ಮೈಸೂರು ಅರಮನೆ 
ರಾಜ್ಯ

ರಾಜ್ಯದ ನಾಲ್ಕು ಪಾರಂಪರಿಕ ನಗರಗಳನ್ನು ಸ್ಮಾರ್ಟ್ ಸಿಟಿ ಅಡಿ ತರಲು ಪ್ರಸ್ತಾವನೆ

ರಾಜ್ಯದ ನಾಲ್ಕು ಪ್ರಸಿದ್ದ ನಗರಗಳನ್ನು ಸ್ಮಾರ್ಟ್ ಸಿಟಿ ಯೋಜನೆಗೆ ಸೇರ್ಪಡೆ ಮಾಡಲು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿರುವುದಾಗಿ ಸಚಿವ ಭೈರತಿ ಬಸವರಾಜ್ ಅವರು ತಿಳಿಸಿದ್ದಾರೆ.

ಬೆಂಗಳೂರು: ರಾಜ್ಯದ ನಾಲ್ಕು ಪ್ರಸಿದ್ದ ನಗರಗಳನ್ನು ಸ್ಮಾರ್ಟ್ ಸಿಟಿ ಯೋಜನೆಗೆ ಸೇರ್ಪಡೆ ಮಾಡಲು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿರುವುದಾಗಿ ಸಚಿವ ಭೈರತಿ ಬಸವರಾಜ್ ಅವರು ತಿಳಿಸಿದ್ದಾರೆ.

ಕಲಬುರಗಿ, ವಿಜಯಪುರ, ಮೈಸೂರು, ಬಳ್ಳಾರಿ ಸ್ಮಾರ್ಟ್ ಸಿಟಿ ಆಗಬೇಕು ಎಂದು ಹೇಳಿರುವ ಅವರು, ಈ ಹಿನ್ನೆಲೆಯಲ್ಲಿ ಶೀಘ್ರವೇ  ದೆಹಲಿಗೆ ತೆರಳಿ ಚರ್ಚಿಸುವುದಾಗಿ ತಿಳಿಸಿದ್ದಾರೆ.

ಒಡೆಯರ ಆಡಳಿತದಿಂದ ಮೈಸೂರು, ಗೋಲ್ ಗುಂಬಜ್ ನಿಂದ ವಿಜಯಪುರ,ಬಹಮನಿ ಸುಲ್ತಾನರ ಆಡಳಿತದಿಂದ ಕಲಬುರಗಿ ಮತ್ತು ವಿಜಯನಗರ ಸಾಮ್ರಾಜ್ಯರ ಆಡಳಿತದಿಂದ ಬಳ್ಳಾರಿ ಜಿಲ್ಲೆಗಳು ಶ್ರೀಮಂತ ಇತಿಹಾಸ ಹೊಂದಿವೆ. ಜೊತೆ ಈ ಜಿಲ್ಲೆಗಳಲ್ಲಿ ಶತಮಾನಗಳಿಂದಲೂ ಐತಿಹಾಸಿಕ ಸ್ಮಾರಕಗಳಿವೆ.

ಬೆಂಗಳೂರು, ತುಮಕೂರು, ಮಂಗಳೂರು, ಶಿವಮೊಗ್ಗ, ಬೆಳಗಾವಿ, ದಾವಣಗೆರೆ, ಹಾಗೂ ಹುಬ್ಬಳ್ಳಿ-ದಾರವಾಡ ನಗರಗಳು ಸ್ಮಾರ್ಟ್ ಸಿಟಿ ಯೋಜನೆಯಡಿ ಅಭಿವೃದ್ಧಿ ಹೊಂದಿವೆ, ನಮ್ಮ ಈ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ಒಪ್ಪಿದರೇ ಬೆಂಗಳೂರಿನ ನಂತರದ ರಾಜ್ಯದ ಎಲ್ಲಾ ಪ್ರಮುಖ 10 ನಗರಗಳು ರಾಷ್ಟ್ರೀಯ ಯೋಜನೆಯಡಿ ಬರಲಿದ್ದು, ಇದು ನಗರ ಸಮೂಹಗಳನ್ನು "ಬಳಕೆದಾರ ಸ್ನೇಹಿ" ವಾಸಸ್ಥಳಗಳಾಗಿ ಪರಿವರ್ತಿಸುವ ಗುರಿಯನ್ನು ಹೊಂದಿರುವುದಾಗಿ ಹೇಳಿದ್ದಾರೆ.

ಈ ಸಂಬಂಧ ಕೇಂದ್ರ ನಗರಾಭಿವೃದ್ಧಿ ಸಚಿವ ಹರ್ ದೀಪ್ ಸಿಂಗ್ ಪುರಿ ಅವರಿಗೆ ಪತ್ರ ಬರೆದಿದ್ದಾರೆ. ನಗರಳನ್ನು ಮತ್ತಷ್ಟು ಸುಂದರವಾಗಿಸುವ ಕನಸು ಹೊತ್ತಿದ್ದಾರೆ.

ಈ ನಗರಗಳ ಮೂಲಭೂತ ಸೌಕರ್ಯಗಳನ್ನು ಮೇಲ್ದರ್ಜೇಗೇರಿಸಿ ಬಳಕೆದಾರರ ಸ್ನೇಹಿ ಮಾಡಲಾಗುವುದು, ರಸ್ತೆ, ಫುಟ್ ಪಾತ್, ಸಾರ್ವಜನಿಕ ಸಾರಿಗೆ, ಪಾರ್ಕ್, ಬೀದಿ ದೀಪ ಸೇರಿದಂತೆ ನಗರದ  ಭೂ ದೃಶ್ಯವನ್ನು ಸುಧಾರಿಸಲಾಗುವುದು ಎಂದು ತಿಳಿಸಿದ್ದಾರೆ.

ಸಮಗ್ರ ಯೋಜನೆ ಹೊಂದಬೇಕೆಂಬ ಆಲೋಚನೆ ಇದ್ದು, ಕೆನಡಾದ  ವ್ಯಾನ್ ಕೋವರ್ ನಗರ ಉತ್ತಮ ಉದಾಹರಣೆಯಾಗಿದೆ. ಇಡೀ ನಗರವನ್ನೇ ಉತ್ತಮ ಪ್ಲಾನ್ ನೊಂದಿಗೆ ಪುನರ್ ಅಭಿವೃದ್ಧಿಗೊಳಿಸಲಾಗಿದೆ ಎಂದು ಮಾಜಿ ನಗರಾಭಿವೃದ್ಧಿ ಕಾರ್ಯದರ್ಶಿ ಅಂಜುಮ್ ಫರ್ವೇಜ್ ಹೇಳಿದ್ದಾರೆ.

ನಗರವು ಅಭಿವೃದ್ಧಿ ಹೊಂದಿದೆಯೆಂದು ಮತ್ತು ಪ್ರಮುಖ ಐತಿಹಾಸಿಕ ಸ್ಮಾರಕಗಳನ್ನು ಈ ಯೋಜನೆಯು ಖಚಿತಪಡಿಸುತ್ತದೆ, ಅವುಗಳಲ್ಲಿ ಕೆಲವು ಐದು-ಆರು ಶತಮಾನಗಳ ಹಿಂದಿನವುಗಳಾಗಿವೆ, ಅವುಗಳು ಇಂದಿಗೂ ಆಕರ್ಷಣೆಯ ಕೇಂದ್ರ ಬಿಂದುವಾಗಿವೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT