ಸಾಂದರ್ಭಿಕ ಚಿತ್ರ 
ರಾಜ್ಯ

ಮಂಡ್ಯ: ಕೌಟುಂಬಿಕ ಕಲಹ, ಮಗನಿಂದಲೇ ತಾಯಿ ಹತ್ಯೆ ಶಂಕೆ?

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಗನಿಂದಲೇ ತಾಯಿಯ ಬರ್ಬರ ಹತ್ಯೆ ನಡೆದಿರುವ ಘಟನೆ ಮಂಡ್ಯದ ವಿದ್ಯಾನಗರದ ಕೆ.ಆರ್.ರಸ್ತೆಯಲ್ಲಿ ಬುಧವಾರ ಸಂಜೆ ನಡೆದಿದೆ.

ಮಂಡ್ಯ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಗನಿಂದಲೇ ತಾಯಿಯ ಬರ್ಬರ ಹತ್ಯೆ ನಡೆದಿರುವ ಘಟನೆ ಮಂಡ್ಯದ ವಿದ್ಯಾನಗರದ ಕೆ.ಆರ್.ರಸ್ತೆಯಲ್ಲಿ ಬುಧವಾರ ಸಂಜೆ ನಡೆದಿದೆ.

ಮಧುಸೂಧನ್ ಅವರ ಪತ್ನಿ ಶ್ರೀಲಕ್ಷ್ಮಿ(೪೫)ಮಗನಿಂದ ಕೊಲೆಯಾದ ದುರ್ದೈವಿ. ಮೂಲತಃ ಚಿಕ್ಕಮಗಳೂರಿನವರಾದ ಶ್ರೀ ಲಕ್ಷ್ಮಿ ಅವರು ಮೇಲುಕೋಟೆಯ ಮಧುಸೂಧನ್ ಅವರನ್ನು ವಿವಾಹವಾಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.

ಗಂಡ ಮತ್ತು ಇನ್ನೊಬ್ಬ ಕಿರಿಯ ಮಗ ಹೊರಗೆ ಹೋಗಿದ್ದ ಸಮಯದಲ್ಲಿ ಮನೆಗೆ ಬಂದ ಈತ ತಾಯಿಯೊಂದಿಗೆ ಜಗಳಕ್ಕಿಳಿದಿದ್ದಾನೆ, ಈ ವೇಳೆ ಇಬ್ಬರ ನಡುವಿನ ಜಗಳ ಅತಿರೇಕಕ್ಕೆ ಹೋಗಿ ಮಗನೇ ಚಾಕುವಿನಿಂದ ಇರಿದು ತಾಯಿಯನ್ನು ಕೊಂದು ಪರಾರಿಯಾಗಿದ್ದಾನೆ ಎನ್ನಲಾಗಿದೆ. 

ರಾತ್ರಿ ಮನೆಗೆ ಬಂದ ಗಂಡ ಮತ್ತು ಮಕ್ಕಳು ಶ್ರೀಲಕ್ಷ್ಮಿ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡು ತಕ್ಷಣ ಪೊಲೀಸರಿಗೆ ಸುದ್ಧಿ ಮುಟ್ಟಿಸಿದ್ದಾರೆ. 

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಪರಶುರಾಮ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿ.ಜೆ. ಶೋಭರಾಣಿ, ಡಿವೈಎಸ್ಪಿ ನವೀನುಕುಮಾರ್, ಸಿಪಿಐ ಸಂತೋಷ್ ಅವರನ್ನೊಳಗೊಂಡ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. 

ತಾಯಿಯನ್ನು ಕೊಲೆ ಮಾಡಿ ನಾಪತ್ತೆಯಾಗಿದ್ದ ಆರೋಪಿ ಮಗ ಸಿಕ್ಕಿಬಿದ್ದಿದ್ದು ಪೊಲೀಸರ ವಶದಲ್ಲಿದ್ದಾನೆ. ಕೊಲೆಗೆ ನಿಕರ ಕಾರಣ ತಿಳಿದು ಬಂದಿಲ್ಲ. ಆದರೆ ಪ್ರೇಮ ವಿಚಾರದಲ್ಲಿ ಗಲಾಟೆಯಾಗಿದೆ. ಜೊತೆಗೆ ಈತ ಮಾದಕವ್ಯಸನಿಯೂ ಆಗಿದ್ದ ಎಂಬ ಮಾಹಿತಿ ಸ್ಥಳಿಯವಾಗಿ ಕೇಳಿ ಬಂದಿದ್ದು ಇದೇ ವಿಚಾರದಲ್ಲಿ ಅಮ್ಮ ಮಗನ ನಡುವೆ ಜಗಳ ನಡೆದು ಕೊಲೆಯಾಗಿರಬಹುದೆಂದು ಪೊಲೀಸರು ಶಂಕಿಸಿದ್ದು ತನಿಖೆ ಚುರುಕುಗೊಳಿಸಿದ್ದರೆ.

ಕೊಲೆಗೀಡಾದ ಶ್ರೀಲಕ್ಷ್ಮಿ ಅವರ ಅಂತ್ಯಕ್ರಿಯೆ ಇಂದು ಅವರ ಸ್ವಗ್ರಾಮ ಮೇಲುಕೋಟೆಯ ಬಳಿ ನಡೆಯಿತು ಎಂದು ತಿಳಿದು ಬಂದಿದೆ.

ಈ ಸಂಬಂಧ ಪಶ್ವಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-ನಾಗಯ್ಯ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

BJP, RSS ನಡುವೆ ಭಿನ್ನಾಭಿಪ್ರಾಯ ಇರಬಹುದು, ಆದರೆ ಸಂಘರ್ಷ ಇಲ್ಲ: ಮೋಹನ್ ಭಾಗವತ್

Nation survey: ಇಂದೇ ಲೋಕಸಭೆ ಚುನಾವಣೆ ನಡೆದರೆ NDA ಎಷ್ಟು ಸ್ಥಾನ ಗೆಲ್ಲುತ್ತೆ ಗೊತ್ತಾ?

SCO summit: ಟ್ರಂಪ್ ಗೆ ಸೆಡ್ಡು; ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

"ಭಾರತೀಯರು ಬಗ್ಗದೇ ಹೋದರೆ...": ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾನೇರ ಬೆದರಿಕೆ!

ಯಾವುದೇ ವ್ಯಕ್ತಿ 75 ವರ್ಷಗಳಿಗೆ ನಿವೃತ್ತಿಯಾಗಬೇಕು ಎಂದು ಎಂದಿಗೂ ಹೇಳಿಲ್ಲ: RSS ಮುಖ್ಯಸ್ಥ Mohan bhagwat ಸ್ಪಷ್ಟನೆ

SCROLL FOR NEXT