ಸಂಗ್ರಹ ಚಿತ್ರ 
ರಾಜ್ಯ

ಆರೋಗ್ಯ ಸಿಬ್ಬಂದಿಗಳಿಗೆ ಪ್ರತ್ಯೇಕವಾಗಿ ಕೋವಿಡ್ ಕೇಂದ್ರ ತೆರೆದ ಬಾಗಲಕೋಟೆ ವೈದ್ಯರು!

ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಹೋರಾಟ ಮಾಡುತ್ತಿರುವ ಆರೋಗ್ಯ ಸಿಬ್ಬಂದಿಗಳಲ್ಲಿ ಸೋಂಕು ಹೆಚ್ಚಾಗಿ ಕಾಡಲು ಆರಂಭಿಸಿದ್ದು, ಈ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯಲ್ಲಿ ವೈದ್ಯರು, ಅವರ ಕುಟುಂಬ ಸದಸ್ಯರು ಹಾಗೂ ಇತರೆ ಆರೋಗ್ಯ ಸಿಬ್ಬಂದಿಗಳಿಗೆ ಚಿಕಿತ್ಸೆ ನೀಡುವ ಸಲುವಾಗಿಯೇ ಪ್ರತ್ಯೇಕವಾಗಿ ಕೋವಿಡ್ ಕೇಂದ್ರವನ್ನು ತೆರೆಯಲಾಗಿದೆ. 

ಬಾಗಲಕೋಟೆ: ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಹೋರಾಟ ಮಾಡುತ್ತಿರುವ ಆರೋಗ್ಯ ಸಿಬ್ಬಂದಿಗಳಲ್ಲಿ ಸೋಂಕು ಹೆಚ್ಚಾಗಿ ಕಾಡಲು ಆರಂಭಿಸಿದ್ದು, ಈ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯಲ್ಲಿ ವೈದ್ಯರು, ಅವರ ಕುಟುಂಬ ಸದಸ್ಯರು ಹಾಗೂ ಇತರೆ ಆರೋಗ್ಯ ಸಿಬ್ಬಂದಿಗಳಿಗೆ ಚಿಕಿತ್ಸೆ ನೀಡುವ ಸಲುವಾಗಿಯೇ ಪ್ರತ್ಯೇಕವಾಗಿ ಕೋವಿಡ್ ಕೇಂದ್ರವನ್ನು ತೆರೆಯಲಾಗಿದೆ. 

ಈ ಕೋವಿಡ್ ಕೇಂದ್ರ ಕೇಂದ್ರಗಳಲ್ಲಿ 40 ಹಾಸಿಗೆಗಳ ಈ ಸೌಲಭ್ಯದಲ್ಲಿ ವೈದ್ಯರು ಮೊದಲ ತಿಂಗಳಿಗೆ ರೂ. 20,000 ಮತ್ತು ನಂತರದ ತಿಂಗಳುಗಳಲ್ಲಿ ರೂ. 12,000 ರಂತೆ 150 ಖಾಸಗಿ ವೈದ್ಯರು ನೋಂದಾಯಿಸಿಕೊಂಡಿದ್ದರೆ, ಇನ್ನೂ 20 ಮಂದಿಯನ್ನು ನೋಂದಾಯಿಸಿಕೊಳ್ಳುವ ನಿರೀಕ್ಷೆಗಳಿವೆ ಎಂದು ಬಾಗಲಕೋಟೆ ವೈದ್ಯರ ಕೋವಿಡ್ ಕೇರ್ ಕೇಂದ್ರ ತಂಡದ ಅಧ್ಯಕ್ಷ ಡಾ.ಎಸ್. ಎಲ್ ಪಾಟೀಲ್ ತಿಳಿಸಿದ್ದಾರೆ.

ದಾಖಲು ಮಾಡಿಕೊಂಡ ವೈದ್ಯರು ಕೊರೋನಾ ಆರೈಕೆ ಕೇಂದ್ರದಲ್ಲಿ ಆರೋಗ್ಯ ಸಿಬ್ಬಂದಿಗಳು ಕೆಲಸ ಮಾಡುವಂತೆ ಕಡ್ಡಾಯಗೊಳಿಸಲಾಗಿದೆ. ಆರೋಗ್ಯ ಸಿಬ್ಬಂದಿಗಳಿಗೆ ಹಾಗೂ ಅವರ ಕುಟುಂಬ ಸದಸ್ಯರಿಗೆ ರೂ.5 ಲಕ್ಷ ವಿಮೆ ಜೊತೆಗೆ ಉತ್ತಮ ವೇತನ ಮತ್ತು ಉತ್ತಮ ಗುಣಮಟ್ಟದ ಪಿಪಿಇ ಕಿಟ್ ಗಳು, ವಸತಿ ಸೌಕರ್ಯಗಳನ್ನು ಒದಗಿಸಲಾಗುತ್ತದೆ ಎಂದಿದ್ದಾರೆ. 

ಗದಗ, ಬಳ್ಳಾರಿ ಮತ್ತು ತುಮಕೂರು ಸೇರಿದಂತೆ ಅನೇಕ ಜಿಲ್ಲೆಗಳ ಖಾಸಗಿ ವೈದ್ಯರು ಕಳಪೆ ಮಟ್ಟದ ಚಿಕಿತ್ಸೆಯನ್ನು ಎದುರಿಸಿದ ಬಳಿಕ ಇದೀಗ ವಿಶೇಷ ಕೊರೋನಾ ಆರೈಕೆ ಕೇಂದ್ರಗಳನ್ನು ಆರಂಭಿಸಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!