ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ನಾಳೆಯಿಂದಲೇ ಶೆ. 50 ಹಾಸಿಗೆ ಒದಗಿಸಲು ಮುಖ್ಯಮಂತ್ರಿ ಸೂಚನೆ 
ರಾಜ್ಯ

ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ನಾಳೆಯಿಂದಲೇ ಶೇ.50 ಹಾಸಿಗೆ ಒದಗಿಸಲು ಮುಖ್ಯಮಂತ್ರಿ ಸೂಚನೆ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಖಾಸಗಿ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರೊಂದಿಗೆ ಕೋವಿಡ್ 19 ನಿರ್ವಹಣೆಗೆ ಸಂಬಂಧಿಸಿದಂತೆ ಸಭೆ ನಡೆಸಿ, ಚರ್ಚಿಸಿದರು.

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಖಾಸಗಿ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರೊಂದಿಗೆ ಕೋವಿಡ್ 19 ನಿರ್ವಹಣೆಗೆ ಸಂಬಂಧಿಸಿದಂತೆ ಸಭೆ ನಡೆಸಿ, ಚರ್ಚಿಸಿದರು.

ಬೆಂಗಳೂರು ನಗರದಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಖಾಸಗಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳು ಇನ್ನೂ ಹೆಚ್ಚಿನ ಸಹಕಾರ ನೀಡುವ ಅಗತ್ಯವಿದೆ. ಕೆಲವೆಡೆಗಳಲ್ಲಿ ಕೋವಿಡ್ ಹಾಗೂ ಕೋವಿಡ್ ಅಲ್ಲದ ರೋಗಿಗಳಿಗೂ ಚಿಕಿತ್ಸೆ ನಿರಾಕರಿಸುವುದು ಸರ್ಕಾರದ ಗಮನಕ್ಕೆ ಬಂದಿದ್ದು,

ಹಾಗೆಯೇ ಕೋವಿಡ್‍ಗೆ ಚಿಕಿತ್ಸೆ ಅಗತ್ಯವಿರುವವರು ಹಾಗೂ ಇತರ ಸಮಸ್ಯೆಗಳಿಂದ ಬಳಲುತ್ತಿರುವವರು ಸೂಕ್ತ ಚಿಕಿತ್ಸೆ ದೊರೆಯದೆ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆಯುವ ಹಾಗೂ ಹಲವರು ಪ್ರಾಣ ತ್ಯಾಗ ಮಾಡಿದ ದಾರುಣ ಘಟನೆಗಳ ಕುರಿತು ಕಳವಳ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು, ಕೋವಿಡ್ ನಿರ್ವಹಣೆಯಲ್ಲಿ ಬೆಂಗಳೂರು ಮಾದರಿಯಾಗಿತ್ತು. ಮುಂದೆಯೂ ಮಾದರಿಯಾಗಿರಬೇಕು ಎಂಬ ಆಶಯ ವ್ಯಕ್ತಪಡಿಸಿದರು.

ಹಿಂದಿನ ಸಭೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 2 ಸಾವಿರ ಹಾಗೂ ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಸುಮಾರು 4,500 ಹಾಸಿಗೆಗಳು ದೊರೆಯುವುದು ಎಂದು ಒಮ್ಮತದ ತೀರ್ಮಾನಕ್ಕೆ ಬರಲಾಗಿತ್ತು. ಆದರೆ ಖಾಸಗಿ ವೈದ್ಯಕೀಯ ಕಾಲೇಜುಗಳು ಅಷ್ಟು ಸಂಖ್ಯೆಯ ಹಾಸಿಗೆಗಳನ್ನು ಒದಗಿಸದೆ ಇರುವುದು ಹಾಗೂ ಇನ್ನೂ ಅನೇಕ ಸಮಸ್ಯೆಗಳು ನಮ್ಮ ಸಚಿವರುಗಳು ಕೆಲವು ವೈದ್ಯಕೀಯ ಕಾಲೇಜುಗಳಿಗೆ ಭೇಟಿ ನೀಡಿದಾಗ ತಿಳಿದುಬಂದಿದೆ ಎಂದು ಮುಖ್ಯಮಂತ್ರಿಯವರು ಅಸಮಾಧಾನ ವ್ಯಕ್ತಪಡಿಸಿದರು.

ಇಂದಿನ ಈ ತುರ್ತು ಸಂದರ್ಭದಲ್ಲಿ ಮಾನವೀಯತೆಯಿಂದ ಕೋವಿಡ್ ಚಿಕಿತ್ಸೆಗೆ ಸಹಕರಿಸಬೇಕು..  ಕೋವಿಡ್ ಇಲ್ಲದ ಇತರ ರೋಗಿಗಳಿಗೂ ಚಿಕಿತ್ಸೆ ನಿರಾಕರಿಸದೆ, ರಾಜ್ಯದ ವೈದ್ಯಕೀಯ ವ್ಯವಸ್ಥೆಯಲ್ಲಿ ಸಮತೋಲನ ಇರುವಂತೆ ಎಚ್ಚರ ವಹಿಸಬೇಕು ಖಾಸಗಿ ವೈದ್ಯಕೀಯ ಸಂಸ್ಥೆಗಳಿಗೆ ಸಲಹೆ ಮಾಡಿದರು.

ಇದಲ್ಲದೆ ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಭಾರಿ ಪ್ರಮಾಣದಲ್ಲಿ ಹೆಚ್ಚುತ್ತಿರುವುದರಿಂದ ಖಾಸಗಿ ವೈದ್ಯಕೀಯ ಕಾಲೇಜುಗಳು ಶೇ. 50 ರಷ್ಟು ಹಾಸಿಗೆಗಳನ್ನು ನಾಳೆಯಿಂದಲೇ ಕೋವಿಡ್ ಚಿಕಿತ್ಸೆಗೆ ಒದಗಿಸುವಂತೆ ಮುಖ್ಯಮಂತ್ರಿಗಳು ತಿಳಿಸಿದರು.

ವೈದ್ಯರು, ನರ್ಸ್ ಗಳ ಕೊರತೆ ಇದ್ದರೆ, ಸರ್ಕಾರವೇ ನೇಮಕ ಮಾಡುವುದು. ಯಾವುದೇ ರೀತಿಯ ಬೆಂಬಲ ಅಗತ್ಯವಿದ್ದರೂ ಸರ್ಕಾರ ನೀಡಲಿದೆ ಎಂದು ಮುಖ್ಯಮಂತ್ರಿಯವರು ಭರವಸೆ ನೀಡಿದರು. ಇದಕ್ಕೆ ಸ್ಪಂದಿಸಿದ ಕ ಖಾಸಗಿ ವೈದ್ಯಕೀಯ ಕಾಲೇಜುಗಳು ಶೇ. 50 ರಷ್ಟು ಇನ್ನು ಕೆಲ ಕಾಲೇಜುಗಳು ಶೇ. 80 ರಷ್ಟು ಹಾಸಿಗೆಗಳನ್ನು ನೀಡುವುದಾಗಿ ಹಾಗೂ ಲಭ್ಯವಿರುವ ವೆಂಟಿಲೇಟರ್ ಗಳನ್ನು ಸಹ ಒದಗಿಸುವುದಾಗಿ ತಿಳಿಸಿದರು. ಕಾಲೇಜುಗಳ ಹಾಸಿಗೆ ಗಳ ಲಭ್ಯತೆ ಮೇಲೆ‌ ನಿಗಾ ಇಡಲು‌ ಅಧಿಕಾರಿಗಳನ್ನು‌‌ ಈಗಾಗಲೆ ನೇಮಕ‌ ಮಾಡಲಾಗಿದೆ. ಸಭೆಗೆ ಹಾಜರಾಗದ ವೈದೇಹಿ ವೈದ್ಯಕೀಯ ಕಾಲೇಜಿಗೆ ನೋಟಿಸ್ ನೀಡಲು ಸೂಚಿಸಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT