ಸಚಿವ ಎಸ್‌.ಟಿ.ಸೋಮಶೇಖರ್ 
ರಾಜ್ಯ

ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸಚಿವ ಎಸ್‌.ಟಿ.ಸೋಮಶೇಖರ್ ದಿಢೀರ್ ಭೇಟಿ

ಸಹಕಾರ ಹಾಗೂ ರಾಜರಾಜೇಶ್ವರಿ ನಗರ ವಲಯದ ಕೋವಿಡ್ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಯಶವಂತಪುರ ಹಾಗೂ ರಾಜರಾಜೇಶ್ವರಿ ನಗರ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ದಿಢೀರ್ ಭೇಟಿ ನೀಡಿ ಪರಿಸ್ಥಿತಿಗಳನ್ನು ಅವಲೋಕಿಸಿದರು.

ಬೆಂಗಳೂರು: ಸಹಕಾರ ಹಾಗೂ ರಾಜರಾಜೇಶ್ವರಿ ನಗರ ವಲಯದ ಕೋವಿಡ್ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಯಶವಂತಪುರ ಹಾಗೂ ರಾಜರಾಜೇಶ್ವರಿ ನಗರ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ದಿಢೀರ್ ಭೇಟಿ ನೀಡಿ ಪರಿಸ್ಥಿತಿಗಳನ್ನು ಅವಲೋಕಿಸಿದರು.

ಕನ್ನಲ್ಲಿ ಹಾಗೂ ಸೂಲಿಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿದ ಸಚಿವರು, ಸ್ಥಿತಿಗತಿಗಳನ್ನು ವೀಕ್ಷಿಸಿದರು.

ಕೋವಿಡ್ 19 ಸೋಂಕಿತರಿಗೆ ಯಾವ ರೀತಿಯ ವ್ಯವಸ್ಥೆ ಇದೆ? ಆ್ಯಂಬುಲೆನ್ಸ್ ವ್ಯವಸ್ಥೆ ಇದೆಯೇ? ಕೋವಿಡ್ ಸೋಂಕಿತರು ಎಷ್ಟು ಮಂದಿ ಇದ್ದಾರೆ? ಹೋಂ ಕ್ವಾರೆಂಟೇನ್ ನಲ್ಲಿದ್ದವರ ಮೇಲೆ ಯಾವ ರೀತಿ ನಿಗಾ ವಹಿಸಲಾಗುತ್ತಿದೆ? ಔಷಧಗಳ ದಾಸ್ತಾನು ಇದೆಯೇ? ಸೇರಿದಂತೆ ಯಾವುದೇ ಸಮಸ್ಯೆಗಳಿದ್ದರೂ ಗಮನಕ್ಕೆ ತನ್ನಿ ಎಂದು ವೈದ್ಯಾಧಿಕಾರಿಗಳಿಗೆ ಸೂಚಿಸಿದರು. 
ಉಪ ವಿಭಾಗಾಧಿಕಾರಿ ಶಿವಣ್ಣ ಸೇರಿದಂತೆ ಹಲವು ಅಧಿಕಾರಿಗಳು ಈ ಸಂದರ್ಭದಲ್ಲಿ ಇದ್ದರು. 

ಕೋಕೋಕೋಲಾ ಫೌಂಡೇಶನ್ ಹಾಗೂ ಸಮರ್ಥನಂ ಟ್ರಸ್ಟ್‌ ವತಿಯಿಂದ ಬಿಬಿಎಂಪಿ ಪೌರ ಕಾರ್ಮಿಕರು ಹಾಗೂ ಸಿಬ್ಬಂದಿ ಕೊಡಲಾಗುತ್ತಿರುವ ಸ್ಯಾನಿಟೈಸರ್, ಮಾಸ್ಕ್, ಹ್ಯಾಂಡ್ ವಾಶ್ ಸಹಿತ ಆರೋಗ್ಯ ಕಿಟ್ ಅನ್ನು ಹೇರೋಹಳ್ಳಿ ವಾರ್ಡ್ ನಂಬರ್ 72 ರಲ್ಲಿ ಸಾಂಕೇತಿಕವಾಗಿ ಸಚಿವ ಸೋಮಶೇಖರ್ ಅವರು ವಿತರಣೆ ಮಾಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT