ಸುಧಾಕರ್ 
ರಾಜ್ಯ

ಕೊರೋನಾ ಪರೀಕ್ಷೆ ಹೆಚ್ಚಿಸಲು ರಾಜ್ಯದಲ್ಲಿ ಹೊಸದಾಗಿ 20 ಲ್ಯಾಬ್ : ಸುಧಾಕರ್

ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸದ್ಯ ಇರುವ 85 ಲ್ಯಾಬ್ ಗಳ ಜೊತೆಗೆ ಹೊಸದಾಗಿ ಇನ್ನೂ 20 ಲ್ಯಾಬ್ ತೆರೆಯಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಹೇಳಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸದ್ಯ ಇರುವ 85 ಲ್ಯಾಬ್ ಗಳ ಜೊತೆಗೆ ಹೊಸದಾಗಿ ಇನ್ನೂ 20 ಲ್ಯಾಬ್ ತೆರೆಯಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಹೇಳಿದ್ದಾರೆ.

ಸದ್ಯ ದಿನಕ್ಕೆ 35 ಸಾವಿರ ಪರೀಕ್ಷೆ ನಡೆಸಲಾಗುತ್ತಿದೆ. ಬೆಂಗಳೂರಿನಲ್ಲಿ 198 ವಾರ್ಡ್ ಗಳಿದ್ದು,ಸಿಬ್ಬಂದಿಗೆ ಬೂತ್ ಮಟ್ಟದಲ್ಲಿ ತರಬೇತಿ ನೀಡಲಾಗುತ್ತಿದೆ, ವಾರ್ಡ್ ಮಟ್ಟು ಹಾಗೂ ಬೂತ್ ಮಟ್ಟದ ಸಿಬ್ಬಂದಿ ಪ್ರತಿದಿನ  400 ಮನೆಗಳಿಗೆ ತೆರಳಿ ಪರೀಕ್ಷೆ ನಡೆಸುತ್ತಿದ್ದಾರೆ,   ಅದರಲ್ಲಿ ಐಎಲ್ ಐ ಮತ್ತು SARI ಪ್ರಕರಣಗಳನ್ನು ದಾಖಲಿಸುತ್ತಿರುವುದರಿಂದ ಶೀಘ್ರವಾಗಿ ಅವರಿಗೆ ಚಿಕಿತ್ಸೆ ನೀಡಲು ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.

ಒಂದು ವಾರ್ಡ್ ಗೆ 2 ಆ್ಯಂಬುಲೆನ್ಸ್  ಇವೆ, ಪ್ರತಿ ಆಂಬ್ಯುಲೆನ್ಸ್‌ನಲ್ಲಿ ಡ್ಯಾಶ್‌ಬೋರ್ಡ್ ಇದ್ದು, ಅಲ್ಲಿ ಹಾಸಿಗೆಗಳು ಎಲ್ಲಿ ಲಭ್ಯವಿವೆ ಎಂಬ ಮಾಹಿತಿಯನ್ನು ಹೊಂದಿದೆ. ಹೀಗಾಗಿ ರೋಗಿಗಳನ್ನು ಶಿಫ್ಟ್ ಮಾಡಲು ಸಾಧ್ಯವಾಗುತ್ತದೆ ಎಂದು ಹೇಳಿರುವ ಅವರು ಕೊರೋನಾ ಸಮುದಾಯ ಹಂತದಲ್ಲಿ ಹರಡಿದೆ ಎಂಬುದನ್ನು ನಿರಾಕರಿಸಿದರು. ಶೇ.95 ರಷ್ಟು ರೋಗಿಗಳು ಲಕ್ಷಣ ವಿಲ್ಲದವರಾಗಿದ್ದಾರೆ.  ರೋಗ ಲಕ್ಷಣ ಇರುವವರು ಮನೆಯಲ್ಲಿಯೇ ಪ್ರತ್ಯೇಕವಾಗಿ ಇರಲು ಪ್ರೋತ್ಸಾಹಿಸಿ ಎಂದು ಸುಧಾಕರ್ ಹೇಳಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT