ಐಪಿಎಸ್ ಅಧಿಕಾರಿ ಕಮಲ್ ಪಂತ್ 
ರಾಜ್ಯ

ಬೆಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಕಮಲ್ ಪಂತ್ ನೇಮಕ

ಬೆಂಗಳೂರು ನಗರ ಪೊಲೀಸ್ ನೂತನ ಆಯುಕ್ತರಾಗಿ ಹಿರಿಯ ಐಪಿಎಸ್ ಅಧಿಕಾರಿ ಕಮಲ್ ಪಂತ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು: ಬೆಂಗಳೂರು ನಗರ ಪೊಲೀಸ್ ನೂತನ ಆಯುಕ್ತರಾಗಿ ಹಿರಿಯ ಐಪಿಎಸ್ ಅಧಿಕಾರಿ ಕಮಲ್ ಪಂತ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಇಂದು ಭಾಸ್ಕರ್ ರಾವ್ ಸೇರಿದಂತೆ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ವರ್ಗಾಯಿಸಲಾಗಿದೆ.  ಗುಪ್ತಚರ ವಿಭಾಗದ ಹೆಚ್ಚುವರಿ ಮಹಾನಿರ್ದೇಶಕರಾಗಿದ್ದ ಕಮಲ್ ಪಂತ್ ಅವರನ್ನು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮತ್ತು ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ವರ್ಗಾಯಿಸಲಾಗಿದೆ.

ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ವರ್ಗಾವಣೆ
ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರನ್ನು ರಾಜ್ಯ ಸರ್ಕಾರ ಇಂದು ವರ್ಗಾಯಿಸಿ ಆದೇಶ ಹೊರಡಿಸಿದೆ. ಬೆಂಗಳೂರು ಆಯುಕ್ತರಾಗಿದ್ದ ಭಾಸ್ಕರ್ ರಾವ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಲಾಗಿದೆ.

ಅದೇ ರೀತಿ ಅಪರಾಧ ತನಿಖಾ ವಿಭಾಗ ಮತ್ತು ಆರ್ಥಿಕ ಅಪರಾಧಗಳ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದ ಬಿ.ದಯಾನಂದ ಅವರನ್ನು ಕಮಲ್ ಪಂತ್‌ ಅವರ ವರ್ಗಾವಣೆಯಿಂದ ತೆರವಾದ ಗುಪ್ತಚರ ವಿಭಾಗದ ಹೆಚ್ಚುವರಿ ಮಹಾನಿರ್ದೇಶಕ ಸ್ಥಾನಕ್ಕೆ ವರ್ಗಾಯಿಸಲಾಗಿದೆ. ಭಾಸ್ಕರ್ ರಾವ್ ಅವರನ್ನು ವರ್ಗಾಯಿಸಲು ಹಲವು ದಿನಗಳಿಂದ ತೆರೆಮರೆಯ ಕಸರತ್ತು ನಡೆದಿತ್ತು. ಲಾಕ್‌ಡೌನ್ ಅವಧಿಯಲ್ಲಿ ಭಾಸ್ಕರ್ ರಾವ್ ಚರ್ಚ್ ಒಂದರ ಪ್ರಾರ್ಥನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವಿಡಿಯೋ ವೈರಲ್ ಆದ ಬಳಿಕ ಅವರ ವರ್ಗಾವಣೆಗೆ ಹೆಚ್ಚಿನ ಒತ್ತಡವಿತ್ತು ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; ಎಲ್ಲರ ಮನಗೆದ್ದ US ಮ್ಯಾನೇಜರ್ ಪ್ರತಿಕ್ರಿಯೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT