ರಾಜ್ಯ

ಶಿವಮೊಗ್ಗ: ಎಸ್ ಎಸ್ ಎಲ್ ಸಿ‌ ಮೌಲ್ಯ‌ಮಾಪನದಲ್ಲಿದ್ದ ಶಿಕ್ಷಕ ಸಾವು

Raghavendra Adiga

ಶಿವಮೊಗ್ಗ: ಎಸ್‍ಎಸ್‍ಎಲ್‍ಸಿ ಉತ್ತರ ಪತ್ರಿಕೆಯ ಮೌಲ್ಯಮಾಪನ ಕರ್ತವ್ಯದಲ್ಲಿದ್ದ ಶಿಕ್ಷಕರೊಬ್ಬರು ಏಕಾಏಕೀ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.

ಭದ್ರಾವತಿಯ ಕುಮಾರ್ (48) ಮೃತ ಶಿಕ್ಷಕರು. ಇವರು ಭದ್ರಾವತಿಯ ನ್ಯೂಟೌನ್ ನಲ್ಲಿರುವ ಈಶ್ವರಮ್ಮ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿದ್ದರು

ಮೃತ ಶಿಕ್ಷಕ ಕುಮಾರ್ ಅವರು ಶಿವಮೊಗ್ಗದ ಎನ್.ಇ.ಎಸ್ ಪ್ರೌಢಶಾಲೆಯಲ್ಲಿ ನಡೆಯುತ್ತಿದ್ದ ಸಮಾಜ ವಿಜ್ಞಾನ ವಿಷಯದ ಮೌಲ್ಯಮಾಪನ ಕಾರ್ಯದಲ್ಲಿ ಭಾಗವಹಿಸಿದ್ದರು.ಆ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅಲ್ಲಿದ್ದ ಸಿಬ್ಬಂದಿಗಳು ಅವರನ್ನು ಆಸ್ಪತ್ರೆಗೆ ಸಾಗಿಸಲು ಯತ್ನಿಸಿದ್ದಾರೆ. ಆದರೆ ಆಸ್ಪತ್ರೆಗೆ ಸಾಗುವ ಮಾರ್ಗದ ನಡುವೇ ಕುಮಾರ್ ಮೃತರಾಗಿದ್ದಾರೆ. 

SCROLL FOR NEXT