ರಾಜಕಾಲುವೆಗೆ ಬಿದ್ದಿದ್ದ ಬಾಲಕಿ 
ರಾಜ್ಯ

ರಾಜಕಾಲುವೆಗೆ ಬಿದ್ದ ಬಾಲಕಿ ಸುಳಿವಿಲ್ಲ: ಕಾರ್ಯಾಚರಣೆ ಸ್ಥಗಿತ

6 ದಿನಗಳ ಹಿಂದೆ ಬೆಳ್ಳಂದೂರಿನ ಕರಿಯಮ್ಮನ ಅಗ್ರಹಾರದ ಮಂತ್ರಿ ಎಸ್ಪಾನ್ ಅಪಾರ್ಟ್'ಮೆಂಟ್ ಹಿಂಭಾಗದ ರಾಜಕಾಲವೆಗೆ ಬಿದ್ದು ಕೊಚ್ಚಿ ಹೋಗಿದ್ದ 6 ವರ್ಷದ ಬಾಲಕಿ ಪತ್ತೆಗಾಗಿ ಕೈಗೊಂಡಿದ್ದ ಕಾರ್ಯಾಚರಣೆಯನ್ನು ಮಂಗಳವಾರ ಸ್ಥಗಿತಗೊಳಿಸಲಾಗಿದೆ. 

ಬೆಂಗಳೂರು: 6 ದಿನಗಳ ಹಿಂದೆ ಬೆಳ್ಳಂದೂರಿನ ಕರಿಯಮ್ಮನ ಅಗ್ರಹಾರದ ಮಂತ್ರಿ ಎಸ್ಪಾನ್ ಅಪಾರ್ಟ್'ಮೆಂಟ್ ಹಿಂಭಾಗದ ರಾಜಕಾಲವೆಗೆ ಬಿದ್ದು ಕೊಚ್ಚಿ ಹೋಗಿದ್ದ 6 ವರ್ಷದ ಬಾಲಕಿ ಪತ್ತೆಗಾಗಿ ಕೈಗೊಂಡಿದ್ದ ಕಾರ್ಯಾಚರಣೆಯನ್ನು ಮಂಗಳವಾರ ಸ್ಥಗಿತಗೊಳಿಸಲಾಗಿದೆ.
 
ಶುಕ್ರವಾರ (ಜು.10) ಬೆಳಿಗ್ಗೆ 11.30ರ ಸುಮಾರಿಗೆ ಆಟವಾಡುವಾಗ ಆಯತಪ್ಪಿ ರಾಜಕಾಲುವೆಗೆ ಬಿದ್ದಿದ್ದ ಬಾಲಕಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿತ್ತು. ರಾಜಕಾಲುವೆಯಲ್ಲಿ ಕಳೆದ ಮೂರು ದಿನಗಳಿಗಿಂತಲೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿದರೂ ಬಾಲಕಿ ಮೃತದೇಹ ಕುರಿತ ಸಣ್ಣ ಸುಳಿವೂ ಸಿಗದ ಹಿನ್ನೆಲೆಯಲ್ಲಿ ಮಂಗಳವಾರ ಪತ್ತೆ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ. 

ಬಾಲಕಿ ಬಿದ್ದ ಜಾಗದಿಂದ ಸುಮಾರು 8 ಕಿಮೀ ವರೆಗೂ ಶೋಧಿಸಿದರೂ ಬಾಲಕಿ ಪತ್ತೆಯಾಗಿಲ್ಲ. ಬಾಲಕಿ ದೇಹ ನೀರಿನಲ್ಲಿ ಮುಳಿಗಿದ್ದರೂ ಮೂರು ದಿನದ ಬಳಿಕ ತೇಲುವ ನಿರೀಕ್ಷೆ ಹುಸಿಯಾಯಿತು. ಆದರೂ ರಾಜಕಾಲುವೆಯಲ್ಲಿ ಬಾಲಕಿ ಮೃತದೇಹ ಪತ್ತೆಗೆ ಪ್ರಯತ್ನ ನಡೆಸಿ, ಇದೀಗ ಶೋಧ ಕಾರ್ಯ ಕೈಬಿಡಲಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT