ಅಬ್ದುಲ್ ಕಲಾಂ 
ರಾಜ್ಯ

ಎಪಿಜೆ ಅಬ್ದುಲ್ ಕಲಾಂ ಪುಣ್ಯತಿಥಿ: ಮುಖ್ಯಮಂತ್ರಿ, ಸಚಿವರಿಂದ ಗೌರವ ನಮನ

ಮಾಜಿ ರಾಷ್ಟ್ರಪತಿ, ಮಿಸೈಲ್ ಮ್ಯಾನ್‌ ಎಂದೇ ಖ್ಯಾತರಾಗಿದ್ದ ಎಪಿಜೆ ಅಬ್ದುಲ್ ಕಲಾಂ ಅವರ ಪುಣ್ಯತಿಥಿಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸೇರಿ ಹಲವು ಗಣ್ಯರು ಗೌರವ ನಮನ ಸಲ್ಲಿಸಿದ್ದಾರೆ.

ಬೆಂಗಳೂರು: ಮಾಜಿ ರಾಷ್ಟ್ರಪತಿ, ಮಿಸೈಲ್ ಮ್ಯಾನ್‌ ಎಂದೇ ಖ್ಯಾತರಾಗಿದ್ದ ಎಪಿಜೆ ಅಬ್ದುಲ್ ಕಲಾಂ ಅವರ ಪುಣ್ಯತಿಥಿಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸೇರಿ ಹಲವು ಗಣ್ಯರು ಗೌರವ ನಮನ ಸಲ್ಲಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿ, ಭಾರತದ ’ಮಿಸೈಲ್ ಮ್ಯಾನ್’, ದೇಶದ 11ನೇ ರಾಷ್ಟ್ರಪತಿಗಳಾಗಿದ್ದ ಭಾರತರತ್ನ ಎ.ಪಿ.ಜಿ. ಅಬ್ದುಲ್ ಕಲಾಂ ಅವರ ಪುಣ್ಯತಿಥಿಯಂದು ಅವರನ್ನು ಸ್ಮರಿಸೋಣ. ಅವರ ಬದುಕು, ಸಾಧನೆ, ವ್ಯಕ್ತಿತ್ವಗಳು ಆದರ್ಶಪ್ರಾಯವಾಗಿದ್ದು, ಕೋಟ್ಯಂತರ ಜನರಿಗೆ ನಿರಂತರ ಸ್ಫೂರ್ತಿ ನೀಡುತ್ತಿವೆ ಎಂದು ತಿಳಿಸಿದ್ದಾರೆ.

ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಟ್ವೀಟ್ ಮಾಡಿ, ದೇಶದ ಹೆಮ್ಮೆಯ ಮಿಸೈಲ್ ಮ್ಯಾನ್ ಎಂದೇ ಖ್ಯಾತರಾಗಿದ್ದ ಎ ಪಿ ಜೆ ಅಬ್ದುಲ್ ಕಲಾಂ ಅವರ ಪುಣ್ಯ ತಿಥಿಯಂದು ಸ್ಮರಿಸುತ್ತಾ. ವಿಶ್ವ ಕಂಡ ಶ್ರೇಷ್ಠ ವಿಜ್ಞಾನಿ, ದೇಶದ ರಾಷ್ಟ್ರಪತಿಗಳಾಗಿ ಭಾರತ ಮಾತೆಯ ಸೇವೆ ಸಲ್ಲಿಸಿದ ನಿಮಗೆ ಅನಂತ ಕೋಟಿ ನಮನಗಳು ಎಂದು ತಿಳಿಸಿದ್ದಾರೆ.

ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಭಾರತದ ಕ್ಷಿಪಣಿ ಪಿತಾಮಹ, ಭಾರತದ 11ನೇ ರಾಷ್ಟ್ರಪತಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಪುಣ್ಯ ಸ್ಮರಣೆ ಇಂದು. "ಪ್ರತಿಯೊಬ್ಬರೂ ಜೀವನದಲ್ಲಿ ದುಃಖವನ್ನು ಅನುಭವಿಸುತ್ತಾರೆ, ಈ ದುಃಖವು ಎಲ್ಲರಲ್ಲೂ ತಾಳ್ಮೆಯನ್ನು ಪರೀಕ್ಷಿಸುತ್ತದೆ." ಎಂದು ಹೇಳಿ ಹೋದರು. ಈ ದೇಶದ ಅಭಿವೃದ್ಧಿಗೆ ಮತ್ತೆ ಹುಟ್ಟಿ ಬನ್ನಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಟ್ವಿಟ್ ಮಾಡಿದ್ದಾರೆ.

ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಟ್ವೀಟ್ ಮಾಡಿ, ಪೀಪಲ್ಸ್ ಪ್ರೆಸಿಡೆಂಟ್" ಎಂದೇ ಪ್ರಖ್ಯಾತರಾದ, ಭಾರತ ಕಂಡ ಮಹಾನ್ ಚೇತನ, ಮಾಜಿ ರಾಷ್ಟ್ರಪತಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಪುಣ್ಯತಿಥಿಯಂದು ಗೌರವ ಪೂರ್ವಕ ನಮನಗಳು. ಅಬ್ದುಲ್ ಕಲಾಂ ಅವರ ಆದರ್ಶಪ್ರಾಯ ಜೀವನವು ಪ್ರತಿಯೊಬ್ಬ ಭಾರತೀಯನಿಗೂ ಸ್ಫೂರ್ತಿಯಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT