ಸುಧಾಕರ್ 
ರಾಜ್ಯ

ರಾತ್ರೋರಾತ್ರಿ ಕೆಸಿ ಜನರಲ್ ಆಸ್ಪತ್ರೆಗೆ ಸುಧಾಕರ್ ಭೇಟಿ: ಅವ್ಯವಸ್ಥೆ ಕಂಡು ವೈದ್ಯರ ತರಾಟೆ

ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ಮಲ್ಲೇಶ್ವರಂನ ಕೆ.ಸಿ. ಜನರಲ್ ಆಸ್ಪತ್ರೆಗೆ  ಶುಕ್ರವಾರ ರಾತ್ರಿ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ಮಲ್ಲೇಶ್ವರಂನ ಕೆ.ಸಿ. ಜನರಲ್ ಆಸ್ಪತ್ರೆಗೆ  ಶುಕ್ರವಾರ ರಾತ್ರಿ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಳಿಕ ಆಸ್ಪತ್ರೆಯ ಅವ್ಯವಸ್ಥೆ ಕಂಡು ಅಲ್ಲಿ ಕರ್ತವ್ಯದಲ್ಲಿದ್ದ ವೈದ್ಯರನ್ನು ಸಚಿವರು ತರಾಟೆ ತೆಗೆದುಕೊಂಡಿದ್ದಾರೆ. ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಸಚಿವರು, ವೈದ್ಯರು, ಸಿಬ್ಬಂದಿಗಳ ಹಾಜರಾತಿ ಪರಿಶೀಲನೆ, ಚಿಕಿತ್ಸೆ, ಶುಚಿತ್ವ ಹಾಗೂ ಮಾರ್ಗಸೂಚಿ ಪಾಲನೆ ಕುರಿತು ಪರಿಶೀಲನೆ ನಡೆಸಿದರು. 

ಕೋವಿಡ್ ಕೆಲಸದಲ್ಲಿ ನಿರತರಾದವರಿಗೆ ನೀಡಿರುವ ಉಪಕರಣಗಳ ಪರಿಶೀಲನೆ ನಡೆಸಿದರು. ಪಿಪಿಇ ಕಿಟ್, ಆಸ್ಪತ್ರೆಯಲ್ಲಿ ಇರುವ ದಾಸ್ತಾನು ವಿವರಗಳನ್ನೂ ಸಹ ಸಚಿವ ಸುಧಾಕರ್ ಇದೇ ಸಂದರ್ಭದಲ್ಲಿ ಪರಿಶೀಲನೆ ನಡೆಸಿದರು. ಗುರುವಾರ ಆಸ್ಪತ್ರೆಯಲ್ಲಿ ಆತ್ಮಹತ್ಯೆ ಘಟನೆ ನಡೆದ ಕುರಿತು ಸಚಿವರು ಸಂಬಂಧಪಟ್ಟವರ ಬಳಿಯಿಂದ ಮಾಹಿತಿ ಪಡೆದರು.

35 ಮಂದಿ ಆಸ್ಪತ್ರೆ ಸಿಬ್ಬಂದಿಗೆ ಕೋವಿಡ್ 19 ಪಾಸಿಟಿವ್ ಆಗಿರುವುದಕ್ಕೆ ಅಧೀಕ್ಷಕರನ್ನು ಸಚಿವರು ತರಾಟೆಗೆ ತೆಗೆದುಕೊಂಡರು. ಸಿಬ್ಬಂದಿಗೆ ರಕ್ಷಣೆ ಕೊಡಲು ವಿಫಲರಾಗಿರುವ ನೀವು ರೋಗಿಗಳನ್ನು ಹೇಗೆ ನೋಡಿಕೊಳ್ಳುತ್ತಿದ್ದೀರಿ ಎಂದು ಸಚಿವರು ಪ್ರಶ್ನಿಸಿದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT