ಕೆಆರ್ ಮಾರುಕಟ್ಟೆ (ಸಂಗ್ರಹ ಚಿತ್ರ) 
ರಾಜ್ಯ

ಶ್ರಾವಣ ಬಂತು ಶ್ರಾವಣ: ಲಾಕ್ ಡೌನ್ ಲೆಕ್ಕಿಸದೆ ಕೆಆರ್ ಮಾರುಕಟ್ಟೆಯಲ್ಲಿ ಖರೀದಿಗೆ ಮುಗಿಬಿದ್ದ ಜನ!

ಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚಿನ ಜನ ಸೇರಬಾರದು ಎಂಬ ನಿಯಮವಿದ್ದರೂ ಜನ ಅದನ್ನು ಲೆಕ್ಕಿಸದೇ ಸೋಮವಾರ ಬೆಳಗ್ಗೆ ಕೆಆರ್ ಮಾರುಕಟ್ಟೆಯಲ್ಲಿ ಅಪಾರ ಪ್ರಮಾಣದಲ್ಲಿ ಸೇರಿದ್ದರು.

ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚಿನ ಜನ ಸೇರಬಾರದು ಎಂಬ ನಿಯಮವಿದ್ದರೂ ಜನ ಅದನ್ನು ಲೆಕ್ಕಿಸದೇ ಸೋಮವಾರ ಬೆಳಗ್ಗೆ ಕೆಆರ್ ಮಾರುಕಟ್ಟೆಯಲ್ಲಿ ಅಪಾರ ಪ್ರಮಾಣದಲ್ಲಿ ಸೇರಿದ್ದರು.

ಶ್ರಾವಣ ಮಾಸ ಆರಂಭವಾಗುವುದರ ಜೊತೆಗೆ ಸೋಮವಾರ ಭೀಮನ ಅಮಾವಾಸ್ಯೆ ಪೂಜೆ ಇದ್ದ ಕಾರಣ ಹೂವು ಹಣ್ಣು ಖರೀದಿಗಾಗಿ ಜನ ಮುಗಿಬಿದ್ದಿದ್ದರು. ವ್ಯಾಪಾರಸ್ಥರಿಗಿಂತ ಹೆಚ್ಚಿನ ಪ್ರಮಾಣದಲ್ಲಿ ರೈತರು ತಮ್ಮ ಉತ್ಪನ್ನಗಳನ್ನು ನೇರವಾಗಿ ಮಾರಾಟ ಮಾಡಲು ವಿವಿಧ ಹಳ್ಳಿಗಳಿಂದ ಬಂದಿದ್ದರು.

ಆನೇಕಲ್, ಜಿಗಣಿ ಸೇರಿದಂತೆ ಹಲವು ಕಡೆಗಳಿಂದ ರೈತರು ಕೆ ಆರ್ ಮಾರುಕಟ್ಟೆಗೆ ಆಗಮಿಸಿದ್ದರು. ಲಾಕ್‌ಡೌನ್  ಮತ್ತು ಅನ್‌ಲಾಕ್ ಅವಧಿಯಲ್ಲಿಯೂ ಇಷ್ಟೊಂದು ಪ್ರಮಾಣದ ವ್ಯಾಪಾರ ಮಾಡಿಲ್ಲ ಎಂದು ವ್ಯಾಪಾರಿಗಳು ಹೇಳಿದ್ದಾರೆ.

ವ್ಯಾಪಾರಿಗಳು ಇಷ್ಟೊಂದು ಪ್ರಮಾಣದಲ್ಲಿ ಬರುತ್ತಾರೆಂದು ಬಿಬಿಎಂಪಿ ಮತ್ತು ಪೊಲೀಸರಿಗೆ ತಿಳಿದಿರಲಿಲ್ಲ, ಹೀಗಾಗಿ ಕಿಕ್ಕಿರಿದು ತುಂಬಿದ್ದ ಜನರನ್ನು ನಿಯಂತ್ರಿಸುವುದು ಕಷ್ಟವಾಯಿತು,

ಇವರೆಲ್ಲಾ ತಡರಾತ್ರಿ ಪ್ರಯಾಣಿಸಿ  ತಮ್ಮ ಉತ್ಪನ್ನಳನ್ನು ಮಾರಾಟ ಮಾಡಲು ಬೆಳಗಿನ ಜಾವವೇ ಹೇಗೆ ಬಂದರು ಎಂದು ಅಧಿಕಾರಿಗಳಿಗೆ ಅಚ್ಚರಿ ಮೂಡಿಸಿತು.  ರಾಜ್ಯ ಸರ್ಕಾರದ ನಿಯಮದ ಪ್ರಕಾರ ಬೆಳಗ್ಗೆ 5ಗಂಟೆಯಿಂದ ಮಧ್ಯಾಹ್ನ 12 ಗಂಟೆವರಗೆ ಮಾತ್ರ  ವ್ಯಾಪಾರಕ್ಕೆ ಅವಕಾಶವಿದೆ. ಆದರೆ ಅಪಾರ ಸಂಖ್ಯೆಯಲ್ಲಿ ಜನ ಸೇರಿದ ಪರಿಣಾಮ ಬೆಳಗ್ಗೆ 8 ಗಂಟೆ
ವೇಳೆ ಎಲ್ಲಾ ಸಾಮಾಗ್ರಿಗಳು ಮಾರಾಟ ಮಾಡಿ ಮುಗಿದಿತ್ತು, ಆದರೆ ಸಾಮಾಜಿಕ ಅಂತರ ಮಾತ್ರ ಕನಸಿನ ಮಾತಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT