ವಲಸೆ ಕಾರ್ಮಿಕರು 
ರಾಜ್ಯ

ಬೆಂಗಳೂರಿನಿಂದ ತೆರಳುತ್ತಿರುವ ವಲಸೆ ಕಾರ್ಮಿಕರಿಗೆ 'ಸೇವಾ ಸಿಂಧು' ಪೋರ್ಟಲ್ ನೋಂದಣಿ ಕಡ್ಡಾಯ

ಬೆಂಗಳೂರು ನಗರವನ್ನು ತ್ಯಜಿಸುತ್ತಿರುವ ವಲಸೆ ಕಾರ್ಮಿಕರು ಇನ್ನು ಮುಂದೆ ಕಡ್ಡಾಯವಾಗಿ 'ಸೇವಾ ಸಿಂಧು' ಪೋರ್ಟಲ್ ಅಡಿಯಲ್ಲಿ ನೋಂದಣಿಯಾಗಿ ವಿವರ ನೀಡಬೇಕು ಎಂದು ಬಿಬಿಎಂಪಿ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಬೆಂಗಳೂರು: ಬೆಂಗಳೂರು ನಗರವನ್ನು ತ್ಯಜಿಸುತ್ತಿರುವ ವಲಸೆ ಕಾರ್ಮಿಕರು ಇನ್ನು ಮುಂದೆ ಕಡ್ಡಾಯವಾಗಿ 'ಸೇವಾ ಸಿಂಧು' ಪೋರ್ಟಲ್ ಅಡಿಯಲ್ಲಿ ನೋಂದಣಿಯಾಗಿ ವಿವರ ನೀಡಬೇಕು ಎಂದು ಬಿಬಿಎಂಪಿ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಕಾರ್ಮಿಕರು ಯಾವುದೇ ಮಾಹಿತಿಯನ್ನು ನೀಡದೆ, ತಮ್ಮ ಸ್ವಂತ ಸ್ಥಳ, ಊರುಗಳಿಗೆ ತೆರಳುತ್ತಿರುವುದರಿಂದ ಈ ಬಗ್ಗೆ ಪಾಲಿಕೆಗೆ ಯಾವುದೇ ಮಾಹಿತಿ ದೊರೆಯುತ್ತಿಲ್ಲ. ಅದನ್ನು ತಡೆಯಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ವಲಸೆ ಕಾರ್ಮಿಕರುಗಳು ಕಡ್ಡಾಯವಾಗಿ ಸೇವಾ ಸಿಂಧು ಪೋರ್ಟಲ್ ನಲ್ಲಿ ನೋಂದಣಿಯಾಗಿ ವಿವರ ನೀಡಬೇಕು ಎಂದು ಸೂಚಿಸಿದ್ದಾರೆ.

ವಲಸಿಗ ಕಾರ್ಮಿಕರಿಗೆ ನೆರವಾಗುವ ಉದ್ದೇಶದಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿಯ ಎಲ್ಲಾ ನಾಗರೀಕ ಸೇವಾ ಕೇಂದ್ರಗಳಲ್ಲಿ 'ವಲಸಿಗರ ಸಹಾಯ ಕೇಂದ್ರ' ತೆರೆಯಲು ಆಯುಕ್ತರು ಆದೇಶಿಸಿದ್ದಾರೆ.
 
ಪ್ರತಿ ಸಹಾಯ ಕೇಂದ್ರದಲ್ಲಿ ಕನ್ನಡ, ಹಿಂದಿ, ಇಂಗ್ಲಿಷ್ ಭಾಷೆಯೂ ಒಳಗೊಂಡಂತೆ ಬಹುಭಾಷೆಯಲ್ಲಿ ನಾಮಫಲಕಗಳನ್ನು ಅಳವಡಿಸಿ, ಸಹಾಯ ಕೇಂದ್ರಕ್ಕೆ ಪ್ರತ್ಯೇಕ ನಿರ್ಧಿಷ್ಟ ಅಧಿಕಾರಿಯೊಬ್ಬರನ್ನು ನೇಮಿಸಲಾಗುವುದು. ಅವರು ನೋಂದಣಿ ಮಾಡಿಸಲು ಕಛೇರಿಗೆ ಬರುವ ವಲಸೆ ಕಾರ್ಮಿಕರಿಗೆ ಸಲಹೆ ಸೂಚನೆಗಳನ್ನು ನೀಡಿ, ನೆರವು ಒದಗಿಸಬೇಕು ಎಂದು ಆಯುಕ್ತರು ನಿರ್ದೇಶಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT