ಸಂಗ್ರಹ ಚಿತ್ರ 
ರಾಜ್ಯ

ಕೊರೋನಾ ಎಫೆಕ್ಟ್: ಚಿಕ್ಕಪೇಟೆ ಅಂಗಡಿಗಳನ್ನು ತೆರೆಯಲು ಸಮ-ಬೆಸ ನಿಯಮ ಜಾರಿಗೊಳಿಸಲು ಚಿಂತನೆ!

ಕೊರೋನಾ ಲಾಕ್ಡೌನ್ ನಿಂದಾಗಿ 45 ದಿನಗಳಿಗೂ ಹೆಚ್ಚು ಕಾಲ ಬಂದ್ ಆಗಿದ್ದ ಚಿಕ್ಕಪೇಟೆಯಲ್ಲಿ ಎಂದಿನಿಂತೆ ವ್ಯಾಪಾರ ವಹಿವಾಟುಗಳು ಪುನರಾರಂಭಗೊಂಡಿದ್ದು, ಇದರ ನಡುವಲ್ಲೇ ಕೆಲವೊಂದು ನಿರ್ಬಂಧಗಳನ್ನು ಬಿಬಿಎಂಪಿ ಅಧಿಕಾರಿಗಳು ಮುಂದುರೆಸಿದ್ದಾರೆ. 

ಬೆಂಗಳೂರು: ಕೊರೋನಾ ಲಾಕ್ಡೌನ್ ನಿಂದಾಗಿ 45 ದಿನಗಳಿಗೂ ಹೆಚ್ಚು ಕಾಲ ಬಂದ್ ಆಗಿದ್ದ ಚಿಕ್ಕಪೇಟೆಯಲ್ಲಿ ಎಂದಿನಿಂತೆ ವ್ಯಾಪಾರ ವಹಿವಾಟುಗಳು ಪುನರಾರಂಭಗೊಂಡಿದ್ದು, ಇದರ ನಡುವಲ್ಲೇ ಕೆಲವೊಂದು ನಿರ್ಬಂಧಗಳನ್ನು ಬಿಬಿಎಂಪಿ ಅಧಿಕಾರಿಗಳು ಮುಂದುರೆಸಿದ್ದಾರೆ. 

ಚಿಕ್ಕಪೇಟೆ ಪ್ರದೇಶದಲ್ಲಿ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಕಳೆದ 45 ದಿನಗಳಿಂದ ಆ ಭಾಗದ ಹಲವು ಪ್ರದೇಶಗಳನ್ನು ಕಂಟೈನ್ಮೆಂಟ್ ಪ್ರದೇಶವೆಂದು ಗುರುತಿಸಿ, ಸೀಲ್ಡೌನ್ ಮಾಡಲಾಗಿತ್ತು. ಹೀಗಾಗಿ ಆ ಪ್ರದೇಶದ ವ್ಯಾಪಾರ ಚಟುವಟಿಕೆಗಳು ಸಂಪೂರ್ಣ ಬಂದ್ ಆಗಿದ್ದವು. 

ಈ ನಡುವೆ ಅಲ್ಲಿನ ವ್ಯಾಪಾರಿ ಸಂಘಟನೆಗಳು ಸೀಲ್ಡೌನ್ ತೆರವುಗೊಳಿಸಿ ವ್ಯಾಪಾರ ವಹಿವಾಟಿಗೆ ಅವಕಾಶ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದರು. ಇದರಂತೆ ವ್ಯಾಪಾರಿಗಳ ಒತ್ತಡಕ್ಕೆ ಮಣಿದ ಬಿಬಿಎಂಪಿಯು ಇದೀಗ ವ್ಯಾಪಾರ ವಹಿವಾಟಿಗೆ ಅವಕಾಶ ಮಾಡಿಕೊಟ್ಟಿದ್ದು, ಕೆಲವೊಂದು ನಿರ್ಬಂಧಗಳನ್ನು ಮುಂದುವರೆಸಿದೆ. 

ಈ ನಡುವೆ ಅಂಗಡಿಗಳನ್ನು ತೆರೆಯಲು ಬಿಬಿಎಂಪಿ ಸಮ-ಬೆಸ ನಿಯಮ ಜಾರಿಗೊಳಿಸಲು ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. ಎಡಭಾಗದ ಅಂಗಡಿಗಳಿಗೆ ಒಂದು ದಿನ ವ್ಯಾಪಾರ ನಡೆಸಲು ಅವಕಾಶ ಮಾಡಿಕೊಟ್ಟರೆ, ಮತ್ತೊಂದು ದಿನ ಬಲಭಾಗದ ಅಂಗಡಿಗಳ ತೆರೆಯಲು ಅವಕಾಶ ಮಾಡಿಕೊಡಲು ಅಧಿಕಾರಿಗಳು ಚಿಂತನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ. 

ಈ ನಡುವೆ ಚಿಕ್ಕಪೇಟೆಯಲ್ಲಿರುವ ಕೆಲ ಜನರು ಕೊರೋನಾ ಪರೀಕ್ಷೆಗೊಳಗಾದ ಸಂದರ್ಭದಲ್ಲಿ ತಪ್ಪಾದ ದೂರವಾಣಿ ಸಂಖ್ಯೆಗಳನ್ನು ನೀಡಿದ್ದು, ಇದು ಅಧಿಕಾರಿಗಳಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. 

ಇದರಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಚಿಕ್ಕಪೇಟೆ ಪರಿಸ್ಥಿತಿ ಕುರಿತಂತೆ ಸಂಬಂಧ ಪಟ್ಟಂತಹ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದು, ದಾಖಲೆಗಳಿಗೆ ನೀಡಲಾಗುವ ದೂರವಾಣಿ ಸಂಖ್ಯೆಗಳಿಗೆ ಒಟಿಪಿ ವ್ಯವಸ್ಥೆ ಅಳವಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ. 

ಬೆಂಗಳೂರು ದಕ್ಷಿಣ ವಲಯದಲ್ಲಿ ಅಲ್ಲದೆ, ಬೆಂಗಳೂರು ಕೇಂದ್ರ ವಲಯದ ಅಡಿಯಲ್ಲಿ ಬರುವ ಸ್ಥಳಗಳಲ್ಲಿನ ಅಂಗಡಿಗಳಿಗೆ ಮಾತ್ರ ವ್ಯಾಪಾರ ನಡೆಸಲು ಅವಕಾಶ ನೀಡಲಾಗಿದೆ. ವ್ಯಾಪಾರಿಗಳು ಭಾರೀ ನಷ್ಟದಲ್ಲಿದ್ದಾರೆ. ಸೋಂಕು ಹೆಚ್ಚಾಗುತ್ತಿರುವ ನಡುವಲ್ಲೂ ನಾವು ಅಂಡಿಗಳನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಿದ ಬಳಿಕ ತೆರೆಯುತ್ತಿದ್ದವೆ. ಮಾರುಕಟ್ಟೆ ಪ್ರದೇಶದಲ್ಲಿ ಯಾವುದೇ ಹೊಸ ಪ್ರಕರಣಗಳು ಪತ್ತೆಯಾಗುವುದಿಲ್ಲ ಎಂಬುದಕ್ಕೆ ನಾನು ಮುಖ್ಯಮಂತ್ರಿಗಳಿಗೆ ಭರವಸೆ ನೀಡುತ್ತೇನೆಂದು ಚಿಕ್ಕಪೇಟೆ ಕ್ಷೇತ್ರದ ಶಾಸಕ ಉದಯ್ ಗರುಡಾಚಾರ್ ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!