ಸಂಗ್ರಹ ಚಿತ್ರ 
ರಾಜ್ಯ

ಸೂಕ್ತ ವ್ಯವಸ್ಥೆ ಕಲ್ಪಿಸದ ಅಧಿಕಾರಿಗಳು: ಗಂಟೆಗಟ್ಟಲೆ ಸಾಲಿನಲ್ಲಿ ನಿಂತ ಯೋಧರ ಕುಟುಂಬಗಳು

ಸೂಕ್ತ ವ್ಯವಸ್ಥೆ ಕಲ್ಪಿಸದೆ ಅಧಿಕಾರಿಗಳು ತೋರಿದ ನಿರ್ಲಕ್ಷ್ಯದಿಂದಾಗಿ ರಿಯಾಯಿತಿ ದರದ ದಿನಸಿ ಸಾಮಾಗ್ರಿಗಳನ್ನು ಪಡೆಯಲು ಯೋಧರು, ಮಾಜಿ ಯೋಧರು ಹಾಗೂ ಅವರ ಕುಟುಂಬ ಸದಸ್ಯರು ಗಂಟೆಗಟ್ಟಲೆ ಸಾಲಿನಲ್ಲಿ ನಿಂತು ಸಂಕಷ್ಟ ಅನುಭವಿಸಿದ ಘಟನೆ ನಗರದ ಹೆಎಎಲ್ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಐಎಎಫ್ ಕ್ಯಾಂಟೀನ್ ನಲ್ಲಿ ನಡೆದಿದೆ. 

ಬೆಂಗಳೂರು: ಸೂಕ್ತ ವ್ಯವಸ್ಥೆ ಕಲ್ಪಿಸದೆ ಅಧಿಕಾರಿಗಳು ತೋರಿದ ನಿರ್ಲಕ್ಷ್ಯದಿಂದಾಗಿ ರಿಯಾಯಿತಿ ದರದ ದಿನಸಿ ಸಾಮಾಗ್ರಿಗಳನ್ನು ಪಡೆಯಲು ಯೋಧರು, ಮಾಜಿ ಯೋಧರು ಹಾಗೂ ಅವರ ಕುಟುಂಬ ಸದಸ್ಯರು ಗಂಟೆಗಟ್ಟಲೆ ಸಾಲಿನಲ್ಲಿ ನಿಂತು ಸಂಕಷ್ಟ ಅನುಭವಿಸಿದ ಘಟನೆ ನಗರದ ಹೆಎಎಲ್ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಐಎಎಫ್ ಕ್ಯಾಂಟೀನ್ ನಲ್ಲಿ ನಡೆದಿದೆ. 

ರಿಯಾಯಿತಿ ದರದಲ್ಲಿ ದಿನಸಿ ಸಾಮಾಗ್ರಿಗಳನ್ನು ನೀಡಲಾಗುತ್ತಿದೆ ಎಂಬ ಮಾಹಿತಿ ತಿಳಿದ ಬಳಿಕ ನೂರಾರು ಮಾಜಿ ಯೋದರು, ಹಾಗೂ ಅವರ ಕುಟುಂಬ ಸದಸ್ಯರು ಸ್ಥಳಕ್ಕೆ ಬಂದಿದ್ದಾರೆ. ಈ ವೇಳೆ ಸ್ಥಳದಲ್ಲಿ ಸೂಕ್ತ ವ್ಯವಸ್ಥೆಗಳಿಲ್ಲದಿರುವುದು ಹಾಗೂ ಭಾರೀ ಸಂಖ್ಯೆಯಲ್ಲಿ ಜನರು ನೆರೆದಿರುವುದು ಯೋಧರು ಹಾಗೂ ಯೋಧರ ಕುಟುಂಬಗಳಿಗೆ ಬೇಸರ ತರಿಸಿದೆ. 

ಕ್ಯಾಂಟೀನ್ ಮುಖ್ಯದ್ವಾರದ ಬಳಿ ಸಾಲಿನಲ್ಲಿ ನಿಲ್ಲಿಸಲಾಗಿದ್ದು, ಅಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕೂಡ ಕಷ್ಟಕರವಾಗಿತ್ತು. ರಸ್ತೆಗಳ ಮಧ್ಯೆಯೇ ವಾಹನ ನಿಲುಗಡೆ ಮಾಡಿರುವುದೂ ಕೂಡ ಸ್ಥಳದಲ್ಲಿ ಸಂಚಾರ ದಟ್ಟಣೆ ಎದುರು ಮಾಡಿತ್ತು. 

ಮಾಜಿ ಯೋಧರೊಬ್ಬರು ಈ ಕುರಿತು ಮಾಹಿತಿ ನೀಡಿದ್ದು, ದಿನಸಿ ಸಾಮಾಗ್ರಿ ಖರೀದಿ ಮಾಡುವ ಸಲುವಾಗಿ ಮಗಳ ಜೊತೆಗೆ ತೆರಳಿದ್ದೆ. ಸ್ಥಳದಲ್ಲಿ ಯಾವುದೇ ರೀತಿಯ ವ್ಯವಸ್ಥೆಗಳನ್ನೂ ಮಾಡಿರಲಿಲ್ಲ. ಬೆಳಿಗ್ಗೆ 8.30ಕ್ಕೆ ಸಾಲಿನಲ್ಲಿ ನಿಂತರೂ 11.30 ಆದರೂ ಖರೀದಿ ಮಾಡಲು ಸಾಧ್ಯವಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. 

 ಐಎಎಫ್ ಅಧಿಕಾರಿಯ ಪತ್ನಿ ಮಾತನಾಡಿ, ದಿನಸಿ ಸಾಮಾಗ್ರಿ ಖರೀದಿ ಮಾಡಲಷ್ಟೇ ನಾವು ಇಲ್ಲಿಗೆ ಬಂದಿದ್ದೇವೆ. ಈ ಮಟ್ಟಕ್ಕೆ ಜನರಿರುತ್ತಾರೆಂದುಕೊಂಡಿರಲಿಲ್ಲ. ಸ್ಥಳದಲ್ಲಿ ಸಾಕಷ್ಟು ಹಿರಿಯ ನಾಗರೀಕರಿದ್ದರು. ಸಾಕಷ್ಟು ಮಂದಿ ರಿಯಾಯಿತಿ ದರದ ಮದ್ಯ ಖರೀದಿ ಮಾಡಲು ಬಂದಿದ್ದರು ಎಂದು ತಿಳಿಸಿದ್ದಾರೆ. 

ಈ ನಡುವೆ ಸ್ಥಳದಲ್ಲಿ ಕೆಲ ಮಾತಿನ ಚಕಮಕಿಗಳೂ ಕೂಡ ನಡೆದಿದ್ದು, ಈ ವೇಳೆ ಲೌಡ್ ಸ್ಪೀಕರ್ ನಲ್ಲಿ ಘೋಷಣೆ ಮಾಡಲು ಆರಂಭಿಸಿದ ಅಧಿಕಾರಿಗಳು, ಶಾಂತಿಯುತವಾಗಿರುವಂತೆ ಮನವಿ ಮಾಡಿಕೊಂಡರು. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿರುವುದರಿಂದ ಒಂದು ಬಾರಿ ಕೇವಲ 5 ಮಂದಿಯನ್ನಷ್ಟೇ ಒಳಗೆ ಬಿಡಲಾಗುತ್ತಿದೆ. ಸಂಜೆ 6 ಗಂಟೆಯವರೆಗೂ ಸಮಯವನ್ನು ವಿಸ್ತರಿಸಲಾಗುತ್ತದೆ. ಟೋಕನ್ ಗಳನ್ನು ವಿತರಿಸಲಾಗುತ್ತದೆ. ಎಲ್ಲರಿಗೂ ಎಲ್ಲಾ ಸಾಮಾಗ್ರಿಗಳೂ ಲಭಿಸಲಿವೆ ಎಂದು ತಿಳಿಸಿದ್ದಾರೆ 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ದಾವಣಗೆರೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ: ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ತಲೆದಂಡ, ಜಮೀರ್ ಸಚಿವ ಸ್ಥಾನಕ್ಕೂ ಕುತ್ತು?

ಮಗ ವಿದೇಶದಲ್ಲಿ ಓದುತ್ತಿದ್ದಾನೆ, ಹಲ್ಲೆ ಕೇಸ್ ಕೈಬಿಡಿ: ಪುತ್ರನ ಭವಿಷ್ಯಕ್ಕಾಗಿ ಪ್ರಕರಣ ರದ್ದು ಕೋರಿದ ಅನಂತಕುಮಾರ್ ಹೆಗಡೆ!

ನಮಸ್ತೆ.. ಏನ್ರೀ ರಾಹುಲ್ ಹೇಗಿದ್ದೀರಾ? ; ಸಂಸತ್ ಭವನದ ಬಳಿ ಪ್ರಧಾನಿ ಮೋದಿ-Rahul Gandhi ಅಪರೂಪದ ಮುಖಾಮುಖಿ! Video

ಮಾತುಕತೆಗೂ ಮುನ್ನವೇ ಟೆಹ್ರಾನ್‌ಗೆ ದೊಡ್ಡ ಗೆಲುವು; ಫ್ರೀಜ್ ಮಾಡಲಾದ ಇರಾನ್ ಸ್ವತ್ತುಗಳ ಬಿಡುಗಡೆಗೆ ಅಮೆರಿಕ ಒಪ್ಪಿಗೆ!

SCROLL FOR NEXT