ರಾಜ್ಯ

ಮಂಗಳೂರು: ಮೀನು ಹಿಡಿಯುವ ದೋಣಿ ಮುಳುಗಡೆ, 6 ಮೀನುಗಾರರು ಪ್ರಾಣಾಪಾಯದಿಂದ ಪಾರು

ದೈತ್ಯ ಅಲೆಗಳಿಗೆ ಸಿಕ್ಕ ಮೀನುಗಾರಿಕಾ ದೋಣಿ ಸಮುದ್ರದಲ್ಲಿ ಮುಳುಗಿದ್ದು ದೋಣಿಯಲ್ಲಿದ್ದ ಆರು ಮಂದಿ ಮೀನುಗಾರರು ಅಚ್ಚರಿಯ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.  

ಮಂಗಳೂರು: ದೈತ್ಯ ಅಲೆಗಳಿಗೆ ಸಿಕ್ಕ ಮೀನುಗಾರಿಕಾ ದೋಣಿ ಸಮುದ್ರದಲ್ಲಿ ಮುಳುಗಿದ್ದು ದೋಣಿಯಲ್ಲಿದ್ದ ಆರು ಮಂದಿ ಮೀನುಗಾರರು ಅಚ್ಚರಿಯ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. 

ಮಂಗಳೂರಿನ ಹಳೆಯಂಗಡಿ ಗ್ರಾಮ ವ್ಯಾಪ್ತಿಯ ಶಿಹಿತ್ಲು ಎಂಬಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದ ಘಟನೆಯಲ್ಲಿ ಮೀನುಗಾರಿಕೆಗೆ ತೆರಳಿದ್ದ ಪ್ರಮೋದ್, ಸುಧಾಕರ್ ಸಾಲಿಯನ್, ಕುಮಾರ್, ಹೇಮಚಂದ್ರ, ಸೋಮನಾಥ್ ಮತ್ತು ಸಿರಾಜ್  ಎನ್ನುವವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೀನುಗಾರರು, ಹವಾಮಾನದಲ್ಲಿನ ಹಠಾತ್ ಬದಲಾವಣೆಗಳಿಂದಾಗಿ ಬೃಹತ್ ಅಲೆಗಳು ಎದ್ದು ದೋಣಿ ಮುಳುಗಿದಾಗ ಸಂಕಟಕ್ಕೆ ಸಿಕ್ಕಿದ್ದರು.ದೋಣಿ ಅಲುಗಾಡಲು ತೊಡಗಿದಾಗ ರಕ್ಷಣೆಗೆ ಮುಂದಾದ ಅವರು  ಮೂವರು ಮೀನುಗಾರರು ದಡಕ್ಕೆ ಈಜಿ ತಮ್ಮನ್ನು ರಕ್ಷಿಸಿಕೊಂಡರೆ ಇತರರನ್ನು ಅದರ ಸಮೀಪದಲ್ಲಿದ್ದ ದೋಣಿಯಲ್ಲಿನ ಜನರು ರಕ್ಷಿಸಿದ್ದಾರೆ. 

ಅದಾಗ್ಯೂ ದೋಣಿ ಅಲೆಗಳ ಹೊಡೆತಕ್ಕೆ ಸಿಕ್ಕು ಮುಳುಗಿದೆ. ಮೀನುಗಾರರಲ್ಲಿ ಕುಮಾರ್ ಎಂಬಾತ ಸ್ವಲ್ಪ ಅನಾರೋಗ್ಯಕ್ಕೆ ಒಳಗಾಗಿದ್ದು ಘಟನೆಯಿಂದ ಸುಮಾರು ಮೂರು ಲಕ್ಷ ರು, ನಷ್ಟವಾಗಿದೆ ಎಂದು ಹೇಳಲಾಗಿದೆ, 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Trump ಭಾಗಿಯಾಗಲಿರುವ ಗಾಜಾ ಶಾಂತಿ ಶೃಂಗಸಭೆಗೆ ಪ್ರಧಾನಿಗೆ ಈಜಿಪ್ಟ್‌ನ ಸಿಸಿ ಆಹ್ವಾನ: US ಅಧ್ಯಕ್ಷರೊಂದಿಗೆ ವೇದಿಕೆ ಹಂಚಿಕೊಳ್ತಾರಾ ಮೋದಿ?

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ಇದೆಂಥಾ ಕ್ರೌರ್ಯ: ಮದ್ಯ ಮಾರಾಟ ನಿಷೇಧ ಉಲ್ಲಂಘಿಸಿದ್ದ ಬ್ರಾಹ್ಮಣನ ಟೀಕಿಸಿ ಪೋಸ್ಟ್; OBC ವ್ಯಕ್ತಿಗೆ ಅದೇ ಬ್ರಾಹ್ಮಣನ ಪಾದ ತೊಳೆದು ನೀರು ಕುಡಿಯುವ ಶಿಕ್ಷೆ!

ಗುಜರಾತ್‌ನಲ್ಲಿ ಎಎಪಿ ರೈತರ ರ್ಯಾಲಿಯಲ್ಲಿ ಹಿಂಸಾಚಾರ; ಕಲ್ಲು ತೂರಿದ ರೈತರು, 3 ಪೊಲೀಸರಿಗೆ ಗಾಯ

SCROLL FOR NEXT