ಸಾಂದರ್ಭಿಕ ಚಿತ್ರ 
ರಾಜ್ಯ

ಕೋವಿಡ್-19 ಕರ್ತವ್ಯದಿಂದ ಬಿಡಿಎ ಅಧಿಕಾರಿಗಳಿಗೆ ವಿನಾಯ್ತಿ

ಕೋವಿಡ್-19 ಕರ್ತವ್ಯದಿಂದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ಅಧಿಕಾರಿಗಳಿಗೆ ರಾಜ್ಯ ಸರ್ಕಾರ ವಿನಾಯ್ತಿ ನೀಡಿದೆ.

ಬೆಂಗಳೂರು: ಕೋವಿಡ್-19 ಕರ್ತವ್ಯದಿಂದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ಅಧಿಕಾರಿಗಳಿಗೆ ರಾಜ್ಯ ಸರ್ಕಾರ ವಿನಾಯ್ತಿ ನೀಡಿದೆ.

ಬಿಡಿಎ ಅಧಿಕಾರಿಗಳಿಗೆ ಹಲವು ಜವಾಬ್ದಾರಿಗಳು ಇರುವುದರಿಂದ ವಿನಾಯ್ತಿ ನೀಡಲಾಗಿದೆ ಎಂದು ಆಯುಕ್ತ ಹೆಚ್ ಆರ್ ಮಹದೇವ ತಿಳಿಸಿದ್ದಾರೆ.ಕಾರ್ನರ್ ಸೈಟ್ ಗಳ ಮಾರಾಟ ಮತ್ತು ದಾಖಲಾತಿ ಕೆಲಸ ನೋಡಿಕೊಳ್ಳಬೇಕು. ದೀರ್ಘಾವಧಿಯಿಂದ ಬಾಕಿ ಇರುವ ಅರ್ಕಾವತಿ ಲೇ ಔಟ್ ಸೈಟ್ ಗಳ ಹಂಚಿಕೆ, ರೈತರಿಗೆ ಭೂಮಿ ಮಾರಾಟ ಇತ್ಯಾದಿ ಕೆಲಸಗಳು ಬಾಕಿ ಇರುವಾಗ ಅದರ ಮೇಲೆ ಕೋವಿಡ್-19 ಕರ್ತವ್ಯ ನಿರ್ವಹಿಸುವುದು ಕಷ್ಟವಾಗುತ್ತದೆ ಎಂದು ಮಹದೇವ್ ತಿಳಿಸಿದ್ದಾರೆ.

ಫೆರಿಫೆರಲ್ ರಿಂಗ್ ರಸ್ತೆಗೆ ಭೂಮಿಗಳನ್ನು ವಶೀಕರಣ ಮಾಡುವ ಕೆಲಸದಲ್ಲಿಯೂ ನಮ್ಮ ಅಧಿಕಾರಿಗಳು ನಿರತರಾಗಿದ್ದಾರೆ. ಆದ್ಯತೆ ಮೇಲೆ ನಮಗೆ ಕೆಲಸ ಕೊಡುತ್ತಿದೆ ಸರ್ಕಾರ. ಆಸ್ತಿಗಳ ಮಾರಾಟ, ದಾಖಲಾತಿಯಲ್ಲಿ ಪಾರದರ್ಶಕತೆ ಕಾಪಾಡಲು, ದುರುಪಯೋಗ ಮಾಡಿಕೊಳ್ಳುವುದು ತಪ್ಪಿಸಲು ಬಿಡಿಎ ಡಿಜಿಟಲೀಕರಣಗೊಳಿಸುತ್ತಿದೆ, ಅವುಗಳ ಕೆಲಸವಿರುವಾಗ ಕೋವಿಡ್-19 ಕೆಲಸ ಹೊರೆಯಾಗುತ್ತದೆ ಎಂದು ನಾವು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದೆವು, ಅದಕ್ಕೆ ಸರ್ಕಾರ ವಿನಾಯ್ತಿ ನೀಡಿದೆ ಎಂದು ಮಹದೇವ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT