ಸಾಂದರ್ಭಿಕ ಚಿತ್ರ 
ರಾಜ್ಯ

ಜಿಲ್ಲಾ ಗ್ರಾಹಕ ವ್ಯಾಜ್ಯ ಪರಿಹಾರ ಮೊತ್ತ ಒಂದು ಕೋಟಿ ರೂ. ಗೆ ಏರಿಕೆ!

ಗ್ರಾಹಕರ ಹಿತ ರಕ್ಷಣೆ ಉದ್ದೇಶದಿಂದ ಕೇಂದ್ರ ಸರ್ಕಾರ ಗ್ರಾಹಕ ಸಂರಕ್ಷಣಾ ಕಾಯ್ದೆ 1986ಕ್ಕೆ ತಿದ್ದುಪಡಿ ಮಾಡಿ ಗ್ರಾಹಕ ಸಂರಕ್ಷಣಾ ಕಾಯ್ದೆ 2019 ಜಾರಿಗೆ ತಂದಿದ್ದು, ಕಾಯ್ದೆಯ ಅನುಷ್ಠಾನಕ್ಕಾಗಿ ಗ್ರಾಹಕ ಸಂರಕ್ಷಣಾ ನಿಯಮಗಳನ್ನು ಜಾರಿಗೆ ತಂದಿದೆ. ಇದನ್ನು ರಾಜ್ಯದಲ್ಲೂ ಸಹ ಅನುಷ್ಠಾನಗೊಳಿಸಲಾಗಿದೆ. 

ಬೆಂಗಳೂರು: ಗ್ರಾಹಕರ ಹಿತ ರಕ್ಷಣೆ ಉದ್ದೇಶದಿಂದ ಕೇಂದ್ರ ಸರ್ಕಾರ ಗ್ರಾಹಕ ಸಂರಕ್ಷಣಾ ಕಾಯ್ದೆ 1986ಕ್ಕೆ ತಿದ್ದುಪಡಿ ಮಾಡಿ ಗ್ರಾಹಕ ಸಂರಕ್ಷಣಾ ಕಾಯ್ದೆ 2019 ಜಾರಿಗೆ ತಂದಿದ್ದು, ಕಾಯ್ದೆಯ ಅನುಷ್ಠಾನಕ್ಕಾಗಿ ಗ್ರಾಹಕ ಸಂರಕ್ಷಣಾ ನಿಯಮಗಳನ್ನು ಜಾರಿಗೆ ತಂದಿದೆ. ಇದನ್ನು ರಾಜ್ಯದಲ್ಲೂ ಸಹ ಅನುಷ್ಠಾನಗೊಳಿಸಲಾಗಿದೆ. 

ಗ್ರಾಹಕ ಸಂರಕ್ಷಣಾ ನಿಯಮಗಳು ಇದೇ ತಿಂಗಳ ಮೂರನೇ ವಾರದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜಾರಿಗೆ ಬಂದಿದ್ದು, ಗ್ರಾಹಕರ ಹಿತ ರಕ್ಷಣೆಗೆ ಹಲವು ಅನುಕೂಲಕರ ಅಂಶಗಳನ್ನು ಅಳವಡಿಸಿಕೊಳ್ಳಲಾಗಿದೆ. ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯನ್ನು “ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ” ಎಂದು ತಿದ್ದುಪಡಿ ಮಾಡಲಾಗಿದೆ. ಗ್ರಾಹಕರು ಇನ್ನು ಮುಂದೆ ಗ್ರಾಹಕ ಸಂರಕ್ಷಣಾ ಕಾಯ್ದೆ 2019 ಕಲಂ 35ರಡಿ ದೂರು ಸಲ್ಲಿಸಬೇಕಾಗುತ್ತದೆ. ಗ್ರಾಹಕರು ಎಲ್ಲಿ ವಾಸವಿರುವರೋ ಅಥವಾ ಆಯಾ ಜಿಲ್ಲೆಯ ಜಿಲ್ಲಾ ಗ್ರಾಹಕರ ಆಯೋಗದಲ್ಲಿ ದೂರು ಸಲ್ಲಿಸಲು  ಹೊಸ ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ. 

ಗ್ರಾಹಕರು ಕೋರುವ ನಷ್ಟ ಪರಿಹಾರದ ಮಿತಿ ಇಪ್ಪತ್ತು ಲಕ್ಷದಿಂದ ಒಂದು ಕೋಟಿ ರೂ.ಗೆ ಏರಿಕೆಯಾಗಿದ್ದು, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ಒಂದು ಕೋಟಿ ರೂ. ವರೆಗಿನ ಮೊತ್ತಕ್ಕೆ ಸಂಬಂಧಿಸಿದ ದೂರು ದಾಖಲಿಸಬಹುದಾಗಿದೆ. ದೂರು ಶುಲ್ಕವನ್ನು ಡಿ.ಡಿ. ರೂಪದಲ್ಲಿ ಅಧ್ಯಕ್ಷರು, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಡಿ.ಡಿ.ಯನ್ನು ಪಡೆದು ದೂರಿನೊಂದಿಗೆ ಲಗತ್ತಿಸಿ ಸಲ್ಲಿಸಬೇಕಾಗಿದೆ.

ಸರಕು ಮತ್ತು ಸೇವೆಗೆ ಸಂಬಂಧಪಟ್ಟಂತೆ ಕೋರಿರುವ ಪರಿಹಾರದ ಮಿತಿ 5 ಲಕ್ಷ ರೂ ವರೆಗಿನ ಮೊತ್ತಕ್ಕೆ ದೂರು ಶುಲ್ಕ ಇರುವುದಿಲ್ಲ. 5 ಲಕ್ಷದಿಂದ 10 ಲಕ್ಷ ರೂ ವರೆಗೆ 200 ರೂ, 10 ಲಕ್ಷದಿಂದ 20 ಲಕ್ಷ ರೂವರೆಗೆ 400 ರೂ, 20 ಲಕ್ಷದಿಂದ 50 ಲಕ್ಷದವರೆಗೆ 1000 ದರ ಶುಲ್ಕ ಹಾಗೂ 50 ಲಕ್ಷದಿಂದ 1 ಕೋಟಿ ರೂ ವರೆಗೆ 2000 ದರ ಶುಲ್ಕ ನಿಗದಿಪಡಿಸಲಾಗಿದೆ. 1986ರ ಗ್ರಾಹಕ ಸಂರಕ್ಷಣಾ ಕಾಯ್ದೆಯಲ್ಲಿ ವೇದಿಕೆಯ ಅಂತಿಮ ಆದೇಶದ ವಿರುದ್ಧ ತೀರ್ಪು ಪುನರ್ ಪರಿಶೀಲನೆಗೆ ಅವಕಾಶವಿರಲಿಲ್ಲ. ಆದರೆ ಹೊಸ ಕಾಯ್ದೆಯಲ್ಲಿ ಜಿಲ್ಲೆಯ ಗ್ರಾಹಕ ಆಯೋಗದಲ್ಲಿ ರಿವ್ಯೂ ಪಿಟಿಷನ್ ಹಾಕಲು ಅವಕಾಶ ಕಲ್ಪಿಸಿ ಅನುಕೂಲ ಮಾಡಿಕೊಡಲಾಗಿದೆ. ಗ್ರಾಹಕ ಸಂರಕ್ಷಣಾ ಕಾಯ್ದೆ-2019 ತಿದ್ದುಪಡಿಯಾಗಿರುವುದನ್ನು ಸಾರ್ವಜನಿಕರು ಮತ್ತು ಗ್ರಾಹಕರು ಸದುಪಯೋಗ ಪಡಿಸಿಕೊಳ್ಳುವಂತೆ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಕೋರಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT