ಸಂಗ್ರಹ ಚಿತ್ರ 
ರಾಜ್ಯ

ಕೊರೋನಾ ಕರ್ತವ್ಯದಿಂದ ಬಿಡಿಎ ಅಧಿಕಾರಿಗಳಿಗೆ ವಿನಾಯಿತಿ

ಮನವಿಯ ಮೇರೆಗೆ ಕೊರೋನಾ ಕರ್ತವ್ಯದಿಂದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಧಿಕಾರಿಗಳಿಗೆ ವಿನಾಯಿತಿ ನೀಡಲಾಗಿದೆ, ಬಿಡಿಎಯಲ್ಲಿ ಹಲವು ಮಹತ್ತರ ಕೆಲಸ ಇರುವುದೇ ಇದಕ್ಕೆ ಕಾರಣ ಎಂದು ಬಿಡಿಎ ಆಯುಕ್ತ ಎಚ್ ಆರ್ ಮಹಾದೇವ್ ಹೇಳಿದ್ದಾರೆ.

ಬೆಂಗಳೂರು: ಮನವಿಯ ಮೇರೆಗೆ ಕೊರೋನಾ ಕರ್ತವ್ಯದಿಂದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಧಿಕಾರಿಗಳಿಗೆ ವಿನಾಯಿತಿ ನೀಡಲಾಗಿದೆ, ಬಿಡಿಎಯಲ್ಲಿ ಹಲವು ಮಹತ್ತರ ಕೆಲಸ ಇರುವುದೇ ಇದಕ್ಕೆ ಕಾರಣ ಎಂದು ಬಿಡಿಎ ಆಯುಕ್ತ ಎಚ್ ಆರ್ ಮಹಾದೇವ್ ಹೇಳಿದ್ದಾರೆ.

ಬಿಡಿಎಯ ವಿನಾಯಿತಿ ಕ್ರಮವನ್ನು ಪ್ರಶ್ನಿಸಿದವರಿಗೆ ಮಹಾದೇವ್ ಉತ್ತರ ನೀಡಿದ್ದಾರೆ. ಮೂಲೆಯ ಸೈಟ್‌ಗಳನ್ನು ಮಾರಾಟ ಮಾಡುವ ಮತ್ತು ನೋಂದಾಯಿಸುವ ಜವಾಬ್ದಾರಿಯನ್ನು ಬಿಡಿಎ ಅಧಿಕಾರಿಗಳಿಗೆ ನೀಡಲಾಗುತ್ತದೆ, ಆದರೆ ಈ ಕೆಲಸ ತಾನಾಗಿಯೇ ಆಗುವುದಿಲ್ಲ,  ಅರ್ಕಾವತಿ ಲೇಔಟ್ ನ ದೀರ್ಘಕಾಲದಿಂದ ಬಾಕಿ ಇರುವ  ನಿವೇಶನಗಳ ಹಂಚಿಕೆ ಮತ್ತು ರೈತರಿಗೆ ಭೂಮಿ ಹಂಚಿಕೆ ಸಂಬಂಧ ಪ್ರಯತ್ನಿಸುತ್ತಿರುವುದಾಗಿ ಅವರು ತಿಳಿಸಿದ್ದಾರೆ.

ಅನಧಿಕೃತವಾಗಿ ನಿರ್ಮಾಣವಾಗಿರುವ ಕಟ್ಟಟಗಳನ್ನು ನಿಯಮಬದ್ಧಗೊಳಿಸುವುದು ಬಹಳ ದೊಡ್ಡ ಕೆಲಸವಾಗಿದೆ, ಪೆರಿಫೆರಲ್ ರಿಂಗ್ ರಸ್ತೆಗಾಗಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಕೆಲಸವನ್ನು ಬಿಡಿಎ ಪೂರ್ಣಗೊಳಿಸುತ್ತಿದೆ. ಆದ್ಯತೆಯ ಮೇರೆಗೆ ಕೆಲಸವನ್ನು ಪ್ರಾರಂಭಿಸಲು ಸರ್ಕಾರ  ಉತ್ಸುಕವಾಗಿದೆ. ಬಿಡಿಎ ತನ್ನ ಕಾರ್ಯಚಟುವಟಿಕೆಯ ಸಂಪೂರ್ಣ ಗಣಕೀಕರಣಕ್ಕಾಗಿ ಯೋಜನೆಯನ್ನು ಸಿದ್ಧಪಡಿಸುತ್ತಿದೆ ಎಂದು ಹೇಳಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT