನು ತಡೆಯೋಣ ಎಂದು ಮನವಿ ಮಾಡಿದ್ದಾರೆ. 

ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಟ್ವೀಟ್ ಮಾಡಿ, ಲಾಕ್ ಡೌನ್ ಸಂದರ್ಭದಲ್ಲಿ ಮನೆಯಲ್ಲಿಯೇ ಇರಿ. ಅಗತ್ಯ ಸಾಮಗ್ರಿಗಳು ಲಭಿಸಲು ಯಾವುದೇ ತೊಂದರೆಯಿಲ್ಲ. ಹಾಗಾಗಿ ಅನಗತ್ಯವಾಗಿ ಗುಂಪು ಸೇರುವುದು ಬೇಡ. ನೈರ್ಮಲ್ಯದ ಕ್ರಮಗಳನ್ನು ಅನುಸರಿಸಿ. ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಎಂದು ನಾಗರಿಕರಲ್ಲಿ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT