ಬಿ.ಎಸ್. ಯಡಿಯೂರಪ್ಪ 
ರಾಜ್ಯ

ಲಾಕ್ ಡೌನ್ ಮುಂದುವರಿಕೆ ಪ್ರಸ್ತಾಪ ಇಲ್ಲ; ಆಸ್ಪತ್ರೆಗಳ ಹಾಸಿಗೆ, ಆ್ಯಂಬುಲೆನ್ಸ್ ಸಮಸ್ಯೆ ಬಗೆಹರಿಸಿ: ಬಿ.ಎಸ್. ಯಡಿಯೂರಪ್ಪ

ಕೋವಿಡ್ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರವಲ್ಲ,ಲಾಕ್ ಡೌನ್ ಮುಂದುವರೆಸುವ ಯಾವುದೇ ಯೋಜನೆ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದು, ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ದಾಖಲಾಗಲು ಆಗುತ್ತಿರುವ ತೊಡಕು ನಿವಾರಿಸುವ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ನೀಡಿದರು.

ಬೆಂಗಳೂರು: ಕೋವಿಡ್ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರವಲ್ಲ,ಲಾಕ್ ಡೌನ್ ಮುಂದುವರೆಸುವ ಯಾವುದೇ ಯೋಜನೆ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದು, ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ದಾಖಲಾಗಲು ಆಗುತ್ತಿರುವ ತೊಡಕು ನಿವಾರಿಸುವ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ನೀಡಿದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಬೆಂಗಳೂರಿನ ಕೋವಿಡ್ ಪರಿಸ್ಥಿತಿ ಹಾಗೂ ನಿರ್ವಹಣೆ ಕುರಿತು ಎಂಟು ವಲಯಗಳ ಉಸ್ತುವಾರಿ ಸಚಿವರೊಂದಿಗೆ ಸಭೆ ನಡೆಸಿ ಚರ್ಚಿಸಿದರು.

ಖಾಸಗಿ ಆಸ್ಪತ್ರೆಗಳೊಂದಿಗೆ ಸಭೆ ನಡೆಸಿ, ಕೋವಿಡ್ ಹಾಗೂ ನಾನ್ ಕೋವಿಡ್ ರೋಗಿಗಳಿಗೆ ಚಿಕಿತ್ಸಾ ಸೌಲಭ್ಯ ದೊರಕುವುದನ್ನು ಖಾತರಿ ಪಡಿಸುವಂತೆ ಸೂಚಿಸಿದರು. ರೋಗ ಲಕ್ಷಣ ಇಲ್ಲದ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸದೆ, ಕೋವಿಡ್ ಕೇರ್ ಸೆಂಟರ್ ಗಳಿಗೆ ಅಥವ ಹೋಮ್ ಕ್ವಾರಂಟೈನ್ ಹಾಗು ಗೃಹಗಳನ್ನು ಮೂಡಿಸು ವುದು ಮೂಲಕ ತೀವ್ರತರ ರೋಗಲಕ್ಷಣದಿಂದ ಬಳಲುತ್ತಿರುವ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ಒದಗಿಸುವಂತೆ ಸೂಚಿಸಿದರು.
ಆಸ್ಪತ್ರೆ ಯಲ್ಲಿ ಮೃತರಾದವರಿಗೆ ರ್ಯಾಪಿಡ್ ಆಂಟಿಜೆನ್ ಪರೀಕ್ಷೆ ನಡೆಸಿ ಶವವನ್ನು ಕೂಡಲೇ ಹಸ್ತಾಂತರಿ ಸಲು ಅಥವಾ ನಿಯಮಾನುಸಾರ ಅಂತ್ಯಕ್ರಿಯೆ ನಡೆಸಲು ಕ್ರಮ ವಹಿಸಬೇಕು. ಮನೆಯಲ್ಲಿ ಮೃತರಾದವರಿಗೂ ರ್ಯಾಪಿಡ್ ಆಂಟಿಜೆನ್ ಟೆಸ್ಟ್ ನಡೆಸಿ ಮೃತದೇಹವನ್ನು ತುರ್ತಾಗಿ ಅಂತ್ಯಕ್ರಿಯೆ ನಡೆಸಲು‌ ಕ್ರಮ ವಹಿಸುವಂತೆ ಸೂಚಿಸಿದರು. 

ವೈದ್ಯರ ಕೊರತೆ ನಿವಾರಿಸಲು, ಹುದ್ದೆ ಭರ್ತಿ ಪ್ರಕ್ರಿಯೆ ನಡೆಯುತ್ತಿದೆ.ಪ್ರತಿ ವಾರ್ಡಿನಲ್ಲೂ ಸ್ವಯಂ ಸೇವಕರನ್ನು ಗುರುತಿಸಲಾಗಿದೆ ಹಾಗೂ ಅಂಬ್ಯುಲೆನ್ಸ್ ನಿಗದಿ ಪಡಿಸಲಾಗಿದೆ.ಖಾಸಗಿ ಆಸ್ಪತ್ರೆಗಳು ಬೆಡ್ ನೀಡದೆ ಇದ್ದರೆ ಕಠಿಣ ಕ್ರಮ ಕೈಗೊಳ್ಳಬೇಕು. ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರ ದಾಖಲಾತಿ ಮತ್ತು ಹಾಸಿಗೆಗಳ ಲಭ್ಯತೆ ಕುರಿತು ಮಾಹಿತಿ ಒದಗಿಸಲು ಸ್ವಯಂ ಸೇವಕರು ಹಾಗು ನೋಡಲ್ ಅಧಿಕಾರಗಳ ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿಯವರು ತಿಳಿಸಿದರು.

ಪ್ರತಿ ವಾರ್ಡುಗಳಲ್ಲಿ ಕಲ್ಯಾಣ ಮಂಟಪಗಳನ್ನು ಹಾಗು ವಸತಿ ಗೃಹಳನ್ನು ಗುರುತಿಸಲಾಗಿದ್ದು, ಪ್ರತ್ಯೇಕವಾಗಿ ವಾಸಿಸಲು ಕೊಠಡಿಗಳು ಇಲ್ಲದವರಿಗೆ ಕ್ವಾರಂಟೈನ್ ಮಾಡಲು ಈ ಕಲ್ಯಾಣ ಮಂಟಪಗಳನ್ನು ಬಳಸುವಂತೆ ಸೂಚಿಸಿದರು

ರಾಜ್ಯದಲ್ಲಿ ಪರೀಕ್ಷೆಗಳ ಸಂಖ್ಯೆ ಹೆಚ್ಚಿಸುವಂತೆ ಮುಖ್ಯಮಂತ್ರಿಯವರು ನಿರ್ದೇಶನ ನೀಡಿದ್ದು,ಜನ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವ ಸಾಧ್ಯತೆಗಳಿರುವ ಪ್ರದೇಶದಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿ ನಿಯೋಜಿಸುವಂತೆ ತಿಳಿಸಿದರು.

ಪರೀಕ್ಷೆಯ ಫಲಿತಾಂಶ ದೊರೆತ ಎರಡು ಗಂಟೆಗಳೊಳಗೆ ಹಾಸಿಗೆ ಹಂಚಿಕೆ ಮಾಡಿ, ಅಂಬ್ಯುಲೆನ್ಸ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಕ್ರಮ ವಹಿಸಬೇಕು. ಈ ವ್ಯವಸ್ಥೆಯನ್ನು ವೀಕೇಂದ್ರೀಕರಿಸಿ, ವಲಯವಾರು, ಮೇಲ್ವಿಚಾರಣೆ ನಡೆಸುವಂತೆ ಮುಖ್ಯಮಂತ್ರಿಯವರು ಸೂಚಿಸಿದರು.

ರೋಗ ಲಕ್ಷಣ ಇರುವ, 65 ವರ್ಷ ಮೇಲ್ಪಟ್ಟ ವ್ಯಕ್ತಿಗಳಿಗೆ ಮೊದಲ ಆದ್ಯತೆಯ ಮೇರೆಗೆ ಹಾಸಿಗೆ ಹಂಚಿಕೆ ಮಾಡಬೇಕು. ರೋಗಲಕ್ಷಣ ಇಲ್ಲದವರನ್ನು ಕೋವಿಡ್ ಕೇರ್ ಸೆಂಟರ್ ಗೆ ದಾಖಲಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT