ಸಭೆಯಲ್ಲಿ ಡಿಕೆ.ಶಿವಕುಮಾರ್ 
ರಾಜ್ಯ

ಕಾಂಗ್ರೆಸ್ ಕೊರೋನಾ ವಾರಿಯರ್ಸ್'ಗೆ ವಿಮೆ

ಕೊರೋನಾ ನಿಯಂತ್ರಿಸಲು ಕಾಂಗ್ರೆಸ್ ಹಮ್ಮಿಕೊಂಡಿರುವ ಆರೋಗ್ಯ ಹಸ್ತೆ ಯೋಜನೆಯಲ್ಲಿ ಕಾರ್ಯನಿರ್ವಹಿಸುವ ಕಾರ್ಯಕರ್ತರಿಗೆ ವಿಮೆ ಮಾಡಿಸಲು ಕೆಪಿಸಿಸಿ ನಿರ್ಧರಿಸಿದೆ ಎಂದು ತಿಳಿದುಬಂದಿದೆ. 

ಬೆಂಗಳೂರು: ಕೊರೋನಾ ನಿಯಂತ್ರಿಸಲು ಕಾಂಗ್ರೆಸ್ ಹಮ್ಮಿಕೊಂಡಿರುವ ಆರೋಗ್ಯ ಹಸ್ತೆ ಯೋಜನೆಯಲ್ಲಿ ಕಾರ್ಯನಿರ್ವಹಿಸುವ ಕಾರ್ಯಕರ್ತರಿಗೆ ವಿಮೆ ಮಾಡಿಸಲು ಕೆಪಿಸಿಸಿ ನಿರ್ಧರಿಸಿದೆ ಎಂದು ತಿಳಿದುಬಂದಿದೆ. 

ಜಿಲ್ಲಾ ಕಾಂಗ್ರೆಸ್, ಬ್ಲಾಕ್ ಕಾಂಗ್ರೆಸ್, ಶಾಸಕರು ಅಥವಾ 2018ರ ವಿಧಾನಸಭೆ ಚುನಾವಣೆ ಅಭ್ಯರ್ಥಿಗಳೊಂದಿಗೆ ಸಮಾಲೋಚನೆ ನಡೆಸಿ ಕಾಂಗ್ರೆಸ್ ಕೊರೋನಾ ವಾರಿಯರ್ಸ್ ಪಟ್ಟಿ ತಯಾರಿಸಲು ಮತ್ತು ಈ ಸಂಬಂಧ ಕಾರ್ಯನಿರ್ವಹಿಸುವ ಸಲುವಾಗಿ ಶಾಸಕ ಅಜಯ್ ಸಿಂಗ್ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. 

ಕಾರ್ಯಕ್ರಮವನ್ನು ಜಾರಿಗೆ ತರುವ ಕುರಿತು ಡಿಕೆ.ಶಿವಕುಮಾರ್ ಅವರು ಶನಿವಾರ ಅಜಯ್ ಸಿಂಗ್ ಹಾಗೂ ಇತರೆ ನಾಯಕರೊಂದಿಗೆ ಸಭೆ ನಡೆಸಿ ಮಾತುಕತೆ ನಡೆಸಿದರು.

ಕೋವಿಡ್ -19 ವಿರುದ್ಧದ ಹೋರಾಟದಲ್ಲಿ ಸರ್ಕಾರಕ್ಕೆ ಸಹಾಯ ಮಾಡುವುದು ಇದರ ಉದ್ದೇಶವಾಗಿದೆ. ನಮ್ಮ ಕೊರೋನಾ ಯೋಧರು ಜನರ ಆರೋಗ್ಯವನ್ನು ಪರೀಕ್ಷಿಸಲು ಥರ್ಮಲ್ ಸ್ಕ್ಯಾನರ್‌ಗಳು ಮತ್ತು ಪಲ್ಸ್ ಆಕ್ಸಿಮೀಟರ್‌ಗಳೊಂದಿಗೆ ಮನೆಗಳಿಗೆ ತೆರಳುತ್ತಾರೆ. ಆರೋಗ್ಯ ತಪಾಸಣೆ ಬಳಿಕ ಅಗತ್ಯವಿದ್ದರೆ, ಜನರನ್ನು ಆಸ್ಪತ್ರೆಗಳಿಗೆ ಕಳುಹಿಸುವ ಕೆಲಸ ಮಾಡುತ್ತಾರೆಂದು ಮಾಜಿ ಕೆಪಿಸಿಸಿ ಕಾರ್ಯದರ್ಶಿ ಮತ್ತು 20 ಮಂದಿಯ ಸಮಿತಿಯಲ್ಲೊಬ್ಬರಾಗಿರುವ ಎಂ.ರಾಮಲಿಂಗಯ್ಯ ಅವರು ಹೇಳಿದ್ದಾರೆ. 

ಪ್ರತಿ ಪಂಚಾಯತಿ ಹಾಗೂ ವಾರ್ಡ್‌ಗೆ ಇಬ್ಬರು ಕಾಂಗ್ರೆಸ್ ಕೊರೋನಾ ಯೋಧರನ್ನು ನಿಯೋಜಿಸಲಾಗುತ್ತದೆ. ಇವರೂ ಕೂಡ ಸ್ಥಳೀಯ ಆಡಳಿತಕ್ಕೆ ಸಹಾಯ ಮಾಡುವ ಆಶಾ ಕಾರ್ಯಕರ್ತರಂತೆಯೇ ಕೆಲಸ ಮಾಡುತ್ತಾರೆ. ರಾಜ್ಯಾದ್ಯಂತ ಕೊರೋನಾ ವಾರಿಯರ್ಸ್ ರಂತೆ ಕೆಲಸ ಮಾಡುವ 15 ಸಾವಿರ ಯುವಕರನ್ನು ಈಗಾಗಲೇ ಪಕ್ಷ ಗುರುತಿಸಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದ್ವಿಪಕ್ಷೀಯ ಸಂಬಂಧ ವೃದ್ಧಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಡಿ. 5–6 ರಂದು ಭಾರತಕ್ಕೆ ಭೇಟಿ ನಿರೀಕ್ಷೆ

ಗಾಂಧಿ ಜಯಂತಿ 2025: ರಾಜ್‌ಘಾಟ್‌ನಲ್ಲಿ ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಪುಷ್ಪ ನಮನ

1st Test: Mohammed Siraj ದಾಳಿಗೆ ಪತರುಗುಟ್ಟಿದ West Indies, ಭೋಜನ ವಿರಾಮದ ವೇಳೆಗೆ 90/5

ಸರ್ಕಾರ ವಿರುದ್ಧ ಸೋನಮ್ ವಾಂಗ್‌ಚುಕ್ ಪತ್ನಿಯಿಂದ ಕಿರುಕುಳದ ಆರೋಪ: ಪ್ರಧಾನಿ, ರಾಷ್ಟ್ರಪತಿಗಳಿಗೆ ಪತ್ರ, ಪತಿಯನ್ನು ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹ

ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗದು: ಸಿಎಂ ಸಿದ್ದರಾಮಯ್ಯ

SCROLL FOR NEXT