ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು ಕೆ.ಸಿ.ಜನರಲ್ ಆಸ್ಪತ್ರೆ ವೈದ್ಯ ಸಿಬ್ಬಂದಿ ಮೇಲೆ ಹಲ್ಲೆ!

ಚಿಕಿತ್ಸೆಗೆ ದಾಖಲಾದ ಮಹಿಳೆಯ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ರೋಗಿಯ ಸಂಬಂಧಿಕರು ಆಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿಯನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಹಲ್ಲೆಗೆ ಯತ್ನ ನಡೆಸಿದ ಘಟನೆ ನಗರದ ಮಲ್ಲೇಶ್ವರದ ಕೆಸಿ.ಜನರಲ್ ಆಸ್ಪತ್ರೆಯಲ್ಲಿ ಮಂಗಳವಾರ ನಡೆದಿದೆ.

ಬೆಂಗಳೂರು: ಚಿಕಿತ್ಸೆಗೆ ದಾಖಲಾದ ಮಹಿಳೆಯ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ರೋಗಿಯ ಸಂಬಂಧಿಕರು ಆಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿಯನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಹಲ್ಲೆಗೆ ಯತ್ನ ನಡೆಸಿದ ಘಟನೆ ನಗರದ ಮಲ್ಲೇಶ್ವರದ ಕೆಸಿ.ಜನರಲ್ ಆಸ್ಪತ್ರೆಯಲ್ಲಿ ಮಂಗಳವಾರ ನಡೆದಿದೆ. 

ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಶ್ರೀರಾಂಪುರದ 43 ವರ್ಷದ ಮಹಿಳೆ ಭಾನುವಾರ ಕೆ.ಸಿ.ಜನರಲ್ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೋನಾ ಪರೀಕ್ಷೆ ಮಾಡಿಸಿ, ಐಸಿಯುವಿನಲ್ಲಿ ಬೆಡ್ ಖಾಲಿ ಇಲ್ಲದ ಕಾರಣ ಜನರಲ್ ವಾರ್ಡ್'ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಐಸಿಯುವಿನಲ್ಲಿ ಚಿಕಿತ್ಸೆ ನೀಡುವಂತೆ ಮಹಿಳೆಯರ ಕುಟುಂಬಸ್ಥರು ಆಗ್ರಹಿಸಿದ್ದರು. 

ಕೊರೋನಾ ವರದಿ ಬಾರದ ಹಿನ್ನೆಲೆಯಲ್ಲಿ ಸಾಮಾನ್ಯ ವಾರ್ಡ್ನಲ್ಲಿ ಚಿಕಿತ್ಸೆ ಮುಂದುವರೆಸಲಾಗಿತ್ತು. ಈ ನಡುವೆ ಮಹಿಳೆಗೆ ಮಂಗಳವಾರ ರಾತ್ರಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಐಸಿಯು ವ್ಯವಸ್ಥೆ ಇಲ್ಲದ ಕಾರಣ ಬೇರೆಡೆ ಕರೆದುಕೊಂಡು ಹೋಗುವಂತೆ ಆಸ್ಪತ್ರೆ ಸಿಬ್ಬಂದಿ ಕುಟುಂಬಸ್ಥರಿಗೆ ಸೂಚಿಸಿದ್ದಾರೆ. 

ಕುಟುಂಬಸ್ಥರು ಬೇರೆ ಆಸ್ಪತ್ರೆ ಹುಡು ಕಾಡುತ್ತಿದ್ದಾಗಲೇ ಮಹಿಳೆ ಮೃತಪಟ್ಟಿದ್ದು, ಸಂಬಂಧಿಕರು ಆಕ್ರೋಶಗೊಂಡು ವೈದ್ಯರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆಂದು ಹೇಳಲಾಗುತ್ತಿದೆ. 

ಕೆಲ ಸಿಬ್ಬಂದಿಗಳಲ್ಲಿ ಕೊರೋನಾ ಪಾಸಿಟಿವ್ ಬಂದಿದ್ದ ಕಾರಣ ಆಸ್ಪತ್ರೆಯಲ್ಲಿ ಐಸಿಯು ಕಾರ್ಯನಿರ್ವಹಿಸುತ್ತಿಲ್ಲ. ಬೇರೆ ಆಸ್ಪತ್ರೆ ಕರೆದೊಯ್ಯುವಂತೆ ತಿಳಿಸಿದ್ದೆವು. ಆದರೆ, ಅದಕ್ಕೆ ಸಂಬಂಧಿಕರು ನಿರಾಕರಿಸಿದ್ದರು. ಮಧ್ಯಾಹ್ನ ವೇಳೆಗೆ ಮಹಿಳೆ ಸಾವನ್ನಪ್ಪಿದ್ದರು. ಬಳಿಕ ಮೃತದೇಹ ತೆಗೆದುಕೊಂಡು ಹೋಗಲು ಮುಂದಾದಾಗ ಬಿಬಿಎಂಪಿ ಕೆಲ ನಿಯಮಗಳನ್ನು ಅನುಸರಿಸಬೇಕಾಗಿರುವುದರಿಂದ ಮೃತದೇಹ ನೀಡಲು ನಾವು ನಿರಾಕರಿಸಿದ್ದೆವು. ಈ ವೇಳೆ ಮಹಿಳೆಯ ಕುಟುಂಬಸ್ಥರು ಮಾತಿನ ಚಕಮಕಿ ನಡೆಸಿದಲು, ಕೆಲವರು ವೈದ್ಯರ ಮೇಲೆ ಹಲ್ಲೆ ಕೂಡ ನಡೆಸಿದರು ಎಂದು ಹಿರಿಯ ವೈದ್ಯರೊಬ್ಬರು ಹೇಳಿದ್ದಾರೆ. 

ಈ ನಡುವೆ ವೈದ್ಯರೊಬ್ಬರು ಘಟನೆಯ ವಿಡಿಯೋ ಮಾಡಿದ್ದು, ಘಟನೆ ಮಂಗಳವಾರ ಸಂಜೆ 4.30ಕ್ಕೆ ನಡೆದಿದೆ ಎನ್ನಲಾಗುತ್ತಿದೆ. 

ವೈದ್ಯರಿಂದ ಯಾವುದೇ ತಪ್ಪುಗಳಾಗದಿದ್ದರೂ ವೈದ್ಯನನ್ನು ತಳ್ಳಿ, ಕೆಟ್ಟ ಶಬ್ಧಗಳಿಂದ ನಿಂದಿಸಿದರು. ಬೇರೆ ಆಸ್ಪತ್ರೆ ಕರೆದೊಯ್ಯುವಂತೆ ತಿಳಿಸಿದರೂ ನಮ್ಮ ಮಾತನ್ನು ಕೇಳಲಿಲ್ಲ. ಸಾವಿಗೆ ನಾವೇ ಕಾರಣ ಎಂದು ಆರೋಪಿಸುತ್ತಿದ್ದಾರೆಂದು ಆಸ್ಪತ್ರೆಯ ಅಧೀಕ್ಷಕ ಡಾ.ಬಿ.ಆರ್.ವೆಂಕಟೇಶಯ್ಯ ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT