ಕರ್ನಾಟಕ ಹೈಕೋರ್ಟ್ 
ರಾಜ್ಯ

ಮೆಟ್ರೋ ಪ್ರಯಾಣಿಕರಿಗೆ ಆರೋಗ್ಯ ಸೇತು ಆ್ಯಪ್ ಕಡ್ಡಾಯ: ಸ್ಪಷ್ಟನೆ ಕೇಳಿದ ಹೈಕೋರ್ಟ್‌

ಮೆಟ್ರೊ ರೈಲು ಸೇವೆ ಆರಂಭವಾದ ನಂತರ ಅದರ ಪ್ರಯಾಣಿಕರಿಗೆ ಆರೋಗ್ಯ ಸೇತು ಆ್ಯಪ್ ಕಡ್ಡಾಯ ಎಂಬ ನಿಯಮದ ಕುರಿತು ಹೈಕೋರ್ಟ್ ಬೆಂಗಳೂರು ಮೆಟ್ರೊ ರೈಲು ನಿಗಮದ(ಬಿಎಂಆರ್‌ಸಿಎಲ್‌) ಸ್ಪಷ್ಟನೆ ಕೇಳಿದೆ. 

ಬೆಂಗಳೂರು: ಮೆಟ್ರೊ ರೈಲು ಸೇವೆ ಆರಂಭವಾದ ನಂತರ ಅದರ ಪ್ರಯಾಣಿಕರಿಗೆ ಆರೋಗ್ಯ ಸೇತು ಆ್ಯಪ್ ಕಡ್ಡಾಯ ಎಂಬ ನಿಯಮದ ಕುರಿತು ಹೈಕೋರ್ಟ್ ಬೆಂಗಳೂರು ಮೆಟ್ರೊ ರೈಲು ನಿಗಮದ(ಬಿಎಂಆರ್‌ಸಿಎಲ್‌) ಸ್ಪಷ್ಟನೆ ಕೇಳಿದೆ.

ಜೊತೆಗೆ, ಜನಸಾಮಾನ್ಯರು ಸಾರ್ವಜನಿಕ ಸಾರಿಗೆ ಬಳಕೆ ಸೇರಿದಂತೆ ಕೆಲವು ಸೇವೆಗಳನ್ನು ಪಡೆಯಲು ಆರೋಗ್ಯ ಸೇತು ಆ್ಯಪ್‌ ಅಳವಡಿಕೆ ಕಡ್ಡಾಯಗೊಳಿಸಿರುವ ಕುರಿತು ವಿವರಣೆ ನೀಡುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಆರೋಗ್ಯ ಸೇತು ಆ್ಯಪ್‌ ಕಡ್ಡಾಯಗೊಳಿಸಿದ ಸರ್ಕಾರದ ಕ್ರಮ ಪ್ರಶ್ನಿಸಿ ಅರವಿಂದ್ ಎಂಬುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ಹಾಗೂ ನ್ಯಾಯಮೂರ್ತಿ ಎನ್‌.ನಾಗಪ್ರಸನ್ನ ಅವರಿದ್ದ ವಿಭಾಗೀಯ ಪೀಠ, ಈ ವಿವರಣೆ ಕೇಳಿದೆ. 

ಬಿಎಂಆರ್‌ಸಿಎಲ್‌ನ ಈ ಕ್ರಮ ಸ್ಮಾರ್ಟ್‌ಫೋನ್ ಇರುವವರು ಮತ್ತು ಇಲ್ಲದವರ ನಡುವೆ ತಾರತಮ್ಯಹುಟ್ಟುಹಾಕಲಿದೆ. ನಾಗರಿಕರ ಖಾಸಗಿತನದ ಹಕ್ಕನ್ನೂ ಕಸಿದುಕೊಳ್ಳಲಿದೆ ಎಂದು ಅರ್ಜಿದಾರರು ಆಕ್ಷೇಪಿಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳದಲ್ಲಿ ಮುಂದುವರಿದ ರಾಜಕೀಯ ಹಿಂಸಾಚಾರ: ಅಭಿಷೇಕ್ ಬೆನ್ನಲ್ಲೇ ಕಲ್ಯಾಣ್ ಬ್ಯಾನರ್ಜಿ ಮೇಲೂ ದಾಳಿ, BJP ವಿರುದ್ಧ ಆರೋಪ..!

ಇರಾನ್ ಜೊತೆ ಶಾಂತಿ ಒಪ್ಪಂದದತ್ತ ಅಮೆರಿಕಾ; ಅಣ್ವಸ್ತ್ರ ತ್ಯಜಿಸಲು ಒಪ್ಪಿದ ಟೆಹ್ರಾನ್, ಟ್ರಂಪ್ ಮಹತ್ವದ ಹೇಳಿಕೆ..!

T-20 ಮ್ಯಾಚ್ ನಂತೆ ಹೊಸ ಸರ್ಕಾರ: ಡಿಕೆ ಶಿವಕುಮಾರ್ ಆಕ್ಷನ್-ಪ್ಯಾಕ್ ಇನ್ನಿಂಗ್ಸ್; 'ಬಂಡೆ' 'ಪವರ್ ಪ್ಲೇ'- ಆಕ್ರಮಣಕಾರಿ ಬ್ಯಾಟಿಂಗ್!

ಭಾರತೀಯ ಸೇನೆಗೆ ನೂತನ ಸಾರಥಿ: CDS ಆಗಿ ಎನ್‌ಎಸ್ ರಾಜಾ ಸುಬ್ರಮಣಿ ಅಧಿಕಾರ ಸ್ವೀಕಾರ..!

US-Iran war: ಶಾಂತಿ ಕರಡು ಪ್ರತಿಗೆ ತಿದ್ದುಪಡಿ: ಪರಮಾಣು ಮುಕ್ತ ಇರಾನ್‌ಗೆ ಟ್ರಂಪ್ ಪಟ್ಟು, ಕೊನೆ ಕ್ಷಣದಲ್ಲಿ ಬಿಗ್ ಶಾಕ್ ಕೊಟ್ಟ ಅಮೆರಿಕಾ..!

SCROLL FOR NEXT