ಸಾಂದರ್ಭಿಕ ಚಿತ್ರ 
ರಾಜ್ಯ

ಕೋವಿಡ್-19 ಕರ್ತವ್ಯದಿಂದ ಬಿಡಿಎ ಅಧಿಕಾರಿಗಳಿಗೆ ವಿನಾಯ್ತಿ

ಕೋವಿಡ್-19 ಕರ್ತವ್ಯದಿಂದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ಅಧಿಕಾರಿಗಳಿಗೆ ರಾಜ್ಯ ಸರ್ಕಾರ ವಿನಾಯ್ತಿ ನೀಡಿದೆ.

ಬೆಂಗಳೂರು: ಕೋವಿಡ್-19 ಕರ್ತವ್ಯದಿಂದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ಅಧಿಕಾರಿಗಳಿಗೆ ರಾಜ್ಯ ಸರ್ಕಾರ ವಿನಾಯ್ತಿ ನೀಡಿದೆ.

ಬಿಡಿಎ ಅಧಿಕಾರಿಗಳಿಗೆ ಹಲವು ಜವಾಬ್ದಾರಿಗಳು ಇರುವುದರಿಂದ ವಿನಾಯ್ತಿ ನೀಡಲಾಗಿದೆ ಎಂದು ಆಯುಕ್ತ ಹೆಚ್ ಆರ್ ಮಹದೇವ ತಿಳಿಸಿದ್ದಾರೆ.ಕಾರ್ನರ್ ಸೈಟ್ ಗಳ ಮಾರಾಟ ಮತ್ತು ದಾಖಲಾತಿ ಕೆಲಸ ನೋಡಿಕೊಳ್ಳಬೇಕು. ದೀರ್ಘಾವಧಿಯಿಂದ ಬಾಕಿ ಇರುವ ಅರ್ಕಾವತಿ ಲೇ ಔಟ್ ಸೈಟ್ ಗಳ ಹಂಚಿಕೆ, ರೈತರಿಗೆ ಭೂಮಿ ಮಾರಾಟ ಇತ್ಯಾದಿ ಕೆಲಸಗಳು ಬಾಕಿ ಇರುವಾಗ ಅದರ ಮೇಲೆ ಕೋವಿಡ್-19 ಕರ್ತವ್ಯ ನಿರ್ವಹಿಸುವುದು ಕಷ್ಟವಾಗುತ್ತದೆ ಎಂದು ಮಹದೇವ್ ತಿಳಿಸಿದ್ದಾರೆ.

ಫೆರಿಫೆರಲ್ ರಿಂಗ್ ರಸ್ತೆಗೆ ಭೂಮಿಗಳನ್ನು ವಶೀಕರಣ ಮಾಡುವ ಕೆಲಸದಲ್ಲಿಯೂ ನಮ್ಮ ಅಧಿಕಾರಿಗಳು ನಿರತರಾಗಿದ್ದಾರೆ. ಆದ್ಯತೆ ಮೇಲೆ ನಮಗೆ ಕೆಲಸ ಕೊಡುತ್ತಿದೆ ಸರ್ಕಾರ. ಆಸ್ತಿಗಳ ಮಾರಾಟ, ದಾಖಲಾತಿಯಲ್ಲಿ ಪಾರದರ್ಶಕತೆ ಕಾಪಾಡಲು, ದುರುಪಯೋಗ ಮಾಡಿಕೊಳ್ಳುವುದು ತಪ್ಪಿಸಲು ಬಿಡಿಎ ಡಿಜಿಟಲೀಕರಣಗೊಳಿಸುತ್ತಿದೆ, ಅವುಗಳ ಕೆಲಸವಿರುವಾಗ ಕೋವಿಡ್-19 ಕೆಲಸ ಹೊರೆಯಾಗುತ್ತದೆ ಎಂದು ನಾವು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದೆವು, ಅದಕ್ಕೆ ಸರ್ಕಾರ ವಿನಾಯ್ತಿ ನೀಡಿದೆ ಎಂದು ಮಹದೇವ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT