ಬಂಧಿತ ಆರೋಪಿ ಬಸವರಾಜು ಶಂಕರಪ್ಪ ಕಳಸದ್ 
ರಾಜ್ಯ

ಮಾನವ ಕಳ್ಳ ಸಾಗಾಣಿಕೆ ಮಾಡುತ್ತಿದ್ದವನ ಬಂಧನ: 9 ಯುವತಿಯರ ರಕ್ಷಣೆ

ಮಾನವ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಓರ್ವ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು:  ಮಾನವ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಓರ್ವ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಸವರಾಜು ಶಂಕರಪ್ಪ ಕಳಸದ್ ಬಂಧಿತ ಆರೋಪಿ.

ಬಂಧಿತ ಕೆಲಸದ ಆಮಿಷದ ನೆಪವೊಡ್ಡಿ, ನಂಬಿಸಿ ಅನ್ಯರಾಜ್ಯಗಳ ಯುವತಿಯರನ್ನು ಕರೆತಂದು ನಂತರ ಯುವತಿಯರನ್ನು ಡಾನ್ಸ್ ಬಾರ್​ಗಳಿಗೆ ಸರಬರಾಜು ಮಾಡುತ್ತಿದ್ದನು.‌ ಯುಎಇ, ಫ್ಯುಜಾರಿಯಾಗಳಿಗೆ ಅಕ್ರಮ ಸಾಗಾಣಿಕೆ ಮಾಡಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನು ಆರೋಪಿ ಬಸವರಾಜು ತಾನು ಪರಭಾಷೆಗಳ ಚಲನಚಿತ್ರಗಳಲ್ಲಿ ಸೈಡ್ ಆ್ಯಕ್ಟಿಂಗ್, ಪ್ರೊಡೆಕ್ಷನ್, ಕ್ಯಾಮರಾ ಕೆಲಸ ನಿರ್ವಹಿಸಿದ್ದನೆನ್ನಲಾಗಿದೆ. ಪ್ರಸಿದ್ದ ನಾಯಕ ನಟರ ಜತೆಗೆ ಫೋಟೋ ತೆಗೆಸಿಕೊಳ್ಳುವ ಚಾಳಿ ಈತನಿಗಿದ್ದು ಅದೇ ಫೋಟೋಗಳನ್ನು ಯುವತಿಯರು, ಮಹಿಳೆಯರಿಗೆ ತೋರಿಸಿ ವಂಚನೆಯ ಬಲೆಗೆ ಬೀಳಿಸಿದ್ದ. 

ಇದೀಗ ಆರೋಪಿ ವಿರುದ್ಧ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ವಿಚಾರಣೆ ತೀವ್ರಗೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT