ಬಂಧಿತ ಆರೋಪಿ ಬಸವರಾಜು ಶಂಕರಪ್ಪ ಕಳಸದ್ 
ರಾಜ್ಯ

ಮಾನವ ಕಳ್ಳ ಸಾಗಾಣಿಕೆ ಮಾಡುತ್ತಿದ್ದವನ ಬಂಧನ: 9 ಯುವತಿಯರ ರಕ್ಷಣೆ

ಮಾನವ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಓರ್ವ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು:  ಮಾನವ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಓರ್ವ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಸವರಾಜು ಶಂಕರಪ್ಪ ಕಳಸದ್ ಬಂಧಿತ ಆರೋಪಿ.

ಬಂಧಿತ ಕೆಲಸದ ಆಮಿಷದ ನೆಪವೊಡ್ಡಿ, ನಂಬಿಸಿ ಅನ್ಯರಾಜ್ಯಗಳ ಯುವತಿಯರನ್ನು ಕರೆತಂದು ನಂತರ ಯುವತಿಯರನ್ನು ಡಾನ್ಸ್ ಬಾರ್​ಗಳಿಗೆ ಸರಬರಾಜು ಮಾಡುತ್ತಿದ್ದನು.‌ ಯುಎಇ, ಫ್ಯುಜಾರಿಯಾಗಳಿಗೆ ಅಕ್ರಮ ಸಾಗಾಣಿಕೆ ಮಾಡಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನು ಆರೋಪಿ ಬಸವರಾಜು ತಾನು ಪರಭಾಷೆಗಳ ಚಲನಚಿತ್ರಗಳಲ್ಲಿ ಸೈಡ್ ಆ್ಯಕ್ಟಿಂಗ್, ಪ್ರೊಡೆಕ್ಷನ್, ಕ್ಯಾಮರಾ ಕೆಲಸ ನಿರ್ವಹಿಸಿದ್ದನೆನ್ನಲಾಗಿದೆ. ಪ್ರಸಿದ್ದ ನಾಯಕ ನಟರ ಜತೆಗೆ ಫೋಟೋ ತೆಗೆಸಿಕೊಳ್ಳುವ ಚಾಳಿ ಈತನಿಗಿದ್ದು ಅದೇ ಫೋಟೋಗಳನ್ನು ಯುವತಿಯರು, ಮಹಿಳೆಯರಿಗೆ ತೋರಿಸಿ ವಂಚನೆಯ ಬಲೆಗೆ ಬೀಳಿಸಿದ್ದ. 

ಇದೀಗ ಆರೋಪಿ ವಿರುದ್ಧ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ವಿಚಾರಣೆ ತೀವ್ರಗೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT