ಬಂಧಿತ ಆರೋಪಿಯ ಚಿತ್ರ 
ರಾಜ್ಯ

ವಿಕ್ಟೋರಿಯಾ ಆಸ್ಪತ್ರೆ ಹೆಸರಿನಲ್ಲಿ ಬೇರೆ ರಾಜ್ಯದ ವಿಡಿಯೋ ವೈರಲ್: ಆರೋಪಿ ಬಂಧನ- ಭಾಸ್ಕರ್ ರಾವ್ 

ರಾಜಧಾನಿ ಬೆಂಗಳೂರಿನ ವಿಕ್ಟೋರಿಯಾದ ಆಸ್ಪತ್ರೆಯ ವಿಡಿಯೋ ಎಂದು ಹೇಳಿ ನಕಲಿ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎಂದು ನಗರ ಪೊಲೀಸ್ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ.

ಬೆಂಗಳೂರು:ರಾಜಧಾನಿ ಬೆಂಗಳೂರಿನ ವಿಕ್ಟೋರಿಯಾದ ಆಸ್ಪತ್ರೆಯ ವಿಡಿಯೋ ಎಂದು ಹೇಳಿ ನಕಲಿ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎಂದು ನಗರ ಪೊಲೀಸ್ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ.

ಇದು ನಕಲಿ ವಿಡಿಯೋವಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿ ಅತ್ಯುತ್ತಮ ರೀತಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಭಾಸ್ಕರ್ ರಾವ್ ಟ್ವೀಟ್ ಮಾಡಿದ್ದಾರೆ.

ಬಂಧಿತನನ್ನು ತಿಲಕ್ ನಗರದ  ಸಮೀರವುಲ್ಲಾ ಎಂದು ಗುರುತಿಸಲಾಗಿದೆ. ಹೊರ ರೋಗಿ ವಿಭಾಗದ ಕೊಠಡಿ ಮುಂಭಾಗ
ಅಪಾರ ಸಂಖ್ಯೆಯಲ್ಲಿ ರೋಗಿಗಳು ನೆರೆದಿರುವ ವಿಡಿಯೋ ವಿಕ್ಟೋರಿಯಾ ಆಸ್ಪತ್ರೆಯದ್ದು ಎಂದು ಹೇಳಿ ಆರೋಪಿ ತನ್ನ ಫೇಸ್ ಬುಕ್ ಖಾತೆಯಲ್ಲಿ ಅಪ್ ಲೋಡ್ ಮಾಡಿದ್ದ.ಅದು ಟ್ವಿಟರ್ ಸೇರಿದಂತೆ ಇನ್ನಿತರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಸಿಸಿಬಿ ಪೊಲೀಸರು ಕ್ಷೀಪ್ರಗತಿಯಲ್ಲಿ ಕಾರ್ಯಾಚರಣೆ
ನಡೆಸಿ ಆರೋಪಿಯನ್ನು ಸೆರೆ ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬೇರೆ ರಾಜ್ಯದ ವಿಡಿಯೋವನ್ನು ವಿಕ್ಟೋರಿಯಾ ಆಸ್ಪತ್ರೆಯದ್ದು ಎಂದು ಆರೋಪಿ ಬರೆದುಕೊಂಡಿದ್ದ. ವೈದ್ಯರ ಕೊಠಡಿ ಎದುರು ಜನರು ಗುಂಪಾಗಿ ನಿಂತುಕೊಂಡಿದ್ದರು. ಜನ ಸಂದಣಿಯೂ ಹೆಚ್ಚಿತ್ತು. ಈ ದೃಶ್ಯ ವಿಡಿಯೋದಲ್ಲಿತ್ತು. ಪರಿಶೀಲನೆ ನಡೆಸಿದಾಗ ಇದು ವಿಕ್ಟೋರಿಯಾ ಆಸ್ಪತ್ರೆಯದ್ದು ಅಲ್ಲವೆಂಬುದು ತಿಳಿಯಿತು ಎಂದು ಸಿಸಿಬಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ವಿಡಿಯೋ ಪಾಟ್ನಾದ ಏಮ್ಸ್ ನದ್ದು ಎಂದು ವೈದ್ಯಕೀಯ ಸಂಸ್ಥೆ ನಿರ್ದೇಶಕಿ- ಡೀನ್ ಡಾ. ಸಿ. ಆರ್. ಜಯಂತಿ ಸ್ಪಷ್ಪಪಡಿಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT