ರಘುವೇಲು 
ರಾಜ್ಯ

ಕೋವಿಡ್ ಗೆ ಬಿಬಿಎಂಪಿಯ ಮತ್ತೋರ್ವ ಸಿಬ್ಬಂದಿ ಸಾವು

ಬಿಬಿಎಂಪಿಯ ಪುಲಿಕೇಶಿನಗರ ಉಪವಿಭಾಗ ಕಚೇರಿಯ ಅಟೆಂಡರ್‌ ಒಬ್ಬರು ಕೋವಿಡ್‌ ಸೋಂಕಿನ ಚಿಕಿತ್ಸೆಗೆ ವೆಂಟಿಲೇಟರ್‌ ಸಿಗದೆ ಮೃತಪಟ್ಟಿದ್ದಾರೆ. 36 ವರ್ಷದ ರಘುವೇಲು ಮೃತಪಟ್ಟ ದುರ್ದೈವಿ. 

ಬೆಂಗಳೂರು: ಬಿಬಿಎಂಪಿಯ ಪುಲಿಕೇಶಿನಗರ ಉಪವಿಭಾಗ ಕಚೇರಿಯ ಅಟೆಂಡರ್‌ ಒಬ್ಬರು ಕೋವಿಡ್‌ ಸೋಂಕಿನ ಚಿಕಿತ್ಸೆಗೆ ವೆಂಟಿಲೇಟರ್‌ ಸಿಗದೆ ಮೃತಪಟ್ಟಿದ್ದಾರೆ. 36 ವರ್ಷದ ರಘುವೇಲು ಮೃತಪಟ್ಟ ದುರ್ದೈವಿ. 

ರಘುವೇಲುಗೆ ಶುಕ್ರವಾರ ಜ್ವರ ಕಾಣಿಸಿಕೊಂಡಿದ್ದು, ಕೋವಿಡ್‌ ಪರೀಕ್ಷೆ ಮಾಡಿಸಿದಾಗ ಸೋಂಕು ದೃಢಪಟ್ಟಿತ್ತು. ಶನಿವಾರ ಬೆಳಿಗ್ಗೆ 
ಅವರನ್ನು ಸಿ.ವಿ.ರಾಮನ್‌ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಶನಿವಾರ ಮಧ್ಯಾಹ್ನದ ವೇಳೆ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು.ಅಲ್ಲಿ ವೆಂಟಿಲೇಟರ್ ವ್ಯವಸ್ಥೆ ಇಲ್ಲದ್ದರಿಂದ ಬೇರೆ ಹಲವು ಆಸ್ಪತ್ರೆಗಳಲ್ಲಿ ವಿಚಾರಿಸಿ, ಕೊನೆಯಲ್ಲಿ ದೇವನಹಳ್ಳಿಯ ಆಕಾಶ್‌ ಆಸ್ಪತ್ರೆಯಲ್ಲಿ ವೆಂಟಿಲೇಟರ್‌ ಇರುವುದಾಗಿ ತಿಳಿದು  ಅಲ್ಲಿಗೆ ಸಾಗಿಸುವಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು ಎಂದು  ಕುಟುಂಬ ಸದಸ್ಯರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT