ಸಾಂದರ್ಭಿಕ ಚಿತ್ರ 
ರಾಜ್ಯ

ಹಳೆ ನೋಟು ಚಲಾವಣೆಗೆ ಯತ್ನ: ಮೂವರು ಆರೋಪಿಗಳನ್ನು ಬಂಧಿಸಿ 30 ಲಕ್ಷ ರೂ. ನೋಟು ವಶ

ನಿಷೇಧಿಸಲ್ಪಟ್ಟ ಹಳೆಯ ನೊಟುಗಳನ್ನು ಚಲಾವಣೆಯಲ್ಲಿರುವ ನೋಟುಗಳಿಗೆ ಕಮಿಷನ್‌ಗಾಗಿ ಸಾರ್ವಜನಿಕರಲ್ಲಿ ವಿನಿಮಯ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ಉತ್ತರ ವಿಭಾಗ ಪೊಲೀಸರು, ಆರೋಪಿಗಳಿಂದ 30 ಲಕ್ಷ ರೂ.ಮೌಲ್ಯದ ನಿಷೇಧಿತ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ

ಬೆಂಗಳೂರು: ನಿಷೇಧಿಸಲ್ಪಟ್ಟ ಹಳೆಯ ನೊಟುಗಳನ್ನು ಚಲಾವಣೆಯಲ್ಲಿರುವ ನೋಟುಗಳಿಗೆ ಕಮಿಷನ್‌ಗಾಗಿ ಸಾರ್ವಜನಿಕರಲ್ಲಿ ವಿನಿಮಯ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ಉತ್ತರ ವಿಭಾಗ ಪೊಲೀಸರು, ಆರೋಪಿಗಳಿಂದ 30 ಲಕ್ಷ ರೂ.ಮೌಲ್ಯದ ನಿಷೇಧಿತ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ.

ಮಾಗಡಿ ರಸ್ತೆಯ ಕೆ.ಪಿ.ಅಗ್ರಹಾರ ನಿವಾಸಿ ಕಿರಣ್ ಕುಮಾರ್, ನಾಗರಬಾವಿ, ಮಾನಸನಗರದ ಪ್ರವೀಣ್ ಕುಮಾರ್ ಬಿ.ಆರ್., ಕಾಮಾಕ್ಷಿಪಾಳ್ಯದ ಪವನ್ ಕುಮಾರ್ ಬಂಧಿತ ಆರೋಪಿಗಳು.

ಜಾಲಹಳ್ಳಿಯ ಎಚ್‌ಎಂಟಿ ಸರ್ವೀಸ್ ರಸ್ತೆಯಲ್ಲಿರುವ ಪ್ರೆಸ್ಟೀಜ್ ಕೆನ್ಸಿಂಗ್ಟನ್ ಅಪರ್ಟ್‌ಮೆಂಟ್ ಬಳಿ ಮೂವರು ಆರೋಪಿಗಳು ಮಾರುತಿ ಸುಜುಕಿ ಜೆನ್‌ ಕಾರಿನಲ್ಲಿ 1000 ರೂಪಾಯಿ ಮುಖಬೆಲೆಯ ಹಳೆ ನೋಟುಗಳನ್ನು ತಂದು ಕಮಿಷನ್‌ಗಾಗಿ ಸಾರ್ವಜನಿಕರಿಗೆ ಚಲಾವಣೆ ಮಾಡಲು ಬಂದಿದ್ದಾರೆ ಎಂಬುದರ ಕುರಿತು ದೊರೆತ ಖಚಿತ ಮಾಹಿತಿ ಮೇರೆಗೆ  ಪೊಲೀಸರು ದಾಳಿ ನಡೆಸಿ, ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳ ಕಾರಿನಲ್ಲಿ ಒಂದು ಲಗ್ಗೇಜ್‌ ಬ್ಯಾಗಿನಲ್ಲಿ ನಿಷೇಧಿಸಲ್ಪಟ್ಟ 1000 ರೂ.ಮುಖಬೆಲೆಯ 30 ಲಕ್ಷ ರೂ.ಮೌಲ್ಯದ ಹಳೆಯ ನೋಟುಗಳಿದ್ದವು, ಅವುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಈ ಸಂಬಂಧ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳನ್ನು ಹೆಚ್ಚಿನ ವಿಚಾರಣೆ ನಡೆಸಲಾಗಿದ್ದು, ಈ ಹಣವನ್ನು ಬೆಂಗಳೂರಿನ ಮಾಳಗಾಳದ ನಿವಾಸಿ ಹನುಮಂತೇಗೌಡ ಮತ್ತು ವಿಜಯನಗರದ ನಿವಾಸಿ ಸೋಮಶೇಖರ್ ಎಂಬವರು ತಮಗೆ ಕೊಟ್ಟು, ನೀವು ಸಾರ್ವಜನಿಕರಿಗೆ ಶೇಕಡಾ 10ರಂತೆ ಹೊಸ ನೋಟು ಕೊಟ್ಟು ಹಳೆ ನೋಟುಗಳನ್ನು ಖರೀದಿಸಿದರೆ ನಮಗೆ ರಿಸರ್ವ್ ಬ್ಯಾಂಕ್‌ನಲ್ಲಿ ಅಧಿಕಾರಿಗಳು ಪರಿಚಯವಿದ್ದು, ಈ ಹಳೆ ನೋಟುಗಳನ್ನು ಕಮಿಷನ್‌ಗೆ ತಾವೇ ರಿಸರ್ವ್ ಬ್ಯಾಂಕ್‌ನಲ್ಲಿ ಮೂರು ಪಟ್ಟು ಹೆಚ್ಚಿಗೆ ಅಂದರೆ ಶೇಕಡಾ 30ರಂತೆ ಹೊಸ ನೋಟುಗಳಿಗೆ ಬದಲಾವಣೆ
ಮಾಡಿಸಿಕೊಡುವುದಾಗಿ ಜನರಿಗೆ ನಂಬಿಸಿ ಚಲಾವಣೆ ಮಾಡಲು ಕಳುಹಿಸಿದ್ದಾರೆ ಎಂಬುದು ತನಿಖೆಯಿಂದ ತಿಳಿದುಬಂದಿದೆ.

ಯಶವಂತಪುರ ಉಪ ವಿಭಾಗದ ಸಹಾಯ ಪೊಲೀಸ್ ಆಯುಕ್ತ ಎನ್‌.ಟಿ.ಶ್ರೀನಿವಾಸ ರೆಡ್ಡಿ ಅವರ ಮಾರ್ಗದರ್ಶನದಲ್ಲಿ ಜಾಲಹಳ್ಳಿ ಠಾಣೆ ಪೊಲೀಸ್ ಇನ್ಸ್ ಪೆಕ್ಟರ್ ಗುರುಪ್ರಸಾದ್, ಸಬ್‌ ಇನ್ಸ್ ಪೆಕ್ಟರ್‌ಗಳಾದ ಲೇಪಾಕ್ಷಮೂರ್ತಿ, ಹರಿನಾಥಬಾಬು, ಮಾರುತಿ, ಸಿಬ್ಬಂದಿ ಶ್ರೀನಿವಾಸಮೂರ್ತಿ, ನರೇಶ್, ರವಿಚಂದ್ರ, ಸರ್ಫರಾಜ್ ನವಾಜ್, ನವೀನ್ ಕುಮಾರ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

SCROLL FOR NEXT