ರಾಜ್ಯ

ಕಸಾಯಿಖಾನೆಗೆ ಸಾಗಿಸುತ್ತಿದ್ದ 17 ಎಮ್ಮೆಗಳ ರಕ್ಷಣೆ: ಇಬ್ಬರ ಬಂಧನ

ಇಲ್ಲಿನ ಹೊಸಂಗಡಿ ಚೆಕ್‌ಪೋಸ್ಟ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 17 ಎಮ್ಮೆಗಳನ್ನು ಅಬ್ಬೈಲು ಪೊಲೀಸರು ಶನಿವಾರ ರಕ್ಷಿಸಿದ್ದಾರೆ.

ಉಡುಪಿ: ಇಲ್ಲಿನ ಹೊಸಂಗಡಿ ಚೆಕ್‌ಪೋಸ್ಟ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 17 ಎಮ್ಮೆಗಳನ್ನು ಅಬ್ಬೈಲು ಪೊಲೀಸರು ಶನಿವಾರ ರಕ್ಷಿಸಿದ್ದಾರೆ.

ಕಸಾಯಿಖಾನೆಗೆ ಎಮ್ಮೆಗಳನ್ನು ಸಾಗಿಸುತ್ತಿದ್ದ ಇಬ್ಬರನ್ನು ಬಂಧಿಸಲಾಗಿದ್ದು, ಬಂಧಿತರನ್ನು ದಾವಣಗರೆ ನಿವಾಸಿ ಮೆಹೂಬ್ ಮತ್ತು ಹಾನಗಲ್‍ ನಿವಾಸಿ ಅಲ್ಲಾ ಬಕ್ಷಿ ಎಂದು ಗುರುತಿಸಲಾಗಿದೆ ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ.

ಶಿವಮೊಗ್ಗದಿಂದ ಬರುತ್ತಿದ್ದ ಟ್ರಕ್ ಅನ್ನು ಹೊಸಂಗಡಿ ಚೆಕ್‌ಪೋಸ್ಟ್‌ನಲ್ಲಿ ಪೊಲೀಸರು ತಡೆದು ಪರಿಶೀಲಿಸಿದಾಗ ಟ್ರಕ್‍ ನಲ್ಲಿ ಅಮಾನವೀಯ ರೀತಿಯಲ್ಲಿ ಎಮ್ಮೆಗಳನ್ನು ತುಂಬಿರುವುದು ಕಂಡುಬಂದಿದೆ. ಬಂಧಿತರನ್ನು ಪ್ರಶ್ನಿಸಲಾಗಿ, ಎಮ್ಮೆಗಳನ್ನು ಹಾವೇರಿಯಿಂದ ಮಂಗಳೂರಿಗೆ ಸಾಗಿಸುತ್ತಿರುವುದಾಗಿ ಹೇಳಿದ್ದಾರೆ.

ಅಮಾಸ್‌ಬೈಲ್ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಅನಿಲ್ ಕುಮಾರ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ, . ಘಟನೆಗೆ ಸಂಬಂಧಿಸಿದಂತೆ ಅಮಾಸ್‌ಬೈಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT