ಸಾಂದರ್ಭಿಕ ಚಿತ್ರ 
ರಾಜ್ಯ

ಹೆಚ್ಚುತ್ತಿರುವ ಕೋವಿಡ್-19: ಬಿಬಿಎಂಪಿ ಆಯುಕ್ತರನ್ನು ಭೇಟಿ ಮಾಡಿ ಸುರಕ್ಷತಾ ಸಾಧನಗಳನ್ನು ಕೇಳಿದ ಪೌರ ಕಾರ್ಮಿಕರು

ಪೌರ ಕಾರ್ಮಿಕರ ನಿಯೋಗವೊಂದು ಬಿಬಿಎಂಪಿ ಆಯುಕ್ತ ಬಿ ಎಚ್ ಅನಿಲ್ ಕುಮಾರ್ ಅವರನ್ನು ಭೇಟಿ ಮಾಡಿ ನಗರದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚು ಸುರಕ್ಷತಾ ಸಾಧನ ಮತ್ತು ಸ್ವಚ್ಛತೆಯ ಕ್ರಮಗಳನ್ನು ಒದಗಿಸಿಕೊಡಿ ಎಂದು ಬೇಡಿಕೆ ಮುಂದಿಟ್ಟಿದೆ.

ಬೆಂಗಳೂರು: ಪೌರ ಕಾರ್ಮಿಕರ ನಿಯೋಗವೊಂದು ಬಿಬಿಎಂಪಿ ಆಯುಕ್ತ ಬಿ ಎಚ್ ಅನಿಲ್ ಕುಮಾರ್ ಅವರನ್ನು ಭೇಟಿ ಮಾಡಿ ನಗರದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚು ಸುರಕ್ಷತಾ ಸಾಧನ ಮತ್ತು ಸ್ವಚ್ಛತೆಯ ಕ್ರಮಗಳನ್ನು ಒದಗಿಸಿಕೊಡಿ ಎಂದು ಬೇಡಿಕೆ ಮುಂದಿಟ್ಟಿದೆ.

25 ವರ್ಷದ ಪೌರ ಕಾರ್ಮಿಕ ಮಹಿಳೆಗೆ ವೈದ್ಯಕೀಯ ಚಿಕಿತ್ಸೆ ಸರಿಯಾಗಿ ಸಿಗದೆ ಅಸುನೀಗಿದ ಘಟನೆ ಬಳಿಕ ಪೌರ ಕಾರ್ಮಿಕರು ತಮ್ಮ ಸುರಕ್ಷತೆ ಬಗ್ಗೆ ಇನ್ನಷ್ಟು ಎಚ್ಚೆತ್ತುಕೊಂಡಿದ್ದಾರೆ. ಕೋವಿಡ್-19ಗೆ ಮರಣ ಹೊಂದುತ್ತಿರುವ 5ನೇ ಪೌರ ಕಾರ್ಮಿಕರು ಇವರಾಗಿದ್ದಾರೆ. ನಿನ್ನೆ ತಮ್ಮ ಸುರಕ್ಷತೆಗಾಗಿ ಒತ್ತಾಯಿಸಿ ಹಲವು ಪೌರ ಕಾರ್ಮಿಕರು ನಗರದ ಅಲ್ಲಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಪೌರ ಕಾರ್ಮಿಕರ ಜೊತೆ ಹಲವು ನಾಗರಿಕ ಗುಂಪುಗಳು ಸಹ ಸೇರಿ ಮನೆಗಳ ಮುಂದೆ ಮೇಣದ ಬತ್ತಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಅನಿಲ್ ಕುಮಾರ್, ಪೌರ ಕಾರ್ಮಿಕರ ರಕ್ಷಣೆಗೆ ಬಿಬಿಎಂಪಿ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಕೆಲಸ ಆರಂಭಕ್ಕೆ ಮುನ್ನ ಪೌರ ಕಾರ್ಮಿಕರ ದೇಹದ ಉಷ್ಣತೆ ತಪಾಸಣೆ ಮಾಡಲಾಗುತ್ತದೆ. ಕೋವಿಡ್-19 ಬಂದರೆ ಅವರಿಗೆ ಚಿಕಿತ್ಸೆ ನೀಡಲು ಬಿಬಿಎಂಪಿ ಕೋವಿಡ್ ಕೇಂದ್ರಗಳನ್ನು ನಿರ್ಮಾಣ ಮಾಡಲಿದೆ. ಕೋವಿಡ್-19ಗೆ ಮೃತಪಟ್ಟರೆ ಪೌರ ಕಾರ್ಮಿಕರ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ ನೀಡಲಾಗುತ್ತದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್