ಬಂಧಿತ ಆರೋಪಿಯ ಚಿತ್ರ 
ರಾಜ್ಯ

ವಿಕ್ಟೋರಿಯಾ ಆಸ್ಪತ್ರೆ ಹೆಸರಿನಲ್ಲಿ ಬೇರೆ ರಾಜ್ಯದ ವಿಡಿಯೋ ವೈರಲ್: ಆರೋಪಿ ಬಂಧನ- ಭಾಸ್ಕರ್ ರಾವ್ 

ರಾಜಧಾನಿ ಬೆಂಗಳೂರಿನ ವಿಕ್ಟೋರಿಯಾದ ಆಸ್ಪತ್ರೆಯ ವಿಡಿಯೋ ಎಂದು ಹೇಳಿ ನಕಲಿ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎಂದು ನಗರ ಪೊಲೀಸ್ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ.

ಬೆಂಗಳೂರು:ರಾಜಧಾನಿ ಬೆಂಗಳೂರಿನ ವಿಕ್ಟೋರಿಯಾದ ಆಸ್ಪತ್ರೆಯ ವಿಡಿಯೋ ಎಂದು ಹೇಳಿ ನಕಲಿ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎಂದು ನಗರ ಪೊಲೀಸ್ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ.

ಇದು ನಕಲಿ ವಿಡಿಯೋವಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿ ಅತ್ಯುತ್ತಮ ರೀತಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಭಾಸ್ಕರ್ ರಾವ್ ಟ್ವೀಟ್ ಮಾಡಿದ್ದಾರೆ.

ಬಂಧಿತನನ್ನು ತಿಲಕ್ ನಗರದ  ಸಮೀರವುಲ್ಲಾ ಎಂದು ಗುರುತಿಸಲಾಗಿದೆ. ಹೊರ ರೋಗಿ ವಿಭಾಗದ ಕೊಠಡಿ ಮುಂಭಾಗ
ಅಪಾರ ಸಂಖ್ಯೆಯಲ್ಲಿ ರೋಗಿಗಳು ನೆರೆದಿರುವ ವಿಡಿಯೋ ವಿಕ್ಟೋರಿಯಾ ಆಸ್ಪತ್ರೆಯದ್ದು ಎಂದು ಹೇಳಿ ಆರೋಪಿ ತನ್ನ ಫೇಸ್ ಬುಕ್ ಖಾತೆಯಲ್ಲಿ ಅಪ್ ಲೋಡ್ ಮಾಡಿದ್ದ.ಅದು ಟ್ವಿಟರ್ ಸೇರಿದಂತೆ ಇನ್ನಿತರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಸಿಸಿಬಿ ಪೊಲೀಸರು ಕ್ಷೀಪ್ರಗತಿಯಲ್ಲಿ ಕಾರ್ಯಾಚರಣೆ
ನಡೆಸಿ ಆರೋಪಿಯನ್ನು ಸೆರೆ ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬೇರೆ ರಾಜ್ಯದ ವಿಡಿಯೋವನ್ನು ವಿಕ್ಟೋರಿಯಾ ಆಸ್ಪತ್ರೆಯದ್ದು ಎಂದು ಆರೋಪಿ ಬರೆದುಕೊಂಡಿದ್ದ. ವೈದ್ಯರ ಕೊಠಡಿ ಎದುರು ಜನರು ಗುಂಪಾಗಿ ನಿಂತುಕೊಂಡಿದ್ದರು. ಜನ ಸಂದಣಿಯೂ ಹೆಚ್ಚಿತ್ತು. ಈ ದೃಶ್ಯ ವಿಡಿಯೋದಲ್ಲಿತ್ತು. ಪರಿಶೀಲನೆ ನಡೆಸಿದಾಗ ಇದು ವಿಕ್ಟೋರಿಯಾ ಆಸ್ಪತ್ರೆಯದ್ದು ಅಲ್ಲವೆಂಬುದು ತಿಳಿಯಿತು ಎಂದು ಸಿಸಿಬಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ವಿಡಿಯೋ ಪಾಟ್ನಾದ ಏಮ್ಸ್ ನದ್ದು ಎಂದು ವೈದ್ಯಕೀಯ ಸಂಸ್ಥೆ ನಿರ್ದೇಶಕಿ- ಡೀನ್ ಡಾ. ಸಿ. ಆರ್. ಜಯಂತಿ ಸ್ಪಷ್ಪಪಡಿಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT