ಕಾಡಾನೆ 
ರಾಜ್ಯ

ಚಿಕ್ಕಮಗಳೂರು: ಆನೆ ಕಾರಿಡಾರ್ ಅತಿಕ್ರಮ, ಆಹಾರ ಅರಸಿ ನಾಡಿಗೆ ಬಂದಿದ್ದ ಕಾಡಾನೆ ಕರೆಂಟ್ ಶಾಕ್ ನಿಂದ ಸಾವು!

ಮನುಷ್ಯ-ಪ್ರಾಣಿ ಸಂಘರ್ಷಕ್ಕೆ ಮತ್ತೊಂದು ಘಟನೆ ಸಾಕ್ಷಿಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕದೂರ್ ತಾಲ್ಲೂಕಿನ ಎಮ್ಮೆಡೋಡಿ ಗ್ರಾಮದ ಬಳಿಯ ಕೃಷಿಭೂಮಿಯಲ್ಲಿ ಮೂರು ವರ್ಷದ ಗಂಡು ಆನೆಯನ್ನು ಕರೆಂಟ್ ಶಾಕ್ ನಿಂದ ಮೃತಪಟ್ಟಿದೆ.

ಚಿಕ್ಕಮಗಳೂರು: ಮನುಷ್ಯ-ಪ್ರಾಣಿ ಸಂಘರ್ಷಕ್ಕೆ ಮತ್ತೊಂದು ಘಟನೆ ಸಾಕ್ಷಿಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕದೂರ್ ತಾಲ್ಲೂಕಿನ ಎಮ್ಮೆಡೋಡಿ ಗ್ರಾಮದ ಬಳಿಯ ಕೃಷಿಭೂಮಿಯಲ್ಲಿ ಮೂರು ವರ್ಷದ ಗಂಡು ಆನೆಯನ್ನು ಕರೆಂಟ್ ಶಾಕ್ ನಿಂದ ಮೃತಪಟ್ಟಿದ್ದು ಆನೆ ಕಾರಿಡಾರ್‌ಗಳ ಅತಿಕ್ರಮಣದಿಂದಾಗಿ ಇಂತಹ ದುರಂತಗಳು ಸಂಭವಿಸುತ್ತಿವೆ ಎಂದು ವನ್ಯಜೀವಿ ಸಂರಕ್ಷಣಾ ಕಾರ್ಯಕರ್ತರು ಆರೋಪಿಸಿದ್ದಾರೆ.

ಆಹಾರ ಅರಸಿ ಕಾಡಾನೆ ಕೃಷಿ ಭೂಮಿಗೆ ಬಂದಿದ್ದು ಈ ವೇಳೆ ಅಕ್ರಮವಾಗಿ ಅಳವಡಿಸಲಾಗಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಆನೆ ಮೃತಪಟ್ಟಿದೆ ಎಂದು ಅರಣ್ಯ ಇಲಾಖೆಯ ಮೂಲಗಳು ತಿಳಿಸಿವೆ. 

ಈ ಘಟನೆಯ ನಂತರ ಜಮೀನಿನ ಮಾಲೀಕರು ಪರಾರಿಯಾಗಿದ್ದು, ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಳೆದ ವರ್ಷವೂ ಇದೇ ರೀತಿಯ ಘಟನೆ ನಡೆದಿದ್ದು ಈ ವೇಳೆ ಗಂಡಾನೆಯೊಂದು ಕರೆಂಟ್ ಶಾಕ್ ನಿಂದ ಮೃತಪಟ್ಟಿತ್ತು ಎಂದು ಮೂಲಗಳು ತಿಳಿಸಿವೆ.

ಅಧಿಕಾರಿಗಳ ಬದ್ಧತೆಯ ಕೊರತೆಯಿಂದಾಗಿ ಮನುಷ್ಯ-ಪ್ರಾಣಿಗಳ ಸಂಘರ್ಷವು ಕೊನೆಯಿಲ್ಲದ ಸಮಸ್ಯೆಯಾಗಿದೆ ಎಂದು ವನ್ಯಜೀವಿ ಸಂರಕ್ಷಣಾ ಕಾರ್ಯಕರ್ತ ಡಿ ವಿ ಗಿರೇಶ್ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದರು.

ಪ್ರಸ್ತುತ ಕಾಡಾನೆ ಮೃತಪಟ್ಟಿರುವ ಸ್ಥಳವು ಕಮ್ಮನಹಳ್ಳಿ ಮತ್ತು ಚುರ್ಚೆಗುಡ್ಡ ಈ ಎರಡು ಮೀಸಲು ಕಾಡುಗಳ ನಡುವೆ ಇದೆ. ಕಳೆದ 50 ವರ್ಷಗಳಿಂದ ಇಲ್ಲಿ ಕೂಲಿ ಕಾರ್ಮಿಕರು ಅಕ್ರಮವಾಗಿ ನೆಲೆಸಿದ್ದಾರೆ. ಅವರಲ್ಲಿ ಹೆಚ್ಚಿನವರು ಕಾಫಿ ತೋಟಗಳಲ್ಲಿ ಕಾರ್ಮಿಕರಾಗಿದ್ದಾರೆ. ಈ ಪ್ರದೇಶವನ್ನು ವ್ಯವಸ್ಥಿತವಾಗಿ ಅತಿಕ್ರಮಿಸಲಾಗಿದೆ ಮತ್ತು ಅರ್ಧಕ್ಕಿಂತ ಹೆಚ್ಚು ಅತಿಕ್ರಮಣದಾರರಿಗೆ ಕಾನೂನು ಭಯವಿಲ್ಲ ಎಂದು ಅವರು ಹೇಳಿದರು.

ಆನೆ ಕಾರಿಡಾರ್‌ನಲ್ಲಿನ ಅತಿಕ್ರಮಣಗಳನ್ನು ಸರ್ಕಾರ ತೆರವುಗೊಳಿಸಬೇಕು ಮತ್ತು ಅತಿಕ್ರಮಣದಾರರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಗಿರೇಶ್ ಒತ್ತಾಯಿಸಿದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT