ಆಸ್ಪತ್ರೆಗೆ ಭೇಟಿ ನೀಡಿರುವ ಸಚಿವ ಭೈರತಿ ಬಸವರಾಜ್ 
ರಾಜ್ಯ

ಸೋಂಕಿತರಿಗೆ ಹಾಸಿಗೆ ನೀಡಿ, ಇಲ್ಲವೇ ವಿದ್ಯುತ್, ನೀರು ಸರಬರಾಜು ಕಡಿತ ಎದುರಿಸಿ: ಮಣಿಪಾಲ್ ಆಸ್ಪತ್ರೆ ಸಿಇಒಗೆ ಸಚಿವ ಖಡಕ್ ಎಚ್ಚರಿಕೆ

ಕೊರೋನಾ ಸೋಂಕಿತರಿಗೆ ಶೇ.50ರಷ್ಟು ಹಾಸಿಗೆಗಳನ್ನು ನೀಡಿ ಸರ್ಕಾರದೊಂದಿಗೆ ಸಹಕಾರ ನೀಡದೇ ಹೋದಲ್ಲಿ ಆಸ್ಪತ್ರೆ ನೀಡಲಾಗುತ್ತಿರುವ ವಿದ್ಯುತ್ ಹಾಗೂ ನೀರು ಸರಬರಾಜನ್ನು ಕಡಿತಗೊಳಿಸಲಾಗುತ್ತದೆ ಎಂದು ವೈಟ್'ಫೀಲ್ಡ್'ನಲ್ಲಿರುವ ಮಣಿಪಾಲ್ ಆಸ್ಪತ್ರೆಯ ಸಿಇಒಗೆ ಸಚಿವ ಭೈರತಿ ಬಸವರಾಜ್ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ. 

ಬೆಂಗಳೂರು: ಕೊರೋನಾ ಸೋಂಕಿತರಿಗೆ ಶೇ.50ರಷ್ಟು ಹಾಸಿಗೆಗಳನ್ನು ನೀಡಿ ಸರ್ಕಾರದೊಂದಿಗೆ ಸಹಕಾರ ನೀಡದೇ ಹೋದಲ್ಲಿ ಆಸ್ಪತ್ರೆ ನೀಡಲಾಗುತ್ತಿರುವ ವಿದ್ಯುತ್ ಹಾಗೂ ನೀರು ಸರಬರಾಜನ್ನು ಕಡಿತಗೊಳಿಸಲಾಗುತ್ತದೆ ಎಂದು ವೈಟ್'ಫೀಲ್ಡ್'ನಲ್ಲಿರುವ ಮಣಿಪಾಲ್ ಆಸ್ಪತ್ರೆಯ ಸಿಇಒಗೆ ಸಚಿವ ಭೈರತಿ ಬಸವರಾಜ್ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ. 

ಸಚಿವರು ಆಸ್ಪತ್ರೆಗೆ ಭೇಟಿ ನೀಡಿದ್ದು, ಈ ವೇಳೆ ಆಸ್ಪತ್ರೆಯ ಸಿಬ್ಬಂದಿಗಳು ಶೇ.50ರಷ್ಟು ಹಾಸಿಗೆಗಳನ್ನು ಸೋಂಕಿತರಿಗೆ ನೀಡಲು ಸಾಧ್ಯವಿಲ್ಲ ಎಂಬುದನ್ನು ಹೇಳಿ, ಸಚಿವರನ್ನು ಸಮಾಧಾನ ಪಡಿಯಲು ಯತ್ನಿಸಿದರು. 

ಖಾಸಗಿ ಆಸ್ಪತ್ರೆಗಳೂ ಕೂಡ ಸೋಂಕಿತರಿಗೆ ಹಾಸಿಗೆ ನೀಡಬೇಕೆಂಬ ಮಾತುಗಳು ಹಾಗೂ ಕಾರ್ಯಾಚರಣೆ ನಗರದಲ್ಲಿ ಮಾತ್ರ ಕೇಳಿ ಬರುತ್ತಿತ್ತು. ಆದರೆ, ಇದೀಗ ಎಲ್ಲಾ ವಲಯಗಳಲ್ಲೂ ಕೇಳಿಬರಲು ಆರಂಭಿಸಿದೆ. ಇದೀಗ ಆಸ್ಪತ್ರೆಗಳ ಹಾಸಿಗೆ ಲಭ್ಯತೆ ಕುರಿತು ಎಲ್ಲಾ ವಲಯಗಳನ್ನೂ ನೀಡಲಾಗುತ್ತಿದೆ. ಪ್ರತೀ ಬಾರಿ ಸಭೆಯಲ್ಲಿ ಮಾತನಾಡುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಲಯವಾರು ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಹಾಸಿಗೆ ಲಭ್ಯವಿರುವಂತೆ ನೋಡಿಕೊಳ್ಳಬೇಕೆಂದು ಆಯಾ ವಲಯಗಳ ಉಸ್ತುವಾರಿ ಸಚಿವರಿಗೆ ಸೂಚನೆ ನೀಡುತ್ತಲೇ ಇದ್ದಾರೆ. 

ಮಲ್ಲೇಶ್ವರಂನಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ 100 ಹಾಸಿಗೆಗಳ ಸೌಲಭ್ಯವಿದ್ದು, ಈ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿತರಿಗೆ ಸಂಪೂರ್ಣವಾಗಿ ಹಾಸಿಕೆಗಳನ್ನು ಮೀಸಲಿಡಲಾಗಿದೆ. ಸೋಂಕು ಭೀತಿ ಹಿನ್ನೆಲೆಯಲ್ಲಿ ಎಲ್ಲಾ ಆಸ್ಪತ್ರೆಗಳಲ್ಲೂ ಕೊರೋನಾ ಸೋಂಕಿತರನ್ನು ದಾಖಲು ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ. ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಪ್ರತ್ಯೇತ ಕಟ್ಟಡಗಳಿದ್ದರೆ ಮಾತ್ರ ಚಿಕಿತ್ಸೆ ನೀಡಲು ಸಾಧ್ಯ ಎಂದು ಆಸ್ಪತ್ರೆಯ ಮೂಲಗಳು ಮಾಹಿತಿ ನೀಡಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Madhya Pradesh: ದುರ್ಗಾದೇವಿ ಮೂರ್ತಿ ವಿಸರ್ಜನೆ ವೇಳೆ ದುರಂತ, ಮಹಿಳೆಯರು, ಮಕ್ಕಳು ಸೇರಿದಂತೆ 14 ಮಂದಿ ಸಾವು!Video

ಈ ಬಾರಿ 'ಮೈಸೂರು ದಸರಾ' ಯಶಸ್ವಿ; ಬೆಳೆ ಹಾನಿಯಾದ ಎಲ್ಲ 10 ಲಕ್ಷ ಹೆಕ್ಟೇರ್ ಗೂ ಸಮೀಕ್ಷೆ ನಂತರ ಪರಿಹಾರ: ಸಿಎಂ ಸಿದ್ದರಾಮಯ್ಯ

'RSS ನಲ್ಲಿ ಒಬ್ಬ ವ್ಯಕ್ತಿಯೂ ಇಲ್ಲ': ಪ್ರಧಾನಿ ಮೋದಿ ಹೇಳಿಕೆಗೆ ಓವೈಸಿ ತಿರುಗೇಟು!

2026 T20 World Cup: ಅರ್ಹತೆ ಪಡೆದ ನಮೀಬಿಯಾ, ಜಿಂಬಾಬ್ವೆ!

ಅಂಬೇಡ್ಕರ್ ಸಿದ್ಧಾಂತದಂತೆ ಬದುಕಿದ್ದೇವೆ; RSS ಕಾರ್ಯಕ್ರಮಕ್ಕೆ ಹೋಗಲ್ಲ: CJI ಗವಾಯಿ ತಾಯಿ ಪತ್ರ

SCROLL FOR NEXT