ವಿಧಾನಸೌಧ 
ರಾಜ್ಯ

ವಿಧಾನಮಂಡಲ, ವಿಧಾನಸಭೆಯ ಎಲ್ಲಾ ಸಮಿತಿಗಳ ಸಭೆ ನಡೆಸಲು ಸ್ಪೀಕರ್ ಸಮ್ಮತಿ

ವಿಧಾನಸಭೆಯ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಅಧ್ಯಕ್ಷ ಎಚ್‌.ಕೆ.ಪಾಟೀಲ್ ಅವರು ಸ್ಪೀಕರ್ ಅವರಿಗೆ ಪತ್ರ ಬರೆದು ಸಮಿತಿಯ ಸಭೆ ನಡೆಸಲು ಅವಕಾಶ ಕೋರಿದ ಬೆನ್ನಲ್ಲೇ ಸಮಿತಿಗಳ ಸಭೆ ನಡೆಸಲು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅನುಮತಿ ನೀಡಿದ್ದಾರೆ.

ಬೆಂಗಳೂರು: ವಿಧಾನಸಭೆಯ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಅಧ್ಯಕ್ಷ ಎಚ್‌.ಕೆ.ಪಾಟೀಲ್ ಅವರು ಸ್ಪೀಕರ್ ಅವರಿಗೆ ಪತ್ರ ಬರೆದು ಸಮಿತಿಯ ಸಭೆ ನಡೆಸಲು ಅವಕಾಶ ಕೋರಿದ ಬೆನ್ನಲ್ಲೇ ಸಮಿತಿಗಳ ಸಭೆ ನಡೆಸಲು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅನುಮತಿ ನೀಡಿದ್ದಾರೆ.

ಸಮಿತಿ ಸಭೆ ನಡೆಸುವ ವಿಷಯದಲ್ಲಿ ಸ್ಪೀಕರ್ ವಿರುದ್ಧ ಎಚ್.ಕೆ.ಪಾಟೀಲ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್‌ಡೌನ್ ಮಾಡಲು ಸರ್ಕಾರ ತೀರ್ಮಾನ ಕೈಗೊಂಡಿದ್ದ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೆ ಸಮಿತಿ ಸಭೆಗಳನ್ನು ನಡೆಸುವುದನ್ನು ಸ್ಥಗಿತಗೊಳಿಸಲಾಗಿತ್ತು. 

ಪ್ರಸ್ತುತ ರಾಜ್ಯದಲ್ಲಿ ಲಾಕ್‌ಡೌನ್ ತೆರವುಗೊಂಡಿರುವುದರಿಂದ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಂಡು 2020ರ ಆಗಸ್ಟ್ ತಿಂಗಳಿಂದ ಕರ್ನಾಟಕ ವಿಧಾನಮಂಡಲ, ವಿಧಾನಸಭೆಯ ಎಲ್ಲಾ ಸಮಿತಿಗಳ ಸಭೆಗಳನ್ನು ನಡೆಸಲು ಸಭ್ಯಾಧ್ಯಕ್ಷರು ಅನುಮತಿ ನೀಡಿದ್ದಾರೆ ಎಂದು ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ವಿವರ ಇಲ್ಲಿದೆ...

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

SCROLL FOR NEXT